ಕಾರಿನಲ್ಲಿ ಸಿಗ್ನಲ್ ಜಂಪ್ ಮಾಡಿದ ಕಾರಣ ಪೊಲೀಸ್ ವಾಹನವನ್ನು ತಡೆದು ತಪಾಸಣೆಗೆ ಮುಂದಾಗುವಂತಹ ಸಂದರ್ಭದಲ್ಲಿ ಚಾಲಕ ವಾಹನವನ್ನು ನಿಲ್ಲಿಸದೆ ಕಾರಿನ ಬ್ಯಾನೆಟ್ ಮೇಲೆ ಬಿದ್ದ ಪೊಲೀಸನನ್ನು ಎಳೆದೊಯ್ದಿರುವ ಘಟನೆ ಕೇರಳದಲ್ಲಿ ನಡೆದಿದೆ.
ಕೇರಳದ ಪಾಲ್ಘರ್ ಜಿಲ್ಲೆಯ ವಸಾಯಿಯಲ್ಲಿ ಕಾರೊಂದು ಸಿಗ್ನಲ್ ಜಂಪ್ ಮಾಡಿದ್ದನ್ನು ಕಂಡ ಸಂಚಾರಿ ಪೊಲೀಸ್ ತಡೆದು ಪರೀಕ್ಷಿಸಲು ಮುಂದಾಗಿದ್ದಾನೆ. ಈ ಸಂದರ್ಭದಲ್ಲಿ ಚಾಲಕ ವಾಹನವನ್ನು ನಿಲ್ಲಿಸದೆ ಪೊಲೀಸನನ್ನು ಗುದ್ದಿಕೊಂಡು ಚಲಾಯಿಸಲು ಮುಂದಾಗಿದ್ದಾನೆ. ಪೊಲೀಸ್ ಕಾರಿನ ಬ್ಯಾನೆಟ್ ಮೇಲೆ ಬಿದ್ದಿದ್ದು ಸುಮಾರು 1.5 ಕಿಲೋಮೀಟರ್ ದೂರದಷ್ಟು ಚಾಲಕ ಪೊಲೀಸನನ್ನು ಎಳೆದೊಯ್ದಿದ್ದಾನೆ. ನಂತರ ಸ್ಥಳೀಯರು ವಾಹನವನ್ನು ಅಡಗಟ್ಟಿ ನಿಲ್ಲಿಸಿದ್ದಾರೆ. ಕಾರಿಗೆ ಉತ್ತರ ಪ್ರದೇಶದ ನಂಬರ್ ಪ್ಲೇಟ್ ಹಾಕಲಾಗಿತ್ತು ಮತ್ತು ಸಿಗ್ನಲ್ ಜಂಪ್ ಮಾಡಿದ್ದ ಹಾಗೂ ಚಲಾಯಿಸುತ್ತಿದ್ದ ವ್ಯಕ್ತಿಯು 19 ವಯಸ್ಸಿನ ಹುಡುಗನಾಗಿದ್ದ ಹಾಗೂ ಆತನ ಬಳಿ ಪರವನಿಗೆ ಇರಲಿಲ್ಲ ಆದಕಾರಣ ಭಯದಲ್ಲಿ ಈ ರೀತಿ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ. ಈ ವಿಚಾರವಾಗಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿರುತ್ತದೆ.
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…