Latest

ರಸ್ತೆ ನಿರ್ಮಿಸಿಕೊಂಡ ರೈತರು.!

ಮುಂಡಗೋಡ: ತಾಲೂಕಿನ ಚಿಗಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ತುಂಬರ್ಗಿ ಗ್ರಾಮದಲ್ಲಿ ತಮ್ಮ ಹೊಲಗಳಿಗೆ ತೆರಳಲು 25ಕ್ಕೂ ಹೆಚ್ಚು ರೈತರು ಸೇರಿಕೊಂಡು ಜೆಸಿಬಿ ಯಂತ್ರದ ಮೂಲಕ ರಸ್ತೆ ನಿರ್ಮಿಸಿಕೊಂಡಿದ್ದಾರೆ.
ಸಿರಸಿ ಹುಬ್ಬಳ್ಳಿ ರಸ್ತೆಯಲ್ಲಿ ಬರುವ ಜೋಗೇಶ್ವರ ಹಳ್ಳವು ತುಂಬರ್ಗಿ ಮತ್ತು ಲಕ್ಕೊಳ್ಳಿ ಗ್ರಾಮಗಳ ಮಧ್ಯೆ ಹಾಯ್ದು ಹೋಗುತ್ತದೆ.ಚಿಗಳ್ಳಿ ಮತ್ತು ಸಾಲಗಾಂವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೂರಾರು ರೈತರ ಹೊಲಗಳು ಲಕ್ಕೊಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ ಇರುವುದರಿಂದ ಈ ಹಳ್ಳವನ್ನು ದಾಟಿ ಹೊಲಗಳಿಗೆ ತೆರಳಬೇಕಾಗುತ್ತದೆ ಮತ್ತು ಬೆಳೆಗಳನ್ನು ಮನೆಗೆ ಸಾಗಿಸಬೇಕಾಗುತ್ತದೆ.ಈ ಹಳ್ಳವು ಹೆಚ್ಚು ಮಳೆಯಾಗಿದ್ದರಿಂದ ರೈತರು ಹೊಲಗಳಿಗೆ ಓಡಾಡಲು ಸಾಧ್ಯವಾಗುತ್ತಿರಲಿಲ್ಲ ಹಾಗಾಗಿ 25ಕ್ಕೂ ಹೆಚ್ಚು ರೈತರು ಸೇರಿಕೊಂಡು ರಸ್ತೆ ನಿರ್ಮಿಸಿಕೊಂಡಿದ್ದಾರೆ.
ಸೇತುವೆ ನಿರ್ಮಿಸಲು 1 ಕೋಟಿ ರೂಪಾಯಿ ಬಿಡುಗಡೆ:
ಈಗಾಗಲೇ ತುಂಬರಿ ಮತ್ತು ಲಕ್ಕೊಳ್ಳಿ ಗ್ರಾಮಗಳ ಮಧ್ಯೆ ಇರುವ ಹಳ್ಳಕ್ಕೆ ಸೇತುವೆ ನಿರ್ಮಾಣಕ್ಕಾಗಿ 1 ಕೋಟಿ ರೂಪಾಯಿಯನ್ನು ಸಚಿವರಾದ ಶಿವರಾಮ್ ಹೆಬ್ಬಾರ್ ಅವರು ಬಿಡುಗಡೆ ಮಾಡಿದ್ದಾರೆ ಎಂದು ರೈತರೇ ತಿಳಿಸಿದರು.ಈ ಕಾಮಗಾರಿ ಪ್ರಾರಂಭವಾಗಿ ಮುಗಿಯಲು ಇನ್ನೂ ನಾಲ್ಕೈದು ತಿಂಗಳು ಆಗಬಹುದು ಹಾಗಾಗಿ ಸದ್ಯ ಬೆಳೆದಿರುವ ಬೆಳೆಗಳನ್ನು ಮನೆಗೆ ಸಾಗಿಸಲು ಲಕ್ಕೊಳ್ಳಿ ಇಂದ ಲಕ್ಕೊಳ್ಳಿ ಕ್ರಾಸ್ ನ ಮೂಲಕ ಶಿರಸಿ ಹುಬ್ಬಳ್ಳಿ ರಸ್ತೆ ಮಾರ್ಗವಾಗಿ ಇಲ್ಲವೇ ಲಕ್ಕೊಳ್ಳಿ ಸಿರಿಗೇರಿ ಮಾರ್ಗವಾಗಿ ಸಾಗಿಸಬೇಕು ಈ ಮಾರ್ಗ ಬಹಳ ದೂರವಾಗುವುದರಿಂದ ತಾತ್ಕಾಲಿಕವಾಗಿ ರಸ್ತೆಯನ್ನು ನಿರ್ಮಿಸಿಕೊಳ್ಳುತ್ತಿದ್ದೇವೆ ಎನ್ನುತ್ತಾರೆ ರೈತರು.
ರಸ್ತೆ ಕಡಿಕರಣಗೊಳ್ಳಬೇಕಿದೆ: ಹೌದು ಸೇತುವೆಯಿಂದ ಎರಡು ಕಡೆ 1800 ಮೀ ರಸ್ತೆ ಇದ್ದು ಇದು ಮಳೆಗಾಲದಲ್ಲಿ ಕೆಸರುಮಯವಾಗುತ್ತದೆ ಹೀಗಾಗಿ ರೈತರಿಗೆ ಹೊಲಗಳಿಗೆ ತೆರಳಲು ಕಷ್ಟವಾಗುತ್ತದೆ ಹಾಗಾಗಿ ಮಾನ್ಯ ಸಚಿವರು ಈ ರಸ್ತೆಯನ್ನು ಮೋಹರಂ ಹಾಕಿ ಕಡೀಕರಣ ಮಾಡಿಸಿದರೆ ಅನುಕೂಲವಾಗುತ್ತದೆ ಎನ್ನುತ್ತಾರೆ ರೈತರು.
ಈ ಸಂದರ್ಭದಲ್ಲಿ ಬಾಬುರಾಯ ಲಾಡನವರ ಸೇರಿದಂತೆ ಹಲವಾರು ರೈತರು ಇದ್ದರು.
ವರದಿ :ಮಂಜುನಾಥ ಹರಿಜನ

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago