Categories: Latest

ಜಿಲ್ಲಾ ಆಯುಷ್ ಸರ್ಕಾರಿ ಆಸ್ಪತ್ರೆಯಲ್ಲಿನ ಔಷಧ ವಿತರಣಾ ಕೇಂದ್ರದಲ್ಲಿದ್ದ ಔಷಧಿ ಕದ್ದ ಕಳ್ಳ ಡಾಕ್ಟರ ಅಮಾನತು.

ಕಾರವಾರ: ಸರ್ಕಾರಿ ಆಸ್ಪತ್ರೆಯ ಔಷಧ ವಿತರಣಾ ಕೇಂದ್ರದಲ್ಲಿದ್ದ ಔಷಧಿ ಡಬ್ಬಿಗಳು ಕಣ್ಮರೆಯಾಗಿದ್ದು, ಆಸ್ಪತ್ರೆಯ ವೈದ್ಯರೊಬ್ಬರು ಅದನ್ನು ಅನಧಿಕೃತವಾಗಿ ಕೊಂಡೊಯ್ದಿರುವುದು ಸಿಸಿ ಕ್ಯಾಮರಾದಲ್ಲಿ ದಾಖಲಾಗಿತ್ತು.ಈ ಸುದ್ದಿಯನ್ನು ಭ್ರಷ್ಟರ ಬೇಟೆ ಪತ್ರಿಕೆ ಜನವರಿ ಸಂಚಿಕೆಯಲ್ಲಿ ಪ್ರಕಟವಾಗಿತ್ತು.ಉತ್ತರ ಕನ್ನಡ ಜಿಲ್ಲಾಧಿಕಾರಿ ಗಳು ಜಿಲ್ಲಾ ಆಯುಷ್ ಸರ್ಕಾರಿ ಆಸ್ಪತ್ರೆಯಲ್ಲಿನ ಔಷಧ ವಿತರಣಾ ಔಷ ದ ಕದ್ದ ಕಳ್ಳ
ವೈದ್ಯ ಡಾ .ಸಂಗಮೇಶ ಪರಂಡಿಯನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿನ ಔಷಧ ವಿತರಣಾ ಕೇಂದ್ರದಲ್ಲಿದ್ದ ದಾಸ್ತಾನು ಹಾಗೂ ರಿಜಿಸ್ಟರ್ ಪುಸ್ತಕದಲ್ಲಿದ್ದ ಔಷಧಿ ನಡುವೆ ವ್ಯತ್ಯಾಸ ಕಂಡು ಬಂದಿತ್ತು. ಈ ಬಗ್ಗೆ ಪರಿಶೀಲಿಸಿದಾಗ ಡಿಸೆಂಬರ್ 10ರಂದು ಆಸ್ಪತ್ರೆಯ ವೈದ್ಯ ಡಾ ಸಂಗಮೇಶ ಪರಂಡಿ ಅನಧಿಕೃತವಾಗಿ ಔಷಧಿಗಳನ್ನು ಒಯ್ದಿರುವುದು ಪತ್ತೆಯಾಗಿತ್ತು. 25ರಷ್ಟು ಚೂರ್ಣದ ಡಬ್ಬಿಯನ್ನು ಅವರು ಒಯ್ದಿದ್ದರು. ಅವರು ಅದನ್ನು ಯಾವ ಉದ್ದೇಶಕ್ಕೆ ಒಯ್ದರು? ಯಾರಿಗೆ ವಿತರಿಸಿದರು? ಎಂದು ಮೇಲಧಿಕಾರಿಗಳು ಪ್ರಶ್ನಿಸಿದರೂ ಯಾವುದಕ್ಕೂ ಕ್ಯಾರೆ ಮಾಡದೆ ಏನು ಉತ್ತರಿಸಿರಲಿಲ್ಲ.

ಆಸ್ಪತ್ರೆಯ ಔಷಧ ನಾಪತ್ತೆಯಾಗಿರುವುದರಿಂದ ಔಷಧ ಸಂಗ್ರಹಣೆಯಲ್ಲಿ ತೊಂದರೆಯಾಗುವುದು, ರೋಗಿಗಳ ಅಗತ್ಯಕ್ಕೆ ತಕ್ಕ ಹಾಗೇ ಔಷಧ ನೀಡಲು ಆಗದಿರುವ ಬಗ್ಗೆ ಮೇಲಧಿಕಾರಿಗಳು ಸರ್ಕಾರಕ್ಕೆ ದೂರು ಸಲ್ಲಿಸಿದ್ದರು. ಈ ಹಿನ್ನಲೆ ಡಾ ಸಂಗಮೇಶ್ ಅವರಿಗೆ ಆಯುಷ್ ಇಲಾಖೆಯ ಆಯುಕ್ತರಿಂದ ನೋಟಿಸ್ ಜಾರಿಯಾಗಿತ್ತು.

ಆಯುಷ್ ಇಲಾಖೆ ಔಷಧಗಳು ಹಾಳಾಗಿರುವುದು ಹಾಗೂ ಅದನ್ನು ಸುಟ್ಟು ನಾಶ ಮಾಡಿದ ಬಗ್ಗೆ ಡಾ ಸಂಗಮೇಶ ಅವರು ಈ ಹಿಂದೆ ಸರ್ಕಾರಕ್ಕೆ ದೂರು ಸಲ್ಲಿಸಿದ್ದು, ಆ ಬಗ್ಗೆಯೂ ನೋಟಿಸ್ ಮೂಲಕ ಪ್ರಶ್ನಿಸಲಾಗಿದೆ. ಇದೇ ರೀತಿ ವರ್ತನೆ ಮುಂದುವರೆದರೆ ಸೇವೆಯಿಂದಲೇ ವಜಾ ಮಾಡುವ ಬಗ್ಗೆಯೂ ಆಯುಷ್ ಆಯುಕ್ತರು ಎಚ್ಚರಿಕೆ ನೀಡಿದ್ದರು. ಆಯುಷ್ ಇಲಾಖೆಯಲ್ಲಿನ ಔಷಧಿಗಳ ಬಗ್ಗೆ ಡಾ ಸಂಗಮೇಶ್ ಅವರು ಆಕ್ಷೇಪ ವ್ಯಕ್ತಪಡಿಸಿದ್ದರು.ಈ ಹಿಂದೆ ತಾನೇ ಈ ಡಾಕ್ಟರ ಸಂಗಮೇಶ ಔಷಧಿಗಳನ್ನು ಅನಧಿಕೃತವಾಗಿ ಸುಟ್ಟು ಹಾಕಿ , ಬೆರೆಯವರ ಮೇಲೆ ಸುಳ್ಳು ದೂರು ಸಲ್ಲಿಸಿದ್ದರು. ಈಗ ಆ ಕೇಸ ಕೂಡ ಇವರ ಬುಡಕ್ಕೆ ಬಂದಿದ್ದು ಜಿಲ್ಲಾಧಿಕಾರಿಗಳ ಅಧಿಕೃತ ಆದೇಶ ಮಾತ್ರ ಭಾಕಿ ಇತ್ತು. ಇದಾದ ನಂತರ ಡಾ ಸಂಗಮೇಶ ಅವರ ಮೇಲೆ ರೋಗಿಯೊಬ್ಬರು ಹಲ್ಲೆ ನಡೆಸಿ ಅವರು ಆಸ್ಪತ್ರೆಗೆ ಸಹ ದಾಖಲಾಗಿದ್ದರು.ಪ್ರಕಟವಾಗಿತ್ತು.ಉತ್ತರ ಕನ್ನಡ ಜಿಲ್ಲಾಧಿಕಾರಿ ಗಳು ಜಿಲ್ಲಾ ಆಯುಷ್ ಸರ್ಕಾರಿ ಆಸ್ಪತ್ರೆಯಲ್ಲಿನ ಔಷಧ ವಿತರಣಾ ಔಷ ದ ಕದ್ದ ಕಳ್ಳ
ವೈದ್ಯ ಡಾ .ಸಂಗಮೇಶ ಪರಂಡಿಯನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

nazeer ahamad

Recent Posts

ಅತ್ತಿಗೆ ಜೊತೆಗಿನ ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಅಣ್ಣ ;ಕಾಡಿಗೆ ಕರೆದೊಯ್ದು ತಮ್ಮನಿಂದ ಭೀಕರ ಕೊಲೆ..!

ಉತ್ತರ ಕನ್ನಡ: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಅಣ್ಣನನ್ನೇ ತಮ್ಮ ಹತ್ಯೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ…

59 minutes ago

ಗದಗದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ಖಾಸಗಿ ದೂರು; ಎಫ್‌ಐಆರ್ ವಿಳಂಬ ಆರೋಪ

ಗದಗ ಜಿಲ್ಲೆಯ ಡಿವೈಎಸ್ಪಿ ಮುರ್ತುಜಾ ಖಾದ್ರಿ ಮತ್ತು ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ಸಿದ್ದರಾಮೇಶ್ವರ ಗಡದ ವಿರುದ್ಧ ಗದಗ ಜೆಎಂಎಫ್‌ಸಿ…

2 hours ago

ರಾಪಿಡೋ, ಓಲಾ, ಉಬರ್ ಬೈಕ್ ಟ್ಯಾಕ್ಸಿ ಸೇವೆ ನಿಷೇಧಕ್ಕೆ ಆಗ್ರಹ; ಜಿಲ್ಲಾಧಿಕಾರಿಗೆ ಶಿರಸಿ ಆಟೋ ಚಾಲಕರ ಸಂಘ ಮನವಿ

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಓಲಾ, ಉಬರ್ ಹಾಗೂ ರಾಪಿಡೋ ಬೈಕ್ ಟ್ಯಾಕ್ಸಿ ಸೇವೆಗಳನ್ನು ತಕ್ಷಣವೇ ನಿಷೇಧಿಸಬೇಕು ಎಂದು ಆಗ್ರಹಿಸಿ…

2 hours ago

ಶಿರಸಿ ಬಸ್ ನಿಲ್ದಾಣದಲ್ಲಿ 1.59 ಲಕ್ಷ ರೂ. ಚಿನ್ನಾಭರಣ ಕಳವು ಪ್ರಕರಣ ಭೇದಿಸಿದ ಪೊಲೀಸರು; ಬೆಂಗಳೂರು ಮೂಲದ ಮಹಿಳೆ ಬಂಧನ

ಶಿರಸಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಬ್ಯಾಗ್‌ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣವನ್ನು ಶಿರಸಿ ನಗರ…

2 hours ago

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

21 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

1 day ago