ಮುಂಡಗೋಡ: ತಾಲೂಕಿನ ಕಾತೂರು ವಲಯ ಅರಣ್ಯಾಧಿಕಾರಿಗಳ ಸರಹದ್ದಿನಲ್ಲಿ ಬರುವ ಚಿಗಳ್ಳಿ ಗ್ರಾಮದ ಚಿಗಳ್ಳಿ ಜಲಾಶಯಕ್ಕೆ ಹೋಗುವ ರಸ್ತೆಯ ಪಕ್ಕದಲ್ಲೇ ಜೆಸಿಬಿ ಯಂತ್ರದ ಮೂಲಕ ಮಣ್ಣು ಅಗೆದು ಸಾಗಿಸಿದ್ದಾರೆ ಮತ್ತು ಚಿಗಳ್ಳಿ ಜಲಾಶಯದ ಉಬ್ಬುಗಡೆ ಪ್ರದೇಶದಲ್ಲಿ ಮೊಹರಂ (ಗೊಚ್ಚು) ಅನ್ನು ತೆಗೆದು ಸಾಗಿಸಿದ್ದಾರೆ.
ಹೌದು, ಅಂದ ಹಾಗೆ ಈ ಮಣ್ಣನ್ನು ಅಕ್ರಮವಾಗಿ ಕಳೆದ 15 ದಿನಗಳ ಹಿಂದೆಯೇ ಸಾಗಿಸಿದ್ದಾರೆನ್ನಲಾಗಿದೆ.ಈ ವಿಷಯವಾಗಿ ಕೆಲವರು ಕೇಳಿದಾಗ ಜೋಗೇಶ್ವರ ಹಳ್ಳದ ಹತ್ತಿರ ಇರುವ ಅರಣ್ಯ ಇಲಾಖೆಯ ನರ್ಸರಿಗೆ ಮಣ್ಣನ್ನು ಸಾಗಿಸಲಾಗಿದೆ ಎಂದು ಹೇಳಿದ್ದಾರೆ.ಆದರೆ ಅರಣ್ಯ ಇಲಾಖೆಯ ಈ ನರ್ಸರಿಗೆ ಮಣ್ಣು ಹೋಗಿಯೇ ಇಲ್ಲ.
ವಿಷಯ ಗೊತ್ತಿದ್ದರೂ ಸುಮ್ಮನಿದ್ದಾರಾ? ಹೌದು ,ಈ ವಿಷಯ ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಗೊತ್ತಿದ್ದರೂ ಸುಮ್ಮನಿದ್ದಾರೆ ಎಂದು ಅನಿಸುತ್ತದೆ ಏಕೆಂದರೆ ರಸ್ತೆಯ ಪಕ್ಕದಲ್ಲಿ ಈ ಅಕ್ರಮ ನಡೆದರು ಇದುವರೆಗೂ ಈ ವಿಷಯದ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲ.
ಅಕ್ರಮ ಇಟ್ಟಿಗೆ ತಯಾರಿಕೆಗೆ ಸಾಗಾಣಿಕೆಯಾಗಿದೆಯಾ?ಅಕ್ರಮವಾಗಿ 30 ರಿಂದ 40 ಟಿಪ್ಪರ್ ಗಳಷ್ಟು ಮಣ್ಣು ಹೋಗಿರುವುದಾದರೂ ಎಲ್ಲಿಗೆ?ಅರಣ್ಯ ಇಲಾಖೆಯ ಸಿಬ್ಬಂದಿಗಳು ಅಕ್ರಮವಾಗಿ ತಯಾರಾಗುವ ಇಟ್ಟಿಗೆ ತಯಾರಕರೊಂದಿಗೆ ಶಾಮಿಲಾಗಿ ಮಣ್ಣು ಸಾಗಾಣಿಕೆ ಆಗಲು ಅನುವು ಮಾಡಿಕೊಟ್ಟಿದ್ದಾರಾ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ.
ಏನೇ ಆಗಲಿ ಹೀಗೆ ರಸ್ತೆಯ ಪಕ್ಕದಲ್ಲಿ ಅಕ್ರಮವಾಗಿ ಮಣ್ಣು ಅಗೆದು ಸಾಗಿಸಿದವರ ವಿರುದ್ಧ ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳುವವರೇ ಎಂದು ಕಾಯ್ದು ನೋಡಬೇಕಾಗಿದೆ.
ವಲಯ ಅರಣ್ಯ ಅಧಿಕಾರಿಗಳು ಹೇಳೋದೇನು: ಈ ಬಗ್ಗೆ ಕಾತೂರು ವಲಯ ಅರಣ್ಯ ಅಧಿಕಾರಿಗಳನ್ನು ಕೇಳಿದಾಗ ನಮ್ಮ ಸಿಬ್ಬಂದಿಗಳನ್ನು ಕಳುಹಿಸಿ ಮಾಹಿತಿ ಪಡೆಯಲಾಗುವುದು ಎಂದು ತಿಳಿಸಿದ್ದಾರೆ.
ವರದಿ: ಮಂಜುನಾಥ ಹರಿಜನ
ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…
ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…