ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ ಕಾರಣಕ್ಕೆ ತಂದೆಯೇ ಮಗಳನ್ನು ಕೊಲೆ ಮಾಡಿರುವ ಘಟನೆ ಬಳ್ಳಾರಿಯ ಕುಡುತಿನಿ ಪಟ್ಟಣದ ಸಿದ್ದಮ್ಮನಹಳ್ಳಿಯಲ್ಲಿ ನಡೆದಿದೆ.
ಮಗಳು ಗ್ರಾಮದ ಅನ್ಯ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಳು. ಈ ಬಗ್ಗೆ ಮನೆಯವರಿಗೆ ಗೊತ್ತಾಗುತ್ತಿದ್ದಂತೆಯೇ ಯುವಕನಿಂದ ದೂರವಿರುವಂತೆ ಎಚ್ಚರಿಕೆ ನೀಡಿದ್ದರು. ಆದ್ರು ಯುವತಿ ಯುವಕನೊಡನೆ ಪ್ರೀತಿ ಒಡನಾಟ ಮುಂದುವರೆಸುತ್ತಿದ್ದಳು ಎಂದು ತಂದೆ ಶಂಕಿಸಿದ.
ಅ. 31ರಂದು ಮಧ್ಯಾಹ್ನ ಮಗಳನ್ನು ಸಿನಿಮಾ ತೋರಿಸುವುದಾಗಿ ಪುಸಲಾಯಿಸಿ ಓಂಕಾರಗೌಡ ಬೈಕ್ನಲ್ಲಿ ಮನೆಯಿಂದ ಕರೆದೊಯ್ದ. ಚಿತ್ರಮಂದಿರದ ಬಳಿ ಹೋದಾಗ ಸಿನಿಮಾ ಆರಂಭವಾಗಿತ್ತು. ಅಲ್ಲಿಂದ ಹೋಟೆಲ್ಗೆ ಕರೆದೊಯ್ದು ತಿಂಡಿ ತಿನ್ನಿಸಿ, ದೊಡ್ಡ ಬಸವೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನ ಮಾಡಿಸಿದ. ಆಭರಣದ ಅಂಗಡಿಯಲ್ಲಿ ಒಂದು ಜತೆ ಓಲೆ, ಉಂಗುರವನ್ನು ಮಗಳಿಗೆ ಕೊಡಿಸಿದ.
ಊರಿಗೆ ಹಿಂತಿರುಗುವ ಹೊತ್ತಿಗೆ ರಾತ್ರಿಯಾಗಿತ್ತು. ಹೆಚ್ಎಲ್ಸಿ ಕಾಲುವೆ ಬಳಿಗೆ ಮಗಳ ಕರೆತಂದು, ಸ್ವಲ್ಪ ಹೊತ್ತು ಇಲ್ಲೇ ನಿಂತಿರುವ ಕೆಲಸವಿದೆ ಮುಗಿಸಿ ಬರುತ್ತೇನೆ ಎಂದು ಹೇಳಿ ತಂದೆ ಕಣ್ಮರೆಯಾದ. ಆನಂತರ ಹಿಂದಿನಿಂದ ಬಂದು ಕಾಲುವೆಗೆ ತಳ್ಳಿದ. ಬಾಲಕಿ ನೀರಿನಲ್ಲಿ ಕೊಚ್ಚಿಕೊಂಡು ಹೋದಳು. ಆನಂತರ ಈತ ಬೈಕ್ ಅನ್ನು ತನ್ನ ಗೆಳೆಯ ಭೀಮಪ್ಪನ ಮನೆಯಲ್ಲಿ ಬಿಟ್ಟು ತಿರುಪತಿಗೆ ರೈಲು ಹತ್ತಿದ. ನವೆಂಬರ್ 1ರಂದು ಬಾಲಕಿ ತಾಯಿ ಗಂಡ ಹಾಗೂ ಪುತ್ರಿ ಕಾಣೆಯಾಗಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದಾರೆ. ತಿರುಪತಿ ದರ್ಶನ ಮುಗಿಸಿ ವಾಪಸ್ ಬರುವಾಗ ಕೊಪ್ಪಳದ ಬಳಿ ಓಂಕಾರಗೌಡನನ್ನು ಬಂಧಿಸಲಾಯಿತು ಎಂದು ಪೊಲೀಸರು ವಿವರಿಸಿದ್ದಾರೆ. ತನ್ನ ಮಗಳನ್ನು ತಾನೇ ಹತ್ಯೆ ಮಾಡಿರುವುದಾಗಿ ತಂದೆ ಪೊಲೀಸರ ಬಳಿ ತಪ್ಪೊಪ್ಪಿಕೊಂಡಿದ್ದಾನೆ.
ಆರೋಪಿಯು ಮಗಳ ಹೆಸರಿನಲ್ಲಿ ₹ 20 ಲಕ್ಷ ಬ್ಯಾಂಕಿನಲ್ಲಿ ಇಟ್ಟಿದ್ದ. ಕೊಲೆ ಮಾಡುವ ಮೊದಲು ಅದನ್ನು ಆರೋಪಿ ಗೆಳೆಯನ ಸಹಾಯದಿಂದ ವರ್ಗಾವಣೆ ಮಾಡಿಕೊಂಡಿದ್ದ ಎಂಬ ಸಂಗತಿಯೂ ವಿಚಾರಣೆಯಿಂದ ಗೊತ್ತಾಗಿದೆ.
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…