ಸಕಲೇಶಪುರದ ಕಾಫಿ ತೋಟಕ್ಕೆ ಕೂಲಿ ಕೆಲಸಕ್ಕೆ ಬಂದಿದ್ದ 14 ವರ್ಷದ ಬಾಲಕಿಯ ಮೇಲೆ ತೋಟದ ಮಾಲೀಕ ಮತ್ತು ಇಬ್ಬರು ಸಂಬಂಧಿಗಳು ಸೇರಿ ಮೂವರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಕಾಫಿ ಬೀಜಗಳನ್ನು ಬಿಡಿಸಲು ತೋಟಕ್ಕೆ ಪೋಷಕರೊಂದಿಗೆ ಬಂದಿದ್ದ 14 ವರ್ಷದ ಬಾಲಕಿಯ ಮೇಲೆ ತೋಟದ ಮಾಲೀಕ ಮತ್ತು ಸಂಬಂಧಿಕರು ಅತ್ಯಾಚಾರ ಮಾಡಿ ಬಾಯಿಬಿಡದಂತೆ ಜೀವ ಬೆದರಿಕೆ ಹಾಕಿದ್ದರು.
ಬಾಲಕಿ ಕೂಲಿ ಕೆಲಸಕ್ಕೆ ಬಂದಿರುವಾಗ ವಾಂತಿ ಮಾಡಿಕೊಂಡಿದ್ದಾಳೆ. ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದಾಗ ಗರ್ಭಿಣಿ ಆಗಿರುವುದು ಪತ್ತೆಯಾಗಿದೆ. ಪೋಷಕರು ಕೇಳಿದಾಗ ತೋಟದ ಮಾಲೀಕ ಸ್ವಾಗತ್ ಮತ್ತವರ ಸಂಬಂಧಿಕರಾದ ಸುದರ್ಶನ್, ಪಾಪಣ್ಣ ಅತ್ಯಾಚಾರ ಮಾಡಿದ ವಿಚಾರವನ್ನು ಬಾಯಿ ಬಿಟ್ಟಿದ್ದಾಳೆ.
ಆರೋಪಿಗಳಾದ ಸ್ವಾಗತ್, ಸುದರ್ಶನ್ ಮತ್ತು ಪಾಪಣ್ಣ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕಿಯನ್ನು ಮಕ್ಕಳ ರಕ್ಷಣಾ ಸಮಿತಿಯ ಕೇಂದ್ರದಲ್ಲಿ ಇರಿಸಲಾಗಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…