ಅಥಣಿಯಲ್ಲಿ ದಾರುಣ ಘಟನೆ ನಡೆದಿದೆ, 9 ತಿಂಗಳ ಗರ್ಭಿಣಿ ಮುತ್ತವ್ವ ಸಂತೋಷ ಗೊಳಸಂಗಿ (21) ಮೃತರಾಗಿದ್ದಾರೆ. ಕುಟುಂಬಸ್ಥರು ವೈದ್ಯರ ನಿರ್ಲಕ್ಷ್ಯವೇ ಈ ದುರ್ಘಟನೆಯ ಕಾರಣ ಎಂದು ಆರೋಪಿಸಿದ್ದಾರೆ.
ಮುತ್ತವ್ವ ಅವರಿಗೆ ವೈದ್ಯರು ಈ ತಿಂಗಳ 31 ರಂದು ಹೆರಿಗೆಗೆ ದಿನಾಂಕ ನಿಗದಿಮಾಡಿದ್ದರು. ಆದರೆ, ಎರಡು ದಿನಗಳ ಹಿಂದೆ ಆರೋಗ್ಯದಲ್ಲಿ ಏರುಪೇರಾದ ಕಾರಣ ಅವರು ಅಥಣಿ ತಾಲೂಕಾ ಆಸ್ಪತ್ರೆಗೆ ತಪಾಸಣೆಗೆ ಹೋದರು. ಗುರುವಾರ ಆರೋಗ್ಯವು ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು.
ರಕ್ತದೊತ್ತಡದಲ್ಲಿ ನಿರಂತರ ವ್ಯತ್ಯಾಸ ಕಂಡುಬಂದ ಕಾರಣ ವೈದ್ಯರು ತಕ್ಷಣ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡುವ ನಿರ್ಧಾರ ತೆಗೆದುಕೊಂಡರು. ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಅತಿಯಾದ ರಕ್ತಸ್ರಾವದಿಂದ ಮುತ್ತವ್ವನ ಸ್ಥಿತಿ ಗಂಭೀರವಾಯಿತು. ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲು ವ್ಯವಸ್ಥೆ ಮಾಡಲಾಯಿತು.
ಮಾರ್ಗ ಮಧ್ಯೆ ಮುತ್ತವ್ವ ಹೆಣ್ಣು ಮಗುವಿಗೆ ಜನ್ಮ ನೀಡಿದರೂ, ಅವಳ ಸ್ಥಿತಿ ಕೈಮೀರಿದ್ದು ಕೊನೆಯುಸಿರೆಳೆದರು. ಈ ಘಟನೆ ಸಂಬಂಧ ಕುಟುಂಬಸ್ಥರು ವೈದ್ಯರ ನಿರ್ಲಕ್ಷ್ಯದ ವಿರುದ್ಧ ಕಿಡಿ ಕಾರಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…