ಮುಂಡಗೋಡ: ತಾಲೂಕಿನ ಚಿಗಳ್ಳಿ ಗ್ರಾಮದಲ್ಲಿ ಇರುವ ಅನುದಾನರಹಿತ ಶಾಲೆಯಾದ ಹುಲಿಗೆಮ್ಮದೇವಿ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ ಬರುವ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರಲು ಮತ್ತು ಆ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲು ಕ್ರೂಜರ್ ವಾಹನದ ವ್ಯವಸ್ಥೆಯಿದ್ದು ಕ್ರೂಜರ್ ವಾಹನದಲ್ಲಿ ಗರಿಷ್ಠ 15ರಿಂದ 18 ಜನರನ್ನು ಹಾಕಬಹುದು ಆದರೆ ಈ ವಾಹನದ ಚಾಲಕ ಸುಮಾರು 35 ಶಾಲಾ ವಿದ್ಯಾರ್ಥಿಗಳನ್ನು ಕುರಿಗಳಂತೆ ತುಂಬಿಕೊಂಡು ಸಾಗಿಸುತ್ತಿದ್ದಾನೆ.ಮತ್ತು ಈ ಗ್ರಾಮೀಣಾಭಿವೃದ್ಧಿ ಸಂಸ್ಥೆಯಡಿಯಲ್ಲಿ ನಡೆಯುವ ಶಾಲೆಯು ಕನಿಷ್ಠ ಮೂಲಭೂತ ಸೌಲಭ್ಯಗಳನ್ನು ಹೊಂದಿಲ್ಲ, ಹಾಗೂ ಆಡಳಿತ ಮಂಡಳಿ ವರ್ಷಕ್ಕೆ ಎರಡು ಮೂರು ಬಾರಿ ಶಾಲೆಯ ಕೊಠಡಿಗಳನ್ನು ಬದಲಾವಣೆ ಮಾಡಿ ಮಕ್ಕಳಿಗೆ ತೊಂದರೆಯನ್ನು ಸಹ ಮಾಡುತ್ತಿದೆ ಎಂದು ದೂರುಗಳಿವೆ.ಪ್ರಸ್ತುತ ಈ ಶಾಲೆಯು ಒಂದು ಖಾಸಗಿ ಮನೆಯಲ್ಲಿ ನಡೆಯುತ್ತಿದ್ದು, ಇಲ್ಲಿ ಒಂದರಿಂದ ನಾಲ್ಕನೆಯ ತರಗತಿಯವರೆಗೆ ಪಾಠಗಳನ್ನು ಬೋಧಿಸಲಾಗುತ್ತಿದೆ.ಹಾಗೂ ವಿದ್ಯಾರ್ಥಿಗಳಿಗೆ ಶೌಚಾಲಯ ವ್ಯವಸ್ಥೆಯೂ ಇಲ್ಲದ, ಒಂದೇ ಮನೆಯಲ್ಲಿ ನಾಲ್ಕು ತರಗತಿಗಳನ್ನು ನಡೆಸಲು ಇವರಿಗೆ ಅನುಮತಿಯನ್ನು ಕೊಟ್ಟವರ್ಯಾರು?ಹಾಗೆಯೇ ಒಂದೇ ವಾಹನದಲ್ಲಿ ಸುಮಾರು 35 ವಿದ್ಯಾರ್ಥಿಗಳನ್ನು ಕುರಿಗಳಂತೆ ವಾಹನದಲ್ಲಿ ತುಂಬುತ್ತಿದ್ದರು ಶಾಲಾ ಆಡಳಿತ ಮಂಡಳಿ,ಹಾಗೂ ಶಿಕ್ಷಣ ಇಲಾಖೆ ಕಣ್ಮುಚ್ಚಿ ಕುಳಿತಿರುವುದು ವಿಪರ್ಯಾಸವೇ ಸರಿ.
ಈ ಶಾಲೆಯು ಕನ್ನಡ ಮಾಧ್ಯಮದಲ್ಲಿ ಬೋಧಿಸಲು ಪರವಾನಿಗೆ ಪಡೆದು, ಆಂಗ್ಲಮಾಧ್ಯಮದಲ್ಲಿ ಬೋಧನೆಯನ್ನು ಮಾಡುತ್ತಿದೆ ಎಂಬ ಮಾತುಗಳು ಸಹ ಕೇಳಿಬರುತ್ತಿವೆ.ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವರೇ ಎಂದು ಕಾಯ್ದು ನೋಡಬೇಕಿದೆ.
ವರದಿ: ಕುಮಾರ ರಾಠೋಡ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…