Latest

ಅನ್ಯ ಜಾತಿ ವ್ಯಕ್ತಿಯನ್ನು ಪ್ರೀತಿಸಿದ ಮಗಳನ್ನು ಕೊಂದ ತಂದೆ!

ನ್ಯ ಜಾತಿಯ ಯುವಕನನ್ನು ಪ್ರೀತಿಸಿದ ಕಾರಣಕ್ಕೆ ತಂದೆಯೇ ಮಗಳನ್ನು ಕೊಲೆ ಮಾಡಿರುವ ಘಟನೆ ಬಳ್ಳಾರಿಯ ಕುಡುತಿನಿ ಪಟ್ಟಣದ ಸಿದ್ದಮ್ಮನಹಳ್ಳಿಯಲ್ಲಿ ನಡೆದಿದೆ.

ಮಗಳು ಗ್ರಾಮದ ಅನ್ಯ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಳು. ಈ ಬಗ್ಗೆ ಮನೆಯವರಿಗೆ ಗೊತ್ತಾಗುತ್ತಿದ್ದಂತೆಯೇ ಯುವಕನಿಂದ ದೂರವಿರುವಂತೆ ಎಚ್ಚರಿಕೆ ನೀಡಿದ್ದರು. ಆದ್ರು ಯುವತಿ ಯುವಕನೊಡನೆ ಪ್ರೀತಿ ಒಡನಾಟ ಮುಂದುವರೆಸುತ್ತಿದ್ದಳು ಎಂದು ತಂದೆ ಶಂಕಿಸಿದ.

ಅ. 31ರಂದು  ಮಧ್ಯಾಹ್ನ ಮಗಳನ್ನು ಸಿನಿಮಾ ತೋರಿಸುವುದಾಗಿ ಪುಸಲಾಯಿಸಿ ಓಂಕಾರಗೌಡ ಬೈಕ್‌ನಲ್ಲಿ ಮನೆಯಿಂದ ಕರೆದೊಯ್ದ. ಚಿತ್ರಮಂದಿರದ ಬಳಿ ಹೋದಾಗ ಸಿನಿಮಾ ಆರಂಭವಾಗಿತ್ತು. ಅಲ್ಲಿಂದ ಹೋಟೆಲ್​ಗೆ ಕರೆದೊ‌ಯ್ದು ತಿಂಡಿ ತಿನ್ನಿಸಿ, ದೊಡ್ಡ ಬಸವೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನ ಮಾಡಿಸಿದ. ಆಭರಣದ ಅಂಗಡಿಯಲ್ಲಿ ಒಂದು ಜತೆ ಓಲೆ, ಉಂಗುರವನ್ನು ಮಗಳಿಗೆ ಕೊಡಿಸಿದ.

ಊರಿಗೆ ಹಿಂತಿರುಗುವ ಹೊತ್ತಿಗೆ ರಾತ್ರಿಯಾಗಿತ್ತು. ಹೆಚ್‌ಎಲ್‌ಸಿ ಕಾಲುವೆ ಬಳಿಗೆ ಮಗಳ ಕರೆತಂದು, ಸ್ವಲ್ಪ ಹೊತ್ತು ಇಲ್ಲೇ ನಿಂತಿರುವ ಕೆಲಸವಿದೆ ಮುಗಿಸಿ ಬರುತ್ತೇನೆ ಎಂದು ಹೇಳಿ ತಂದೆ ಕಣ್ಮರೆಯಾದ. ಆನಂತರ ಹಿಂದಿನಿಂದ ಬಂದು ಕಾಲುವೆಗೆ ತಳ್ಳಿದ. ಬಾಲಕಿ ನೀರಿನಲ್ಲಿ ಕೊಚ್ಚಿಕೊಂಡು ಹೋದಳು. ಆನಂತರ ಈತ ಬೈಕ್‌ ಅನ್ನು ತನ್ನ ಗೆಳೆಯ ಭೀಮಪ್ಪನ ಮನೆಯಲ್ಲಿ ಬಿಟ್ಟು ತಿರುಪತಿಗೆ ರೈಲು ಹತ್ತಿದ. ನವೆಂಬರ್‌ 1ರಂದು ಬಾಲಕಿ ತಾಯಿ ಗಂಡ ಹಾಗೂ ಪುತ್ರಿ ಕಾಣೆಯಾಗಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದಾರೆ. ತಿರುಪತಿ ದರ್ಶನ ಮುಗಿಸಿ ವಾಪಸ್‌ ಬರುವಾಗ ಕೊಪ್ಪಳದ ಬಳಿ ಓಂಕಾರಗೌಡನನ್ನು ಬಂಧಿಸಲಾಯಿತು ಎಂದು ಪೊಲೀಸರು ವಿವರಿಸಿದ್ದಾರೆ. ತನ್ನ ಮಗಳನ್ನು ತಾನೇ ಹತ್ಯೆ ಮಾಡಿರುವುದಾಗಿ ತಂದೆ ಪೊಲೀಸರ ಬಳಿ ತಪ್ಪೊಪ್ಪಿಕೊಂಡಿದ್ದಾನೆ.

ಆರೋಪಿಯು ಮಗಳ ಹೆಸರಿನಲ್ಲಿ ₹ 20 ಲಕ್ಷ ಬ್ಯಾಂಕಿನಲ್ಲಿ ಇಟ್ಟಿದ್ದ. ಕೊಲೆ ಮಾಡುವ ಮೊದಲು ಅದನ್ನು ಆರೋಪಿ ಗೆಳೆಯನ ಸಹಾಯದಿಂದ ವರ್ಗಾವಣೆ ಮಾಡಿಕೊಂಡಿದ್ದ ಎಂಬ ಸಂಗತಿಯೂ ವಿಚಾರಣೆಯಿಂದ ಗೊತ್ತಾಗಿದೆ.

 

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago