Categories: LatestPolitics

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬೆಳವಣಿಗೆಯನ್ನು ಸಹಿಸದೇ ಈ ರೀತಿಯ ನಾಟಕ ಮಾಡುತ್ತಿದ್ದಾರೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಆರೋಪಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಡದಿ ಟೌನ್‌ಶಿಪ್ ಯೋಜನೆ ಹೊಸದೇನಲ್ಲ. ಈ ಯೋಜನೆಗೆ ಚಾಲನೆ ನೀಡಿದ್ದವರು ಸ್ವತಃ ಹೆಚ್.ಡಿ. ಕುಮಾರಸ್ವಾಮಿ ಅವರೇ ಆಗಿದ್ದಾರೆ. ಆಗ ಬೆಂಬಲಿಸಿದ್ದ ಯೋಜನೆಗೆ ಇದೀಗ ವಿರೋಧ ವ್ಯಕ್ತಪಡಿಸುತ್ತಿರುವುದು ಅಚ್ಚರಿಯ ಸಂಗತಿ ಎಂದು ಪ್ರಶ್ನಿಸಿದರು.

ಯೋಜನೆಯ ವ್ಯಾಪ್ತಿಯಲ್ಲಿ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರಿಗೆ ಸೇರಿದ ಸುಮಾರು 100 ಎಕರೆ ಜಮೀನೂ ಸೇರಿದೆ. ಹೀಗಿದ್ದರೂ ಯೋಜನೆ ವಿರುದ್ಧ ಈಗ ಧ್ವನಿ ಎತ್ತುತ್ತಿರುವುದು ಕೇವಲ ರಾಜಕೀಯ ಕಾರಣಗಳಿಂದಲೇ ಎಂದು ಪಾಟೀಲ್ ಟೀಕಿಸಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಒಕ್ಕಲಿಗ ಸಮುದಾಯದಲ್ಲಿ ಪ್ರಭಾವಿ ನಾಯಕನಾಗಿ ಹೊರಹೊಮ್ಮುತ್ತಿರುವುದನ್ನು ಸಹಿಸದೇ ಕುಮಾರಸ್ವಾಮಿ ಈ ವಿಷಯವನ್ನು ರಾಜಕೀಯ ಅಸ್ತ್ರವಾಗಿ ಬಳಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ರೈತರಿಂದ ನಿಜವಾದ ವಿರೋಧ ವ್ಯಕ್ತವಾದರೆ ಅದನ್ನು ಪರಿಗಣಿಸಬಹುದು. ಆದರೆ, ಈ ಪ್ರಕರಣದಲ್ಲಿ ಕಾಣಿಸುತ್ತಿರುವ ವಿರೋಧ ರಾಜಕೀಯ ಉದ್ದೇಶದಿಂದ ಕೂಡಿದ್ದು, ಜನರನ್ನು ದಾರಿ ತಪ್ಪಿಸುವ ಪ್ರಯತ್ನವಾಗಿದೆ ಎಂದು ಹೇಳಿದರು.

ತಮ್ಮ ಆಡಳಿತಾವಧಿಯಲ್ಲಿ ಯೋಜನೆಗೆ ಅನುಮೋದನೆ ನೀಡಿದ್ದ ಕುಮಾರಸ್ವಾಮಿ ಅವರು ಆಗಲೇ ಅಧಿಸೂಚನೆಯನ್ನು ಹಿಂಪಡೆಯುವ ಅವಕಾಶ ಹೊಂದಿದ್ದರು. ಆದರೆ ಹಾಗೆ ಮಾಡದೇ ಇದೀಗ ರಾಜಕೀಯ ಲಾಭಕ್ಕಾಗಿ ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯಲ್ಲ ಎಂದು ಎಂ.ಬಿ. ಪಾಟೀಲ್ ವಾಗ್ದಾಳಿ ನಡೆಸಿದರು.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

14 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

14 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

14 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

14 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

14 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

14 hours ago