ಅಸ್ಸಾಂನ ನಾಗಾಂವ್ನ ಮುಸ್ಲಿಂ ವ್ಯಕ್ತಿಯೊಬ್ಬ ತಾನು ಹಿಂದೂ ಎಂದು ಹೇಳಿಕೊಂಡು, ಹೆಸರು ಬದಲಿಸಿ ಹಿಂದೂ ಯುವತಿಯೊಂದಿಗೆ ಕೇರಳಕ್ಕೆ ಪರಾರಿಯಾಗಿದ್ದಾನೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ಜಾಗೃತರಾಗಿ ಕ್ರಮ ಕೈಗೊಂಡಿದ್ದಾರೆ. ವ್ಯಕ್ತಿಯನ್ನು ಬಂಧಿಸಲಾಗಿದ್ದು, ಓಡಿಹೋದ ಹುಡುಗಿಯನ್ನು ರಕ್ಷಿಸಲಾಗಿದೆ. ವರದಿಗಳ ಪ್ರಕಾರ, ನಾಗಾಂವ್ನ ಲೈಲೂರಿಯಿಂದ ವಿವಾಹಿತ ವ್ಯಕ್ತಿ ಮತ್ತು ಮೂರು ಮಕ್ಕಳ ತಂದೆ ರಮಿಜುಲ್ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ತನ್ನ ಹೆಸರನ್ನು ಮುನ್ನಾ ಗೊಗೋಯ್ ಎಂದು ಬದಲಾಯಿಸಿಕೊಂಡಿದ್ದ. ನಂತರ ನಾಗಾಂವ್ ನವರಾದ ಪೂಜಾ ಬೋರಾ ಅವರೊಂದಿಗೆ ಓಡಿಹೋಗಿದ್ದ. ಈ ವ್ಯಕ್ತಿ ಎರಡು ತಿಂಗಳಿನಿಂದ ಕೇರಳದಲ್ಲಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಈ ಸಂಬಂಧ ಪೂಜಾ ಬೋರಾ ಅವರ ತಾಯಿ ನಾಗಾಂವ್ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರ ತಂಡ ಕೇರಳಕ್ಕೆ ತೆರಳಿ ರಮಿಜುಲ್ ನನ್ನು ಬಂಧಿಸಿದ್ದಾರೆ. ಆರೋಪಿಯನ್ನು ನಾಗಾಂವ್ ಗೆ ಕರೆತರುವ ಮೊದಲು ಕೇರಳದ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಪೂಜಾ ಬೋರಾಳನ್ನೂ ಕೇರಳದಿಂದ ಕರೆತರಲಾಗಿದೆ. ಪೊಲೀಸರ ಪ್ರಕಾರ, ರಮಿಜುಲ್ ತನ್ನ ಹೆಸರನ್ನು ಫೇಸ್ಬುಕ್ನಲ್ಲಿ ಮುನ್ನಾ ಗೊಗೊಯ್ ಎಂದು ಬದಲಾಯಿಸಿಕೊಂಡಿದ್ದಾನೆ ಮತ್ತು ನಾಗಾಂವ್ ನಲ್ಲಿ ಪೂಜಾ ಬೋರಾ ಎಂಬ ಹುಡುಗಿಯೊಂದಿಗೆ ಸ್ನೇಹ ಬೆಳೆಸಿದ್ದ. ಈತ ಆಕೆಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದ. ಇವರಿಬ್ಬರು ಕೇರಳಕ್ಕೆ ಓಡಿ ಎರಡು ತಿಂಗಳ ಕಾಲ ತಲೆಮರೆಸಿಕೊಂಡಿದ್ದರು. ಕೇರಳದ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸುವಾಗ ರಮಿಜುಲ್ ಪರಾರಿಯಾಗಲು ಪ್ರಯತ್ನಿಸಿದ್ದ, ನಂತರ ಸಿಕ್ಕಿಬಿದ್ದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಎಐ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಗೃಹಿಣಿಯೊಬ್ಬರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್…