Latest

ಕ್ರೂಸರ್ ವಾಹನದಲ್ಲಿ ಸುಮಾರು 35 ವಿದ್ಯಾರ್ಥಿಗಳನ್ನು ತುಂಬಿಕೊಂಡು ಹೋಗುತ್ತಿರುವ ಚಾಲಕ!

ಮುಂಡಗೋಡ: ತಾಲೂಕಿನ ಚಿಗಳ್ಳಿ ಗ್ರಾಮದಲ್ಲಿ ಇರುವ ಅನುದಾನರಹಿತ ಶಾಲೆಯಾದ ಹುಲಿಗೆಮ್ಮದೇವಿ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ ಬರುವ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರಲು ಮತ್ತು ಆ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲು ಕ್ರೂಜರ್ ವಾಹನದ ವ್ಯವಸ್ಥೆಯಿದ್ದು ಕ್ರೂಜರ್ ವಾಹನದಲ್ಲಿ ಗರಿಷ್ಠ 15ರಿಂದ 18 ಜನರನ್ನು ಹಾಕಬಹುದು ಆದರೆ ಈ ವಾಹನದ ಚಾಲಕ ಸುಮಾರು 35 ಶಾಲಾ ವಿದ್ಯಾರ್ಥಿಗಳನ್ನು ಕುರಿಗಳಂತೆ ತುಂಬಿಕೊಂಡು ಸಾಗಿಸುತ್ತಿದ್ದಾನೆ.ಮತ್ತು ಈ ಗ್ರಾಮೀಣಾಭಿವೃದ್ಧಿ ಸಂಸ್ಥೆಯಡಿಯಲ್ಲಿ ನಡೆಯುವ ಶಾಲೆಯು ಕನಿಷ್ಠ ಮೂಲಭೂತ ಸೌಲಭ್ಯಗಳನ್ನು ಹೊಂದಿಲ್ಲ, ಹಾಗೂ ಆಡಳಿತ ಮಂಡಳಿ ವರ್ಷಕ್ಕೆ ಎರಡು ಮೂರು ಬಾರಿ ಶಾಲೆಯ ಕೊಠಡಿಗಳನ್ನು ಬದಲಾವಣೆ ಮಾಡಿ ಮಕ್ಕಳಿಗೆ ತೊಂದರೆಯನ್ನು ಸಹ ಮಾಡುತ್ತಿದೆ ಎಂದು ದೂರುಗಳಿವೆ.ಪ್ರಸ್ತುತ ಈ ಶಾಲೆಯು ಒಂದು ಖಾಸಗಿ ಮನೆಯಲ್ಲಿ ನಡೆಯುತ್ತಿದ್ದು, ಇಲ್ಲಿ ಒಂದರಿಂದ ನಾಲ್ಕನೆಯ ತರಗತಿಯವರೆಗೆ ಪಾಠಗಳನ್ನು ಬೋಧಿಸಲಾಗುತ್ತಿದೆ.ಹಾಗೂ ವಿದ್ಯಾರ್ಥಿಗಳಿಗೆ ಶೌಚಾಲಯ ವ್ಯವಸ್ಥೆಯೂ ಇಲ್ಲದ, ಒಂದೇ ಮನೆಯಲ್ಲಿ ನಾಲ್ಕು ತರಗತಿಗಳನ್ನು ನಡೆಸಲು ಇವರಿಗೆ ಅನುಮತಿಯನ್ನು ಕೊಟ್ಟವರ್ಯಾರು?ಹಾಗೆಯೇ ಒಂದೇ ವಾಹನದಲ್ಲಿ ಸುಮಾರು 35 ವಿದ್ಯಾರ್ಥಿಗಳನ್ನು ಕುರಿಗಳಂತೆ ವಾಹನದಲ್ಲಿ ತುಂಬುತ್ತಿದ್ದರು ಶಾಲಾ ಆಡಳಿತ ಮಂಡಳಿ,ಹಾಗೂ ಶಿಕ್ಷಣ ಇಲಾಖೆ ಕಣ್ಮುಚ್ಚಿ ಕುಳಿತಿರುವುದು ವಿಪರ್ಯಾಸವೇ ಸರಿ.
ಈ ಶಾಲೆಯು ಕನ್ನಡ ಮಾಧ್ಯಮದಲ್ಲಿ ಬೋಧಿಸಲು ಪರವಾನಿಗೆ ಪಡೆದು, ಆಂಗ್ಲಮಾಧ್ಯಮದಲ್ಲಿ ಬೋಧನೆಯನ್ನು ಮಾಡುತ್ತಿದೆ ಎಂಬ ಮಾತುಗಳು ಸಹ ಕೇಳಿಬರುತ್ತಿವೆ.ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವರೇ ಎಂದು ಕಾಯ್ದು ನೋಡಬೇಕಿದೆ.
ವರದಿ: ಕುಮಾರ ರಾಠೋಡ

ಭ್ರಷ್ಟರ ಬೇಟೆ

Recent Posts

ವಡ್ಡಗೆರೆ ವೀರನಾಗಮ್ಮ ದೇವಸ್ಥಾನದಲ್ಲಿ ಕಳ್ಳತನ

ತುಮಕೂರು ಜಿಲ್ಲೆ, ಕೊರಟಗೆರೆ ತಾಲೂಕಿನ ವಡ್ಡಗೆರೆ ಗ್ರಾಮದಲ್ಲಿರುವ ಪ್ರಸಿದ್ಧ ಶ್ರೀ ವಡ್ಡಗೆರೆ ವೀರನಾಗಮ್ಮ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ…

2 days ago

ಬಾಗಲಕೋಟೆ ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…

1 week ago

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

3 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

3 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

4 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

1 month ago