ಅಥಣಿಯಲ್ಲಿ ದಾರುಣ ಘಟನೆ ನಡೆದಿದೆ, 9 ತಿಂಗಳ ಗರ್ಭಿಣಿ ಮುತ್ತವ್ವ ಸಂತೋಷ ಗೊಳಸಂಗಿ (21) ಮೃತರಾಗಿದ್ದಾರೆ. ಕುಟುಂಬಸ್ಥರು ವೈದ್ಯರ ನಿರ್ಲಕ್ಷ್ಯವೇ ಈ ದುರ್ಘಟನೆಯ ಕಾರಣ ಎಂದು ಆರೋಪಿಸಿದ್ದಾರೆ.

ಮುತ್ತವ್ವ ಅವರಿಗೆ ವೈದ್ಯರು ಈ ತಿಂಗಳ 31 ರಂದು ಹೆರಿಗೆಗೆ ದಿನಾಂಕ ನಿಗದಿಮಾಡಿದ್ದರು. ಆದರೆ, ಎರಡು ದಿನಗಳ ಹಿಂದೆ ಆರೋಗ್ಯದಲ್ಲಿ ಏರುಪೇರಾದ ಕಾರಣ ಅವರು ಅಥಣಿ ತಾಲೂಕಾ ಆಸ್ಪತ್ರೆಗೆ ತಪಾಸಣೆಗೆ ಹೋದರು. ಗುರುವಾರ ಆರೋಗ್ಯವು ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು.

ರಕ್ತದೊತ್ತಡದಲ್ಲಿ ನಿರಂತರ ವ್ಯತ್ಯಾಸ ಕಂಡುಬಂದ ಕಾರಣ ವೈದ್ಯರು ತಕ್ಷಣ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡುವ ನಿರ್ಧಾರ ತೆಗೆದುಕೊಂಡರು. ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಅತಿಯಾದ ರಕ್ತಸ್ರಾವದಿಂದ ಮುತ್ತವ್ವನ ಸ್ಥಿತಿ ಗಂಭೀರವಾಯಿತು. ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲು ವ್ಯವಸ್ಥೆ ಮಾಡಲಾಯಿತು.

ಮಾರ್ಗ ಮಧ್ಯೆ ಮುತ್ತವ್ವ ಹೆಣ್ಣು ಮಗುವಿಗೆ ಜನ್ಮ ನೀಡಿದರೂ, ಅವಳ ಸ್ಥಿತಿ ಕೈಮೀರಿದ್ದು ಕೊನೆಯುಸಿರೆಳೆದರು. ಈ ಘಟನೆ ಸಂಬಂಧ ಕುಟುಂಬಸ್ಥರು ವೈದ್ಯರ ನಿರ್ಲಕ್ಷ್ಯದ ವಿರುದ್ಧ ಕಿಡಿ ಕಾರಿದ್ದಾರೆ.

error: Content is protected !!