Categories: CrimeLatest

ತಮ್ಮ ಮದುವೆಯಾಗಬೇಕಿದ್ದ ಹುಡುಗಿಗೆ ಅಣ್ಣ ಫಿದಾ; ಹೆಣ್ಣಿಗಾಗಿ ತಮ್ಮನ ಹತ್ಯೆ..!

ಗದಗ ಜಿಲ್ಲೆಯ ನರಗುಂದ ತಾಲೂಕಿನ ಹಿರೇಕೊಪ್ಪ ಗ್ರಾಮದ ಹೊರವಲಯದಲ್ಲಿ ಮನಕಲಕುವ ಘಟನೆ ನಡೆದಿದೆ. ತಮ್ಮನಿಗೆ ನಿಶ್ಚಯವಾಗಿದ್ದ ಹುಡುಗಿಯ ಮೇಲೆಯೇ ಕಣ್ಣಿಟ್ಟ ಅಣ್ಣ, ಆಕೆಯನ್ನು ಪಡೆಯಬೇಕೆಂಬ ಹುಚ್ಚು ಆಸೆಯಿಂದ ಸ್ವಂತ ತಮ್ಮನನ್ನೇ ಹತ್ಯೆ ಮಾಡಿದ ಕಿರಾತಕ ಘಟನೆ ಬೆಳಕಿಗೆ ಬಂದಿದೆ.

ಮೂಲತಃ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಚಿಕ್ಕಮೂಲಂಗಿ ಗ್ರಾಮದ ನಿವಾಸಿಗಳಾದ ಅಶೋಕ ಮತ್ತು ಫಕ್ಕೀರಪ್ಪ ಸಹೋದರರು ಕುರಿಗಾಹಿಗಳಾಗಿದ್ದು, ಕೆಲಸದ ನಿಮಿತ್ತ ಗದಗ ಜಿಲ್ಲೆಗೆ ಬಂದಿದ್ದರು. ಇವರಿಬ್ಬರ ಮದುವೆ ಮಾಡಲು ಕುಟುಂಬಸ್ಥರು ಸಿದ್ಧತೆ ನಡೆಸುತ್ತಿದ್ದರು. ಅಶೋಕನಿಗೆ ಒಂದು ಹುಡುಗಿ ನಿಶ್ಚಯವಾಗಿದ್ದರೂ, ಅವನಿಗೆ ಆಸಕ್ತಿ ಇರಲಿಲ್ಲ. ಆದರೆ ತಮ್ಮ ಫಕ್ಕೀರಪ್ಪನಿಗೆ ನಿಶ್ಚಯವಾಗಿದ್ದ ಹುಡುಗಿಯ ಮೇಲೆಯೇ ಅಶೋಕನ ಮನಸ್ಸು ಹೋಗಿತ್ತು.

ಈ ವಿಷಯವಾಗಿ ಸಹೋದರರ ನಡುವೆ ಹಲವಾರು ಬಾರಿ ಜಗಳ ನಡೆದಿದ್ದು, ಘಟನೆ ನಡೆದ ದಿನವೂ ರಾತ್ರಿ ಇಬ್ಬರ ಮಧ್ಯೆ ವಾಗ್ವಾದ ನಡೆದಿದೆ. ವಾಗ್ವಾದ ತಾರಕ್ಕೇರಿದಾಗ, ಅಶೋಕ ಸುಮಾರು 20-25 ಕೆ.ಜಿ ತೂಕದ ಕಲ್ಲನ್ನು ಫಕ್ಕೀರಪ್ಪನ ತಲೆಗೆ ಎತ್ತಿ ಹಾಕಿ ಕೊಲೆ ಮಾಡಿದ್ದಾನೆ. ನಂತರ ಯಾರೋ ಅಪರಿಚಿತರು ಕೊಲೆ ಮಾಡಿದ್ದಾರೆ ಎಂಬಂತೆ ನಾಟಕವಾಡಲು ಯತ್ನಿಸಿದ್ದಾನೆ.

ಕೊಲೆ ನಡೆದ ಬಳಿಕ ಅಶೋಕ ತಾನೇ ಪಾಲಕರಿಗೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿ, ದುಷ್ಕರ್ಮಿಗಳು ತಮ್ಮನನ್ನು ಹತ್ಯೆ ಮಾಡಿದ್ದಾರೆ ಎಂದು ಕಥೆ ಕಟ್ಟಲು ಮುಂದಾಗಿದ್ದ. ಆದರೆ ಸ್ಥಳಕ್ಕೆ ಬಂದ ಶ್ವಾನ ದಳ ನೇರವಾಗಿ ಅಶೋಕನ ಬಳಿ ಹೋಗಿ ನಿಂತಿತ್ತು. ಇದರಿಂದ ಅನುಮಾನಗೊಂಡ ಪೊಲೀಸರು ಅಶೋಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಕೊಲೆ ಮಾಡಿದುದಾಗಿ ಆತ ಒಪ್ಪಿಕೊಂಡಿದ್ದಾನೆ.

ತಮ್ಮನನ್ನು ಕೊಂದು ಆ ಹುಡುಗಿಯನ್ನು ಮದುವೆಯಾಗಬೇಕೆಂಬ ದುಷ್ಟ ಉದ್ದೇಶದಿಂದ ನಡೆದ ಈ ಕೃತ್ಯ ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಕೊಲೆ ಮಾಡಿದ ಕೆಲವೇ ಗಂಟೆಗಳಲ್ಲೇ ಆರೋಪಿಯನ್ನು ಬಂಧಿಸಿರುವ ಗದಗ ಪೊಲೀಸರ ಕಾರ್ಯ ಶ್ಲಾಘನೀಯವಾಗಿದೆ.

ಒಡಹುಟ್ಟಿದ ತಮ್ಮನನ್ನೇ ಹೆಣ್ಣಿಗಾಗಿ ಕೊಲೆ ಮಾಡಿದ ಅಶೋಕ ಇದೀಗ ಜೈಲು ಸೇರುವಂತಾಗಿದೆ. ಈ ಘಟನೆ ಮಾನವೀಯ ಸಂಬಂಧಗಳ ಮೌಲ್ಯಗಳನ್ನು ಪ್ರಶ್ನಿಸುವಂತಿದೆ.

ಭ್ರಷ್ಟರ ಬೇಟೆ

Recent Posts

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

4 minutes ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

4 minutes ago

ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆಗೆ ಭೂಸ್ವಾಧೀನ ಅಧಿಕೃತ ಚಾಲನೆ

163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…

5 minutes ago

ಪಾಂಡೆಗಾಂವ–ಕಂಗೋಳಿ ರಸ್ತೆ ಕೆಸರಿನ ಹೊಂಡ: ಜನರ ಆಕ್ರೋಶ, ಕಾಮಗಾರಿ ವಿಳಂಬವಾದರೆ ರಸ್ತೆ ತಡೆ ಎಚ್ಚರಿಕೆ

ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…

7 minutes ago

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

15 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

15 hours ago