ರೋಣ ತಾಲೂಕು ಜಕ್ಕಲಿ ಗ್ರಾಮದ ಸಂಗೊಳ್ಳಿ ರಾಯಣ್ಣ ವೃತ್ತದ ಪಕ್ಕದಲ್ಲಿರುವ ಮುಖ್ಯ ಚರಂಡಿಯಲ್ಲಿ ಸಾಕಷ್ಟು ಹೂಳು ತುಂಬಿಕೊಂಡಿದ್ದು ಸೂಕ್ತವಾದ ಸ್ವಚ್ಛತೆ ಇಲ್ಲದೆ ಕೊಳಚೆ ನೀರು ಅಲ್ಲೇ ನಿಂತು ಗಬ್ಬುನಾರುತ್ತಿದೆ. ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಗ್ರಾಮಸ್ಥರು ಸಾಂಕ್ರಾಮಿಕ ರೋಗಗಳ ಭೀತಿ ಎದುರಿಸುವಂತ ಪರಿಸ್ಥಿತಿ ನಿರ್ಮಾಣವಾಗಿದೆ.
ಗ್ರಾಮದ 5 ನೇ ವಾರ್ಡಿನಲ್ಲಿ ಈ ಚರಂಡಿಯ ಪಕ್ಕದಲ್ಲಿ ಕುಡಿಯುವ ನೀರಿನ ಘಟನೆ ನಿರ್ಮಾಣವಾಗಿದ್ದು, ಜನರು ನೀರು ತರಲು ಪ್ರತಿನಿತ್ಯ ಬರುತ್ತಿದ್ದು, ಚರಂಡಿ ದುರ್ವಾಸನೆಯಿಂದ ಮುಗೂ ಮುಚ್ಚಿಕೊಂಡು ಓಡಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಆ ವಾರ್ಡಿನ ಸದಸ್ಯರು ಹಾಗೂ ಸಾರ್ವಜನಿಕರು ಸ್ವಚ್ಛತೆ ಮಾಡಿಸಿ ಎಂದು ಅಧಿಕಾರಿಗಳ ಗಮನಕ್ಕೆ ತಂದರು ಇತ್ತ ಸ್ವಚ್ಛತೆ ಕಡೆ ಗಮನಹರಿಸುತ್ತಿಲ್ಲ ಎಂದು ಗ್ರಾಮಸ್ಥರು ಅಕ್ರೋಶ ವ್ಯಕ್ತಪಡಿಸಿದರು. ಗ್ರಾಮದಲ್ಲಿ ಹಲವಾರು ಸಮಸ್ಯೆಗಳು ಇದ್ದು, ಗ್ರಾ.ಪಂ.ಅಧಿಕಾರಿಗಳು ಅಭಿವೃದ್ಧಿ ಕಡೆ ಗಮನಹರಿಸದೇ ಇರುವುದು ವಿಪರ್ಯಾಸ. ವರದಿ ಕಂಡ ಮೇಲಾದರೂ ಅಧಿಕಾರಿಗಳು ಎಚ್ಚೆತ್ತು ಕೊಳ್ಳುವರಾ ಇಲ್ಲವಾ ಕಾದು ನೋಡೋಣ.
ಬಾಂಗ್ಲಾದೇಶದ ಕಿಶೋರ್ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…
ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…
66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…
ಹರಿಯಾಣದ ಚರ್ಕಿ ದಾದ್ರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಮಾನವ ಸಂಬಂಧಗಳನ್ನೇ ಪ್ರಶ್ನಿಸುವಂತೆ ಮಾಡಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ,…
ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…