ಸರ್ಕಾರಿ ಕೆಲಸಕ್ಕೆ ಪದೇ ಪದೇ ಅಡ್ಡಿಪಡಿಸುತ್ತಿರುವ ನಕಲಿ ಪತ್ರಕರ್ತರನ್ನು ನಿಯಂತ್ರಿಸುವಂತೆ ಆಗ್ರಹಿಸಿ ಹಳಿಯಾಳ ಕರ್ನಾಟಕ ರಾಜ್ಯ ನೌಕರರ ಸಂಘದ ಮೂಲಕ ತಾಲೂಕಾ ಆಡಳಿತಕ್ಕೆ ಮನವಿ ನಿಡಿದ ಸರ್ಕಾರಿ ಅಧಿಕಾರಿಗಳು
ಹಳಿಯಾಳ-ಸರ್ಕಾರಿ ಕೆಲಸಕ್ಕೆ ಪದೇ ಪದೇ ಅಡ್ಡಿಪಡಿಸುತ್ತಿರುವ ನಕಲಿ ಪತ್ರಕರ್ತರನ್ನು ನಿಯಂತ್ರಿಸಿ’ ಎಂದು ಹಳಿಯಾಳದ ವಿವಿಧ ಅಧಿಕಾರಿಗಳು ಅಳಲು ತೋಡಿಕೊಂಡಿದ್ದಾರೆ. ಕರ್ನಾಟಕ ರಾಜ್ಯ ನೌಕರರ ಸಂಘದ ಮೂಲಕ ಈ ಬಗ್ಗೆ ತಾಲೂಕಾ ಆಡಳಿತಕ್ಕೂ ನೌಕರರು ಪತ್ರ ಬರೆದಿದ್ದಾರೆ!
ಯಾವುದೇ ನೋಂದಣಿ, ಮಾನ್ಯತೆಗಳಿಲ್ಲದೇ ಪತ್ರಕರ್ತ ಎಂಬ ಸೋಗಿನಲ್ಲಿ ಅಧಿಕಾರಿ-ಸಿಬ್ಬಂದಿ ಕಾಡಿಸುವವರ ಸಂಖ್ಯೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಾಗಿದೆ. ನಕಲಿ ಪತ್ರಕರ್ತರ ಹಾವಳಿಗೆ ಅಧಿಕಾರಿಗಳು ತತ್ತರಿಸಿದ್ದಾರೆ. ಇದೇ ರೀತಿ ಗಣೇಶ ರಾಥೋಡ್ ಎಂಬಾತರು ಅಧಿಕಾರಿಗಳಿಗೆ ಅನಗತ್ಯ ತೊಂದರೆ ನೀಡುತ್ತಿದ್ದು, ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಹಳಿಯಾಳದ ನೌಕರರು ಒತ್ತಾಯಿಸಿದ್ದಾರೆ.
`ಫೆಬ್ರವರಿ 3ರಂದು ಆಸ್ಪತ್ರೆಗೆ ನುಗ್ಗಿದ ಗಣೇಶ ರಾಥೋಡ್ ಹಾಗೂ ದಿವ್ಯಾ ಮಾಹಾಜನ್ ಎಂಬಾತರು ಅಲ್ಲಿನ ವೈದ್ಯಾಧಿಕಾರಿಗಳ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ. ಕಚೇರಿಯಲ್ಲಿದ್ದ ಸಿಬ್ಬಂದಿ ತೇಜಸ್ವಿ ಪಾಲೇಕರ್ ಹಾಗೂ ವೈದ್ಯೆ ಡಾ ಸೋನಾ ಅವರ ವಿಡಿಯೋ ಮಾಡಿ, ಮಾನ ಕಳೆಯುವುದಾಗಿ ಬೆದರಿಕೆ ಒಡ್ಡಿದ್ದಾರೆ. ಈ ಬಗ್ಗೆ ಪೊಲೀಸ್ ದೂರು ನೀಡಲಾಗಿದ್ದು, ಅವರ ವಿರುದ್ಧ ತಾಲೂಕಾಡಳಿತವೂ ಕಠಿಣ ಕ್ರಮ ಜರುಗಿಸಬೇಕು’ ಎಂದು ಸರ್ಕಾರಿ ನೌಕರರ ಸಂಘದವರು ಆಗ್ರಹಿಸಿದ್ದಾರೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…