ಕಾರಿನಲ್ಲಿ ಸಿಗ್ನಲ್ ಜಂಪ್ ಮಾಡಿದ ಕಾರಣ ಪೊಲೀಸ್ ವಾಹನವನ್ನು ತಡೆದು ತಪಾಸಣೆಗೆ ಮುಂದಾಗುವಂತಹ ಸಂದರ್ಭದಲ್ಲಿ ಚಾಲಕ ವಾಹನವನ್ನು ನಿಲ್ಲಿಸದೆ ಕಾರಿನ ಬ್ಯಾನೆಟ್ ಮೇಲೆ ಬಿದ್ದ ಪೊಲೀಸನನ್ನು ಎಳೆದೊಯ್ದಿರುವ ಘಟನೆ ಕೇರಳದಲ್ಲಿ ನಡೆದಿದೆ.
ಕೇರಳದ ಪಾಲ್ಘರ್ ಜಿಲ್ಲೆಯ ವಸಾಯಿಯಲ್ಲಿ ಕಾರೊಂದು ಸಿಗ್ನಲ್ ಜಂಪ್ ಮಾಡಿದ್ದನ್ನು ಕಂಡ ಸಂಚಾರಿ ಪೊಲೀಸ್ ತಡೆದು ಪರೀಕ್ಷಿಸಲು ಮುಂದಾಗಿದ್ದಾನೆ. ಈ ಸಂದರ್ಭದಲ್ಲಿ ಚಾಲಕ ವಾಹನವನ್ನು ನಿಲ್ಲಿಸದೆ ಪೊಲೀಸನನ್ನು ಗುದ್ದಿಕೊಂಡು ಚಲಾಯಿಸಲು ಮುಂದಾಗಿದ್ದಾನೆ. ಪೊಲೀಸ್ ಕಾರಿನ ಬ್ಯಾನೆಟ್ ಮೇಲೆ ಬಿದ್ದಿದ್ದು ಸುಮಾರು 1.5 ಕಿಲೋಮೀಟರ್ ದೂರದಷ್ಟು ಚಾಲಕ ಪೊಲೀಸನನ್ನು ಎಳೆದೊಯ್ದಿದ್ದಾನೆ. ನಂತರ ಸ್ಥಳೀಯರು ವಾಹನವನ್ನು ಅಡಗಟ್ಟಿ ನಿಲ್ಲಿಸಿದ್ದಾರೆ. ಕಾರಿಗೆ ಉತ್ತರ ಪ್ರದೇಶದ ನಂಬರ್ ಪ್ಲೇಟ್ ಹಾಕಲಾಗಿತ್ತು ಮತ್ತು ಸಿಗ್ನಲ್ ಜಂಪ್ ಮಾಡಿದ್ದ ಹಾಗೂ ಚಲಾಯಿಸುತ್ತಿದ್ದ ವ್ಯಕ್ತಿಯು 19 ವಯಸ್ಸಿನ ಹುಡುಗನಾಗಿದ್ದ ಹಾಗೂ ಆತನ ಬಳಿ ಪರವನಿಗೆ ಇರಲಿಲ್ಲ ಆದಕಾರಣ ಭಯದಲ್ಲಿ ಈ ರೀತಿ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ. ಈ ವಿಚಾರವಾಗಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿರುತ್ತದೆ.
ಮೈಸೂರು ನಗರದ ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ…
ಬೆಂಗಳೂರಿನ ಜಯನಗರದಲ್ಲಿ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಬಳಸಿ ಹಣದ ಬೇಡಿಕೆ ಇಟ್ಟ ಆರೋಪದಡಿ ಸಾಧನಾ ಶೆಟ್ಟಿ ವಿರುದ್ಧ ಎಫ್ಐಆರ್…
ಛತ್ತರ್ಪುರದಲ್ಲಿ ಗುರುವಾರ ನಡೆದ ಒಂದು ಅಚ್ಚರಿಯ ಘಟನೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಚಲಿಸುತ್ತಿದ್ದ ಆಂಬ್ಯುಲೆನ್ಸ್ನೊಳಗೆ ಯುವತಿ ಹಾಗೂ ಇಬ್ಬರು…
ಇತ್ತೀಚಿನ ದಿನಗಳಲ್ಲಿ ಮದುವೆ ವ್ಯವಸ್ಥೆಯು ಹಲವಾರು ಬದಲಾವಣೆಗಳನ್ನು ಕಂಡಿದೆ. ವಧು-ವರರ ಹುಡುಕಾಟ ಹೆಚ್ಚಾಗಿ ಮ್ಯಾಟ್ರಿಮೋನಿ ವೆಬ್ಸೈಟ್ಗಳ ಮೂಲಕ ನಡೆಯುತ್ತಿದ್ದು, ಕೆಲವೊಮ್ಮೆ…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ…
ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಮದುವೆಯ ಕನಸು ಕಂಡಿದ್ದ ಯುವತಿಯೊಬ್ಬಳು, ಭಾವಿ ಪತಿಯ ವರ್ತನೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ…