ಮುಂಡಗೋಡ: ತಾಲೂಕಿನ ಕಾತೂರು ವಲಯ ಅರಣ್ಯಾಧಿಕಾರಿಗಳ ಸರಹದ್ದಿನಲ್ಲಿ ಬರುವ ಚಿಗಳ್ಳಿ ಗ್ರಾಮದ ಚಿಗಳ್ಳಿ ಜಲಾಶಯಕ್ಕೆ ಹೋಗುವ ರಸ್ತೆಯ ಪಕ್ಕದಲ್ಲೇ ಜೆಸಿಬಿ ಯಂತ್ರದ ಮೂಲಕ ಮಣ್ಣು ಅಗೆದು ಸಾಗಿಸಿದ್ದಾರೆ ಮತ್ತು ಚಿಗಳ್ಳಿ ಜಲಾಶಯದ ಉಬ್ಬುಗಡೆ ಪ್ರದೇಶದಲ್ಲಿ ಮೊಹರಂ (ಗೊಚ್ಚು) ಅನ್ನು ತೆಗೆದು ಸಾಗಿಸಿದ್ದಾರೆ.
ಹೌದು, ಅಂದ ಹಾಗೆ ಈ ಮಣ್ಣನ್ನು ಅಕ್ರಮವಾಗಿ ಕಳೆದ 15 ದಿನಗಳ ಹಿಂದೆಯೇ ಸಾಗಿಸಿದ್ದಾರೆನ್ನಲಾಗಿದೆ.ಈ ವಿಷಯವಾಗಿ ಕೆಲವರು ಕೇಳಿದಾಗ ಜೋಗೇಶ್ವರ ಹಳ್ಳದ ಹತ್ತಿರ ಇರುವ ಅರಣ್ಯ ಇಲಾಖೆಯ ನರ್ಸರಿಗೆ ಮಣ್ಣನ್ನು ಸಾಗಿಸಲಾಗಿದೆ ಎಂದು ಹೇಳಿದ್ದಾರೆ.ಆದರೆ ಅರಣ್ಯ ಇಲಾಖೆಯ ಈ ನರ್ಸರಿಗೆ ಮಣ್ಣು ಹೋಗಿಯೇ ಇಲ್ಲ.
ವಿಷಯ ಗೊತ್ತಿದ್ದರೂ ಸುಮ್ಮನಿದ್ದಾರಾ? ಹೌದು ,ಈ ವಿಷಯ ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಗೊತ್ತಿದ್ದರೂ ಸುಮ್ಮನಿದ್ದಾರೆ ಎಂದು ಅನಿಸುತ್ತದೆ ಏಕೆಂದರೆ ರಸ್ತೆಯ ಪಕ್ಕದಲ್ಲಿ ಈ ಅಕ್ರಮ ನಡೆದರು ಇದುವರೆಗೂ ಈ ವಿಷಯದ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲ.
ಅಕ್ರಮ ಇಟ್ಟಿಗೆ ತಯಾರಿಕೆಗೆ ಸಾಗಾಣಿಕೆಯಾಗಿದೆಯಾ?ಅಕ್ರಮವಾಗಿ 30 ರಿಂದ 40 ಟಿಪ್ಪರ್ ಗಳಷ್ಟು ಮಣ್ಣು ಹೋಗಿರುವುದಾದರೂ ಎಲ್ಲಿಗೆ?ಅರಣ್ಯ ಇಲಾಖೆಯ ಸಿಬ್ಬಂದಿಗಳು ಅಕ್ರಮವಾಗಿ ತಯಾರಾಗುವ ಇಟ್ಟಿಗೆ ತಯಾರಕರೊಂದಿಗೆ ಶಾಮಿಲಾಗಿ ಮಣ್ಣು ಸಾಗಾಣಿಕೆ ಆಗಲು ಅನುವು ಮಾಡಿಕೊಟ್ಟಿದ್ದಾರಾ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ.
ಏನೇ ಆಗಲಿ ಹೀಗೆ ರಸ್ತೆಯ ಪಕ್ಕದಲ್ಲಿ ಅಕ್ರಮವಾಗಿ ಮಣ್ಣು ಅಗೆದು ಸಾಗಿಸಿದವರ ವಿರುದ್ಧ ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳುವವರೇ ಎಂದು ಕಾಯ್ದು ನೋಡಬೇಕಾಗಿದೆ.
ವಲಯ ಅರಣ್ಯ ಅಧಿಕಾರಿಗಳು ಹೇಳೋದೇನು: ಈ ಬಗ್ಗೆ ಕಾತೂರು ವಲಯ ಅರಣ್ಯ ಅಧಿಕಾರಿಗಳನ್ನು ಕೇಳಿದಾಗ ನಮ್ಮ ಸಿಬ್ಬಂದಿಗಳನ್ನು ಕಳುಹಿಸಿ ಮಾಹಿತಿ ಪಡೆಯಲಾಗುವುದು ಎಂದು ತಿಳಿಸಿದ್ದಾರೆ.
ವರದಿ: ಮಂಜುನಾಥ ಹರಿಜನ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…