ಗೌರಿಬಿದನೂರು: ನಗರ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿ, ಸುಮಾರು ₹10 ಲಕ್ಷ ಬೆಲೆ ಬಾಳುವ 10 ದ್ವಿಚಕ್ರ
ವಾಹನ, ₹67 ಸಾವಿರ ಬೆಲೆ ಬಾಳುವ 420 ಕೆ.ಜಿ ಒಣಮೆಣಸಿನಕಾಯಿಯನ್ನು ಶುಕ್ರವಾರ ವಶಪಡಿಸಿಕೊಂಡಿದ್ದಾರೆ.
ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಆಟೊನಗರ ನಿವಾಸಿ ಚೆಲ್ಲಾ ಸೋಮಶಂಕರ (22), ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದ ವಿನೋದ್ ಕುಮಾರ್ (23) ಬಂಧಿತ ಆರೋಪಿಗಳು.
ಪೊಲೀಸರು ನಗರದಲ್ಲಿ ಗಸ್ತು ಮಾಡುತ್ತಿದ್ದಾಗ ಗುಂಡಾಪುರ ಕಡೆಯಿಂದ ದ್ವಿಚಕ್ರ ವಾಹನದಲ್ಲಿ
ಅನುಮಾನಾಸ್ಪದವಾಗಿ ಚಲಿಸುತ್ತಿದ್ದ ಚೆಲ್ಲಾ ಸೋಮಶಂಕರನನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಕಳ್ಳತನ ಮಾಡಿದ್ದ ವಾಹನಗಳ ಬಗ್ಗೆ ಬಾಯಿ ಬಿಟ್ಟಿದ್ದಾನೆ. ಬಳಿಕ ಮತ್ತೊಬ್ಬ ಆರೋಪಿ ವಿನೋದ್ ಕುಮಾರ್ನನ್ನು ಬಂಧಿಸಿ ಕಳ್ಳತನ ಮಾಡಿದ್ದ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಪಿಐ ಅಂಜನ್ ಕುಮಾರ್ ತಿಳಿಸಿದ್ದಾರೆ.
ವರದಿ: ಅವಿನಾಶ್
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಕನ್ನಡ ಪರ ಹೋರಾಟಗಾರ ಎಂದು ಗುರುತಿಸಲ್ಪಡುವ…
ಬಳ್ಳಾರಿ: ಸಾರ್ವಜನಿಕರ ತೆರಿಗೆ ಹಣ ಹಾಗೂ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ (District Mineral Foundation - DMF) ನಿಧಿಯಿಂದ…
ಕೂಡ್ಲಿಗಿ (ವಿಜಯನಗರ): 2019ರಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ನ್ಯಾಯಾಲಯ ಆದೇಶಿಸಿದ್ದ ಪರಿಹಾರವನ್ನು ಹಲವು ವರ್ಷಗಳಾದರೂ…
ಮುರ್ಡೇಶ್ವರ: ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಮಹಿಳೆಯ ಕುತ್ತಿಗೆಯಿಂದ ಬಂಗಾರದ ಚೈನ್ ಕಸಿದು ಪರಾರಿಯಾಗಿದ್ದ ಪ್ರಕರಣವನ್ನು ಮುರ್ಡೇಶ್ವರ ಪೊಲೀಸರು ಕೇವಲ 24 ಗಂಟೆಯೊಳಗೆ…
ನವದೆಹಲಿ: ಮೇಘಾಲಯದಲ್ಲಿ ಹನಿಮೂನ್ ವೇಳೆ ಪತಿ ರಾಜಾ ರಘುವಂಶಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸೋನಂ ರಘುವಂಶಿ ಅವರಿಗೆ ಸುಪ್ರೀಂ…
ರಾಮ್ಪುರ: ಉತ್ತರ ಪ್ರದೇಶದ ರಾಮ್ಪುರ ಜಿಲ್ಲೆಯ ತಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕುಟುಂಬ ಕಲಹಕ್ಕೆ ಸಂಬಂಧಿಸಿದ ಅಪರೂಪದ ತೀರ್ಪೊಂದು ಬೆಳಕಿಗೆ…