ಮುಂಡಗೋಡ: ತಾಲೂಕಿನ ಚಿಗಳ್ಳಿ ಗ್ರಾಮದಲ್ಲಿ ಇರುವ ಅನುದಾನರಹಿತ ಶಾಲೆಯಾದ ಹುಲಿಗೆಮ್ಮದೇವಿ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ ಬರುವ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರಲು ಮತ್ತು ಆ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲು ಕ್ರೂಜರ್ ವಾಹನದ ವ್ಯವಸ್ಥೆಯಿದ್ದು ಕ್ರೂಜರ್ ವಾಹನದಲ್ಲಿ ಗರಿಷ್ಠ 15ರಿಂದ 18 ಜನರನ್ನು ಹಾಕಬಹುದು ಆದರೆ ಈ ವಾಹನದ ಚಾಲಕ ಸುಮಾರು 35 ಶಾಲಾ ವಿದ್ಯಾರ್ಥಿಗಳನ್ನು ಕುರಿಗಳಂತೆ ತುಂಬಿಕೊಂಡು ಸಾಗಿಸುತ್ತಿದ್ದಾನೆ.ಮತ್ತು ಈ ಗ್ರಾಮೀಣಾಭಿವೃದ್ಧಿ ಸಂಸ್ಥೆಯಡಿಯಲ್ಲಿ ನಡೆಯುವ ಶಾಲೆಯು ಕನಿಷ್ಠ ಮೂಲಭೂತ ಸೌಲಭ್ಯಗಳನ್ನು ಹೊಂದಿಲ್ಲ, ಹಾಗೂ ಆಡಳಿತ ಮಂಡಳಿ ವರ್ಷಕ್ಕೆ ಎರಡು ಮೂರು ಬಾರಿ ಶಾಲೆಯ ಕೊಠಡಿಗಳನ್ನು ಬದಲಾವಣೆ ಮಾಡಿ ಮಕ್ಕಳಿಗೆ ತೊಂದರೆಯನ್ನು ಸಹ ಮಾಡುತ್ತಿದೆ ಎಂದು ದೂರುಗಳಿವೆ.ಪ್ರಸ್ತುತ ಈ ಶಾಲೆಯು ಒಂದು ಖಾಸಗಿ ಮನೆಯಲ್ಲಿ ನಡೆಯುತ್ತಿದ್ದು, ಇಲ್ಲಿ ಒಂದರಿಂದ ನಾಲ್ಕನೆಯ ತರಗತಿಯವರೆಗೆ ಪಾಠಗಳನ್ನು ಬೋಧಿಸಲಾಗುತ್ತಿದೆ.ಹಾಗೂ ವಿದ್ಯಾರ್ಥಿಗಳಿಗೆ ಶೌಚಾಲಯ ವ್ಯವಸ್ಥೆಯೂ ಇಲ್ಲದ, ಒಂದೇ ಮನೆಯಲ್ಲಿ ನಾಲ್ಕು ತರಗತಿಗಳನ್ನು ನಡೆಸಲು ಇವರಿಗೆ ಅನುಮತಿಯನ್ನು ಕೊಟ್ಟವರ್ಯಾರು?ಹಾಗೆಯೇ ಒಂದೇ ವಾಹನದಲ್ಲಿ ಸುಮಾರು 35 ವಿದ್ಯಾರ್ಥಿಗಳನ್ನು ಕುರಿಗಳಂತೆ ವಾಹನದಲ್ಲಿ ತುಂಬುತ್ತಿದ್ದರು ಶಾಲಾ ಆಡಳಿತ ಮಂಡಳಿ,ಹಾಗೂ ಶಿಕ್ಷಣ ಇಲಾಖೆ ಕಣ್ಮುಚ್ಚಿ ಕುಳಿತಿರುವುದು ವಿಪರ್ಯಾಸವೇ ಸರಿ.
ಈ ಶಾಲೆಯು ಕನ್ನಡ ಮಾಧ್ಯಮದಲ್ಲಿ ಬೋಧಿಸಲು ಪರವಾನಿಗೆ ಪಡೆದು, ಆಂಗ್ಲಮಾಧ್ಯಮದಲ್ಲಿ ಬೋಧನೆಯನ್ನು ಮಾಡುತ್ತಿದೆ ಎಂಬ ಮಾತುಗಳು ಸಹ ಕೇಳಿಬರುತ್ತಿವೆ.ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವರೇ ಎಂದು ಕಾಯ್ದು ನೋಡಬೇಕಿದೆ.
ವರದಿ: ಕುಮಾರ ರಾಠೋಡ
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…
ಬೆಂಗಳೂರು: ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು ಮಾಡಿದ್ದ ಆರೋಪದ ಮೇಲೆ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು…