ಕಾರವಾರ: ಸರ್ಕಾರಿ ಆಸ್ಪತ್ರೆಯ ಔಷಧ ವಿತರಣಾ ಕೇಂದ್ರದಲ್ಲಿದ್ದ ಔಷಧಿ ಡಬ್ಬಿಗಳು ಕಣ್ಮರೆಯಾಗಿದ್ದು, ಆಸ್ಪತ್ರೆಯ ವೈದ್ಯರೊಬ್ಬರು ಅದನ್ನು ಅನಧಿಕೃತವಾಗಿ ಕೊಂಡೊಯ್ದಿರುವುದು ಸಿಸಿ ಕ್ಯಾಮರಾದಲ್ಲಿ ದಾಖಲಾಗಿತ್ತು.ಈ ಸುದ್ದಿಯನ್ನು ಭ್ರಷ್ಟರ ಬೇಟೆ ಪತ್ರಿಕೆ ಜನವರಿ ಸಂಚಿಕೆಯಲ್ಲಿ ಪ್ರಕಟವಾಗಿತ್ತು.ಉತ್ತರ ಕನ್ನಡ ಜಿಲ್ಲಾಧಿಕಾರಿ ಗಳು ಜಿಲ್ಲಾ ಆಯುಷ್ ಸರ್ಕಾರಿ ಆಸ್ಪತ್ರೆಯಲ್ಲಿನ ಔಷಧ ವಿತರಣಾ ಔಷ ದ ಕದ್ದ ಕಳ್ಳ
ವೈದ್ಯ ಡಾ .ಸಂಗಮೇಶ ಪರಂಡಿಯನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿನ ಔಷಧ ವಿತರಣಾ ಕೇಂದ್ರದಲ್ಲಿದ್ದ ದಾಸ್ತಾನು ಹಾಗೂ ರಿಜಿಸ್ಟರ್ ಪುಸ್ತಕದಲ್ಲಿದ್ದ ಔಷಧಿ ನಡುವೆ ವ್ಯತ್ಯಾಸ ಕಂಡು ಬಂದಿತ್ತು. ಈ ಬಗ್ಗೆ ಪರಿಶೀಲಿಸಿದಾಗ ಡಿಸೆಂಬರ್ 10ರಂದು ಆಸ್ಪತ್ರೆಯ ವೈದ್ಯ ಡಾ ಸಂಗಮೇಶ ಪರಂಡಿ ಅನಧಿಕೃತವಾಗಿ ಔಷಧಿಗಳನ್ನು ಒಯ್ದಿರುವುದು ಪತ್ತೆಯಾಗಿತ್ತು. 25ರಷ್ಟು ಚೂರ್ಣದ ಡಬ್ಬಿಯನ್ನು ಅವರು ಒಯ್ದಿದ್ದರು. ಅವರು ಅದನ್ನು ಯಾವ ಉದ್ದೇಶಕ್ಕೆ ಒಯ್ದರು? ಯಾರಿಗೆ ವಿತರಿಸಿದರು? ಎಂದು ಮೇಲಧಿಕಾರಿಗಳು ಪ್ರಶ್ನಿಸಿದರೂ ಯಾವುದಕ್ಕೂ ಕ್ಯಾರೆ ಮಾಡದೆ ಏನು ಉತ್ತರಿಸಿರಲಿಲ್ಲ.
ಆಸ್ಪತ್ರೆಯ ಔಷಧ ನಾಪತ್ತೆಯಾಗಿರುವುದರಿಂದ ಔಷಧ ಸಂಗ್ರಹಣೆಯಲ್ಲಿ ತೊಂದರೆಯಾಗುವುದು, ರೋಗಿಗಳ ಅಗತ್ಯಕ್ಕೆ ತಕ್ಕ ಹಾಗೇ ಔಷಧ ನೀಡಲು ಆಗದಿರುವ ಬಗ್ಗೆ ಮೇಲಧಿಕಾರಿಗಳು ಸರ್ಕಾರಕ್ಕೆ ದೂರು ಸಲ್ಲಿಸಿದ್ದರು. ಈ ಹಿನ್ನಲೆ ಡಾ ಸಂಗಮೇಶ್ ಅವರಿಗೆ ಆಯುಷ್ ಇಲಾಖೆಯ ಆಯುಕ್ತರಿಂದ ನೋಟಿಸ್ ಜಾರಿಯಾಗಿತ್ತು.
ಆಯುಷ್ ಇಲಾಖೆ ಔಷಧಗಳು ಹಾಳಾಗಿರುವುದು ಹಾಗೂ ಅದನ್ನು ಸುಟ್ಟು ನಾಶ ಮಾಡಿದ ಬಗ್ಗೆ ಡಾ ಸಂಗಮೇಶ ಅವರು ಈ ಹಿಂದೆ ಸರ್ಕಾರಕ್ಕೆ ದೂರು ಸಲ್ಲಿಸಿದ್ದು, ಆ ಬಗ್ಗೆಯೂ ನೋಟಿಸ್ ಮೂಲಕ ಪ್ರಶ್ನಿಸಲಾಗಿದೆ. ಇದೇ ರೀತಿ ವರ್ತನೆ ಮುಂದುವರೆದರೆ ಸೇವೆಯಿಂದಲೇ ವಜಾ ಮಾಡುವ ಬಗ್ಗೆಯೂ ಆಯುಷ್ ಆಯುಕ್ತರು ಎಚ್ಚರಿಕೆ ನೀಡಿದ್ದರು. ಆಯುಷ್ ಇಲಾಖೆಯಲ್ಲಿನ ಔಷಧಿಗಳ ಬಗ್ಗೆ ಡಾ ಸಂಗಮೇಶ್ ಅವರು ಆಕ್ಷೇಪ ವ್ಯಕ್ತಪಡಿಸಿದ್ದರು.ಈ ಹಿಂದೆ ತಾನೇ ಈ ಡಾಕ್ಟರ ಸಂಗಮೇಶ ಔಷಧಿಗಳನ್ನು ಅನಧಿಕೃತವಾಗಿ ಸುಟ್ಟು ಹಾಕಿ , ಬೆರೆಯವರ ಮೇಲೆ ಸುಳ್ಳು ದೂರು ಸಲ್ಲಿಸಿದ್ದರು. ಈಗ ಆ ಕೇಸ ಕೂಡ ಇವರ ಬುಡಕ್ಕೆ ಬಂದಿದ್ದು ಜಿಲ್ಲಾಧಿಕಾರಿಗಳ ಅಧಿಕೃತ ಆದೇಶ ಮಾತ್ರ ಭಾಕಿ ಇತ್ತು. ಇದಾದ ನಂತರ ಡಾ ಸಂಗಮೇಶ ಅವರ ಮೇಲೆ ರೋಗಿಯೊಬ್ಬರು ಹಲ್ಲೆ ನಡೆಸಿ ಅವರು ಆಸ್ಪತ್ರೆಗೆ ಸಹ ದಾಖಲಾಗಿದ್ದರು.ಪ್ರಕಟವಾಗಿತ್ತು.ಉತ್ತರ ಕನ್ನಡ ಜಿಲ್ಲಾಧಿಕಾರಿ ಗಳು ಜಿಲ್ಲಾ ಆಯುಷ್ ಸರ್ಕಾರಿ ಆಸ್ಪತ್ರೆಯಲ್ಲಿನ ಔಷಧ ವಿತರಣಾ ಔಷ ದ ಕದ್ದ ಕಳ್ಳ
ವೈದ್ಯ ಡಾ .ಸಂಗಮೇಶ ಪರಂಡಿಯನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…
ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್ನಿಂದ ಹಣ ಪಡೆದು ಹೊರಬಂದ…
ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…
ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…
ಪ್ರಯಾಗ್ರಾಜ್: ಡೇಟಿಂಗ್ ಆ್ಯಪ್ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…