ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ ಕಾರಣಕ್ಕೆ ತಂದೆಯೇ ಮಗಳನ್ನು ಕೊಲೆ ಮಾಡಿರುವ ಘಟನೆ ಬಳ್ಳಾರಿಯ ಕುಡುತಿನಿ ಪಟ್ಟಣದ ಸಿದ್ದಮ್ಮನಹಳ್ಳಿಯಲ್ಲಿ ನಡೆದಿದೆ.
ಮಗಳು ಗ್ರಾಮದ ಅನ್ಯ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಳು. ಈ ಬಗ್ಗೆ ಮನೆಯವರಿಗೆ ಗೊತ್ತಾಗುತ್ತಿದ್ದಂತೆಯೇ ಯುವಕನಿಂದ ದೂರವಿರುವಂತೆ ಎಚ್ಚರಿಕೆ ನೀಡಿದ್ದರು. ಆದ್ರು ಯುವತಿ ಯುವಕನೊಡನೆ ಪ್ರೀತಿ ಒಡನಾಟ ಮುಂದುವರೆಸುತ್ತಿದ್ದಳು ಎಂದು ತಂದೆ ಶಂಕಿಸಿದ.
ಅ. 31ರಂದು ಮಧ್ಯಾಹ್ನ ಮಗಳನ್ನು ಸಿನಿಮಾ ತೋರಿಸುವುದಾಗಿ ಪುಸಲಾಯಿಸಿ ಓಂಕಾರಗೌಡ ಬೈಕ್ನಲ್ಲಿ ಮನೆಯಿಂದ ಕರೆದೊಯ್ದ. ಚಿತ್ರಮಂದಿರದ ಬಳಿ ಹೋದಾಗ ಸಿನಿಮಾ ಆರಂಭವಾಗಿತ್ತು. ಅಲ್ಲಿಂದ ಹೋಟೆಲ್ಗೆ ಕರೆದೊಯ್ದು ತಿಂಡಿ ತಿನ್ನಿಸಿ, ದೊಡ್ಡ ಬಸವೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನ ಮಾಡಿಸಿದ. ಆಭರಣದ ಅಂಗಡಿಯಲ್ಲಿ ಒಂದು ಜತೆ ಓಲೆ, ಉಂಗುರವನ್ನು ಮಗಳಿಗೆ ಕೊಡಿಸಿದ.
ಊರಿಗೆ ಹಿಂತಿರುಗುವ ಹೊತ್ತಿಗೆ ರಾತ್ರಿಯಾಗಿತ್ತು. ಹೆಚ್ಎಲ್ಸಿ ಕಾಲುವೆ ಬಳಿಗೆ ಮಗಳ ಕರೆತಂದು, ಸ್ವಲ್ಪ ಹೊತ್ತು ಇಲ್ಲೇ ನಿಂತಿರುವ ಕೆಲಸವಿದೆ ಮುಗಿಸಿ ಬರುತ್ತೇನೆ ಎಂದು ಹೇಳಿ ತಂದೆ ಕಣ್ಮರೆಯಾದ. ಆನಂತರ ಹಿಂದಿನಿಂದ ಬಂದು ಕಾಲುವೆಗೆ ತಳ್ಳಿದ. ಬಾಲಕಿ ನೀರಿನಲ್ಲಿ ಕೊಚ್ಚಿಕೊಂಡು ಹೋದಳು. ಆನಂತರ ಈತ ಬೈಕ್ ಅನ್ನು ತನ್ನ ಗೆಳೆಯ ಭೀಮಪ್ಪನ ಮನೆಯಲ್ಲಿ ಬಿಟ್ಟು ತಿರುಪತಿಗೆ ರೈಲು ಹತ್ತಿದ. ನವೆಂಬರ್ 1ರಂದು ಬಾಲಕಿ ತಾಯಿ ಗಂಡ ಹಾಗೂ ಪುತ್ರಿ ಕಾಣೆಯಾಗಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದಾರೆ. ತಿರುಪತಿ ದರ್ಶನ ಮುಗಿಸಿ ವಾಪಸ್ ಬರುವಾಗ ಕೊಪ್ಪಳದ ಬಳಿ ಓಂಕಾರಗೌಡನನ್ನು ಬಂಧಿಸಲಾಯಿತು ಎಂದು ಪೊಲೀಸರು ವಿವರಿಸಿದ್ದಾರೆ. ತನ್ನ ಮಗಳನ್ನು ತಾನೇ ಹತ್ಯೆ ಮಾಡಿರುವುದಾಗಿ ತಂದೆ ಪೊಲೀಸರ ಬಳಿ ತಪ್ಪೊಪ್ಪಿಕೊಂಡಿದ್ದಾನೆ.
ಆರೋಪಿಯು ಮಗಳ ಹೆಸರಿನಲ್ಲಿ ₹ 20 ಲಕ್ಷ ಬ್ಯಾಂಕಿನಲ್ಲಿ ಇಟ್ಟಿದ್ದ. ಕೊಲೆ ಮಾಡುವ ಮೊದಲು ಅದನ್ನು ಆರೋಪಿ ಗೆಳೆಯನ ಸಹಾಯದಿಂದ ವರ್ಗಾವಣೆ ಮಾಡಿಕೊಂಡಿದ್ದ ಎಂಬ ಸಂಗತಿಯೂ ವಿಚಾರಣೆಯಿಂದ ಗೊತ್ತಾಗಿದೆ.
ಮೈಸೂರು ನಗರದ ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ…
ಬೆಂಗಳೂರಿನ ಜಯನಗರದಲ್ಲಿ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಬಳಸಿ ಹಣದ ಬೇಡಿಕೆ ಇಟ್ಟ ಆರೋಪದಡಿ ಸಾಧನಾ ಶೆಟ್ಟಿ ವಿರುದ್ಧ ಎಫ್ಐಆರ್…
ಛತ್ತರ್ಪುರದಲ್ಲಿ ಗುರುವಾರ ನಡೆದ ಒಂದು ಅಚ್ಚರಿಯ ಘಟನೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಚಲಿಸುತ್ತಿದ್ದ ಆಂಬ್ಯುಲೆನ್ಸ್ನೊಳಗೆ ಯುವತಿ ಹಾಗೂ ಇಬ್ಬರು…
ಇತ್ತೀಚಿನ ದಿನಗಳಲ್ಲಿ ಮದುವೆ ವ್ಯವಸ್ಥೆಯು ಹಲವಾರು ಬದಲಾವಣೆಗಳನ್ನು ಕಂಡಿದೆ. ವಧು-ವರರ ಹುಡುಕಾಟ ಹೆಚ್ಚಾಗಿ ಮ್ಯಾಟ್ರಿಮೋನಿ ವೆಬ್ಸೈಟ್ಗಳ ಮೂಲಕ ನಡೆಯುತ್ತಿದ್ದು, ಕೆಲವೊಮ್ಮೆ…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ…
ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಮದುವೆಯ ಕನಸು ಕಂಡಿದ್ದ ಯುವತಿಯೊಬ್ಬಳು, ಭಾವಿ ಪತಿಯ ವರ್ತನೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ…