Latest

ಅಕ್ರಮ ಸಂಬಂಧದ ಕೊನೆ ಸರಗಳ್ಳತನದಲ್ಲಿ.! :ಇಬ್ಬರು ಪ್ರೇಮಿಗಳು ಬಂಧನ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನಲ್ಲಿ ಅಶ್ಲೀಲ ಪ್ರೇಮ ಸಂಬಂಧ ಒಂದರ ಕೊನೆ ದುಷ್ಕೃತ್ಯದಲ್ಲಿ ಅಂತ್ಯ ಕಂಡಿದೆ. ಮದುವೆಯಾದರೂ ಮತ್ತೊಬ್ಬ ಯುವತಿಯೊಂದಿಗೆ ಪ್ರೇಮ ಸಂಬಂಧ ಬೆಳೆಸಿದ್ದ ವ್ಯಕ್ತಿ, ಆಕೆಯನ್ನು ಗರ್ಭಿಣಿಯಾಗಿಸಿದ ಬಳಿಕ ಇಬ್ಬರೂ ಮನೆ ಹಾಗೂ ಊರು ಬಿಟ್ಟು ಪರಾರಿಯಾಗಿದ್ದರು. ಜೀವನ ನಡೆಸಲು ತೊಂದರೆ ಎದುರಾದ ಈ ಜೋಡಿ, ಕೊನೆಗೆ ಅಪರಾಧದ ದಾರಿಗೆ ಕಾಲಿಟ್ಟಿದೆ.

ಮೂಲಗಳ ಪ್ರಕಾರ, ಮುದುಗೆರೆ ಗ್ರಾಮದ ನಿವಾಸಿಗಳಾದ ಗೋವಿಂದರಾಜು ಹಾಗೂ ಅಶ್ವಿನಿ ಎಂಬವರು ತಮ್ಮ ಪ್ರೇಮ ಸಂಬಂಧವನ್ನು ಮುಂದುವರಿಸಲು ಗೃಹಸ್ಥಾಶ್ರಮವನ್ನು ತ್ಯಜಿಸಿ, ಬಾಡಿಗೆ ಮನೆಯಲ್ಲಿ ಸಂಸಾರ ಕಟ್ಟಿದ್ದರು. ಆದರೂ ಆರ್ಥಿಕವಾಗಿ ಸಂಕಷ್ಟ ಅನುಭವಿಸುತ್ತಿದ್ದ ಈ ಜೋಡಿ, ಬದುಕು ಸಾಗಿಸಲು ದಿಕ್ಕು ತಪ್ಪಿ ಸರಗಳ್ಳತನ ನಡೆಸಲು ಮುಂದಾಗಿದ್ದಾರೆ.

ಆದಿಯಲ್ಲಿ ಮನೆಯ ಖರ್ಚು ನಡೆಸಲು ಹಣವಿಲ್ಲದ ಗೋವಿಂದರಾಜು, ಬೈಕ್ ಕಳವಿಗೆ ಕೈ ಹಾಕಿದ್ದ. ನಂತರ, ಆ ಕಳವಾದ ಬೈಕನ್ನೇ ಬಳಸಿಕೊಂಡು ಆಕೆ ಜೊತೆಗೆ ಸರಗಳ್ಳತನಕ್ಕಿಳಿದಿದ್ದ. ಇತ್ತೀಚೆಗಿನ ಘಟನೆಗಳಲ್ಲಿ ಭಾಗವಹಿಸಿದ್ದ ಈ ಜೋಡಿಯ ನಡವಳಿಕೆಗಳು ಸಿಸಿಟಿವಿಯಲ್ಲಿ ಸೆರೆಯಾದ ಕಾರಣ, ಪೊಲೀಸರು ಅವರನ್ನು ಬಂಧಿಸಿದ್ದಾರೆ.

ವಿಶೇಷವೆಂದರೆ, ಬಂಧನದ ಬಳಿಕ ನಡೆದ ವಿಚಾರಣೆ ವೇಳೆ, ಈ ಇಬ್ಬರೂ ತಮ್ಮ ಸಂಬಂಧ, ಜೀವನ ಶೈಲಿ ಹಾಗೂ ಸರಗಳ್ಳತನದ ಹಿನ್ನಲೆ ಕುರಿತು ಬಾಯಿಬಿಟ್ಟಿದ್ದಾರೆ. ಈ ಮೂಲಕ ಒಂದು ಅನೈತಿಕ ಸಂಬಂಧವು ಹೇಗೆ ಅಪರಾಧದತ್ತ ದಾರಿತೋರಿಸಬಹುದೆಂಬುದಕ್ಕೆ ನಿದರ್ಶನವಾಗಿರುವ ಘಟನೆ, ಈಗ ಸ್ಥಳೀಯವಾಗಿ ಚರ್ಚೆಗೆ ಗ್ರಾಸವಾಗಿದೆ.

ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆಸಿದ್ದು, ಮತ್ತಷ್ಟು ವಿವರ ಹೊರಬರುವ ನಿರೀಕ್ಷೆಯಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

9 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

9 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

9 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

9 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago