Latest

ರಸ್ತೆ ಪಕ್ಕದಲ್ಲಿ ಜೆ.ಸಿ.ಬಿ ಮೂಲಕ ಮಣ್ಣು ಅಗೆದು ಸಾಗಿಸಿದರು ಕಣ್ಮುಚ್ಚಿ ಕುಳಿತ ಅರಣ್ಯ ಇಲಾಖೆ!

ಮುಂಡಗೋಡ: ತಾಲೂಕಿನ ಕಾತೂರು ವಲಯ ಅರಣ್ಯಾಧಿಕಾರಿಗಳ ಸರಹದ್ದಿನಲ್ಲಿ ಬರುವ ಚಿಗಳ್ಳಿ ಗ್ರಾಮದ ಚಿಗಳ್ಳಿ ಜಲಾಶಯಕ್ಕೆ ಹೋಗುವ ರಸ್ತೆಯ ಪಕ್ಕದಲ್ಲೇ ಜೆಸಿಬಿ ಯಂತ್ರದ ಮೂಲಕ ಮಣ್ಣು ಅಗೆದು ಸಾಗಿಸಿದ್ದಾರೆ ಮತ್ತು ಚಿಗಳ್ಳಿ ಜಲಾಶಯದ ಉಬ್ಬುಗಡೆ ಪ್ರದೇಶದಲ್ಲಿ ಮೊಹರಂ (ಗೊಚ್ಚು) ಅನ್ನು ತೆಗೆದು ಸಾಗಿಸಿದ್ದಾರೆ.
ಹೌದು, ಅಂದ ಹಾಗೆ ಈ ಮಣ್ಣನ್ನು ಅಕ್ರಮವಾಗಿ ಕಳೆದ 15 ದಿನಗಳ ಹಿಂದೆಯೇ ಸಾಗಿಸಿದ್ದಾರೆನ್ನಲಾಗಿದೆ.ಈ ವಿಷಯವಾಗಿ ಕೆಲವರು ಕೇಳಿದಾಗ ಜೋಗೇಶ್ವರ ಹಳ್ಳದ ಹತ್ತಿರ ಇರುವ ಅರಣ್ಯ ಇಲಾಖೆಯ ನರ್ಸರಿಗೆ ಮಣ್ಣನ್ನು ಸಾಗಿಸಲಾಗಿದೆ ಎಂದು ಹೇಳಿದ್ದಾರೆ.ಆದರೆ ಅರಣ್ಯ ಇಲಾಖೆಯ ಈ ನರ್ಸರಿಗೆ ಮಣ್ಣು ಹೋಗಿಯೇ ಇಲ್ಲ.
ವಿಷಯ ಗೊತ್ತಿದ್ದರೂ ಸುಮ್ಮನಿದ್ದಾರಾ? ಹೌದು ,ಈ ವಿಷಯ ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಗೊತ್ತಿದ್ದರೂ ಸುಮ್ಮನಿದ್ದಾರೆ ಎಂದು ಅನಿಸುತ್ತದೆ ಏಕೆಂದರೆ ರಸ್ತೆಯ ಪಕ್ಕದಲ್ಲಿ ಈ ಅಕ್ರಮ ನಡೆದರು ಇದುವರೆಗೂ ಈ ವಿಷಯದ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲ.
ಅಕ್ರಮ ಇಟ್ಟಿಗೆ ತಯಾರಿಕೆಗೆ ಸಾಗಾಣಿಕೆಯಾಗಿದೆಯಾ?ಅಕ್ರಮವಾಗಿ 30 ರಿಂದ 40 ಟಿಪ್ಪರ್ ಗಳಷ್ಟು ಮಣ್ಣು ಹೋಗಿರುವುದಾದರೂ ಎಲ್ಲಿಗೆ?ಅರಣ್ಯ ಇಲಾಖೆಯ ಸಿಬ್ಬಂದಿಗಳು ಅಕ್ರಮವಾಗಿ ತಯಾರಾಗುವ ಇಟ್ಟಿಗೆ ತಯಾರಕರೊಂದಿಗೆ ಶಾಮಿಲಾಗಿ ಮಣ್ಣು ಸಾಗಾಣಿಕೆ ಆಗಲು ಅನುವು ಮಾಡಿಕೊಟ್ಟಿದ್ದಾರಾ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ.
ಏನೇ ಆಗಲಿ ಹೀಗೆ ರಸ್ತೆಯ ಪಕ್ಕದಲ್ಲಿ ಅಕ್ರಮವಾಗಿ ಮಣ್ಣು ಅಗೆದು ಸಾಗಿಸಿದವರ ವಿರುದ್ಧ ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳುವವರೇ ಎಂದು ಕಾಯ್ದು ನೋಡಬೇಕಾಗಿದೆ.

ವಲಯ ಅರಣ್ಯ ಅಧಿಕಾರಿಗಳು ಹೇಳೋದೇನು: ಈ ಬಗ್ಗೆ ಕಾತೂರು ವಲಯ ಅರಣ್ಯ ಅಧಿಕಾರಿಗಳನ್ನು ಕೇಳಿದಾಗ ನಮ್ಮ ಸಿಬ್ಬಂದಿಗಳನ್ನು ಕಳುಹಿಸಿ ಮಾಹಿತಿ ಪಡೆಯಲಾಗುವುದು ಎಂದು ತಿಳಿಸಿದ್ದಾರೆ.
ವರದಿ: ಮಂಜುನಾಥ ಹರಿಜನ

ಭ್ರಷ್ಟರ ಬೇಟೆ

Recent Posts

ಲೆನ್ಸ್ಕಾರ್ಟ್ ಡ್ರೆಸ್ ಕೋಡ್ ವಿವಾದ: ತಿಲಕ-ಕುಂಕುಮ ನಿಷೇಧ ಆರೋಪ, ನಾಯಕಿ ನಾಜಿಯಾ ಖಾನ್ ಪ್ರತಿಭಟನೆ

ನಾಸಿಕ್‌ನ Tata Consultancy Services ನಲ್ಲಿ ಬಲವಂತದ ಮತಾಂತರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, Lenskart…

2 hours ago

ರೌಡಿಶೀಟರ್ ಸೈಲೆಂಟ್ ಸುನಿಲ್‌ಗೆ ಭರ್ಜರಿ ಸ್ವಾಗತ: ಹಾಸನದಲ್ಲಿ ವಿಡಿಯೋ ವೈರಲ್

ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್ ಆಗಮಿಸುತ್ತಿದ್ದಂತೆಯೇ ಯುವಕರ ಗುಂಪೊಂದು ಅದ್ದೂರಿ ಸ್ವಾಗತ ಕೋರಿರುವ…

3 hours ago

ಲಂಚ ಸ್ವೀಕರಿಸುತ್ತಿದ್ದ ಪಿಎಸ್ಐ ಲೋಕಾಯುಕ್ತ ಬಲೆಗೆ: ಠಾಣೆ ಮುಂದೆ ಪಟಾಕಿ ಸಿಡಿಸಿ ಜನರ ಸಂಭ್ರಮ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೀಮಪ್ಪ ರಬಕವಿ ಹಾಗೂ ಕಾನ್ಸ್ಟೇಬಲ್ ಸಂತೋಷ್…

3 hours ago

ಡಿಎನ್‌ಎ ಸತ್ಯ ಹೇಳಿತು: ಬಿಜೆಪಿ ಮುಖಂಡನ ಪುತ್ರನೇ ಮಗುವಿನ ತಂದೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿದ್ದ ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪುತ್ತೂರು…

8 hours ago

ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ: ಯುದ್ಧ ಪರಿಸ್ಥಿತಿಯಲ್ಲಿ ಸರ್ಕಾರದ ಮುನ್ನೆಚ್ಚರಿಕಾ ಕ್ರಮ

ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಸಂಘರ್ಷ ಹಾಗೂ ಯುದ್ಧದ ಪರಿಣಾಮವಾಗಿ ರಸಗೊಬ್ಬರ ತಯಾರಿಕೆಗೆ ಅಗತ್ಯವಾದ ಕಚ್ಚಾ ವಸ್ತುಗಳ ಆಮದು ವ್ಯತ್ಯಯಗೊಳ್ಳುವ ಭೀತಿ…

8 hours ago

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಹತ್ಯೆಗೆ ಸಂಚು: ಪತ್ನಿ ಸೇರಿ ಐವರ ಬಂಧನ

ಆಂಧ್ರ ಪ್ರದೇಶದ ಪ್ರೊದ್ದಟೂರು ತಾಲ್ಲೂಕಿನ ಲಿಂಗಾಪುರಂ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ತನ್ನ ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ಭಾವಿಸಿದ…

8 hours ago