Latest

ನಕಲಿ ಪತ್ರಕರ್ತರ ಹಾವಳಿ ತಡೆಯುವಂತೆ ಸರ್ಕಾರಿ ನೌಕರರ ಸಂಘದಿಂದ ಒತ್ತಾಯ.

ಸರ್ಕಾರಿ ಕೆಲಸಕ್ಕೆ ಪದೇ ಪದೇ ಅಡ್ಡಿಪಡಿಸುತ್ತಿರುವ ನಕಲಿ ಪತ್ರಕರ್ತರನ್ನು ನಿಯಂತ್ರಿಸುವಂತೆ ಆಗ್ರಹಿಸಿ ಹಳಿಯಾಳ ಕರ್ನಾಟಕ ರಾಜ್ಯ ನೌಕರರ ಸಂಘದ ಮೂಲಕ ತಾಲೂಕಾ ಆಡಳಿತಕ್ಕೆ ಮನವಿ ನಿಡಿದ ಸರ್ಕಾರಿ ಅಧಿಕಾರಿಗಳು

ಹಳಿಯಾಳ-ಸರ್ಕಾರಿ ಕೆಲಸಕ್ಕೆ ಪದೇ ಪದೇ ಅಡ್ಡಿಪಡಿಸುತ್ತಿರುವ ನಕಲಿ ಪತ್ರಕರ್ತರನ್ನು ನಿಯಂತ್ರಿಸಿ’ ಎಂದು ಹಳಿಯಾಳದ ವಿವಿಧ ಅಧಿಕಾರಿಗಳು ಅಳಲು ತೋಡಿಕೊಂಡಿದ್ದಾರೆ. ಕರ್ನಾಟಕ ರಾಜ್ಯ ನೌಕರರ ಸಂಘದ ಮೂಲಕ ಈ ಬಗ್ಗೆ ತಾಲೂಕಾ ಆಡಳಿತಕ್ಕೂ ನೌಕರರು ಪತ್ರ ಬರೆದಿದ್ದಾರೆ!

ಯಾವುದೇ ನೋಂದಣಿ, ಮಾನ್ಯತೆಗಳಿಲ್ಲದೇ ಪತ್ರಕರ್ತ ಎಂಬ ಸೋಗಿನಲ್ಲಿ ಅಧಿಕಾರಿ-ಸಿಬ್ಬಂದಿ ಕಾಡಿಸುವವರ ಸಂಖ್ಯೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಾಗಿದೆ. ನಕಲಿ ಪತ್ರಕರ್ತರ ಹಾವಳಿಗೆ ಅಧಿಕಾರಿಗಳು ತತ್ತರಿಸಿದ್ದಾರೆ. ಇದೇ ರೀತಿ ಗಣೇಶ ರಾಥೋಡ್ ಎಂಬಾತರು ಅಧಿಕಾರಿಗಳಿಗೆ ಅನಗತ್ಯ ತೊಂದರೆ ನೀಡುತ್ತಿದ್ದು, ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಹಳಿಯಾಳದ ನೌಕರರು ಒತ್ತಾಯಿಸಿದ್ದಾರೆ.

`ಫೆಬ್ರವರಿ 3ರಂದು ಆಸ್ಪತ್ರೆಗೆ ನುಗ್ಗಿದ ಗಣೇಶ ರಾಥೋಡ್ ಹಾಗೂ ದಿವ್ಯಾ ಮಾಹಾಜನ್ ಎಂಬಾತರು ಅಲ್ಲಿನ ವೈದ್ಯಾಧಿಕಾರಿಗಳ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ. ಕಚೇರಿಯಲ್ಲಿದ್ದ ಸಿಬ್ಬಂದಿ ತೇಜಸ್ವಿ ಪಾಲೇಕರ್ ಹಾಗೂ ವೈದ್ಯೆ ಡಾ ಸೋನಾ ಅವರ ವಿಡಿಯೋ ಮಾಡಿ, ಮಾನ ಕಳೆಯುವುದಾಗಿ ಬೆದರಿಕೆ ಒಡ್ಡಿದ್ದಾರೆ. ಈ ಬಗ್ಗೆ ಪೊಲೀಸ್ ದೂರು ನೀಡಲಾಗಿದ್ದು, ಅವರ ವಿರುದ್ಧ ತಾಲೂಕಾಡಳಿತವೂ ಕಠಿಣ ಕ್ರಮ ಜರುಗಿಸಬೇಕು’ ಎಂದು ಸರ್ಕಾರಿ ನೌಕರರ ಸಂಘದವರು ಆಗ್ರಹಿಸಿದ್ದಾರೆ.

nazeer ahamad

Recent Posts

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

12 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

12 hours ago

ಕಳ್ಳತನ ತಡೆಗೆ ಮುಂಡಗೋಡ ಪೊಲೀಸರ ಕಟ್ಟೆಚ್ಚರ; ರಾತ್ರಿ ಗಸ್ತು, ವಾಹನ ತಪಾಸಣೆ ಚುರುಕು

ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…

12 hours ago

ಹೆದ್ದಾರಿ ಬದಿಯಲ್ಲಿ ಪತಿಯ ಶವ… ರಸ್ತೆ ಅಪಘಾತವೆಂದು ನಂಬಿಸಿದ್ದರು! ತನಿಖೆಯಲ್ಲಿ ಬಯಲಾಯ್ತು ಹೆಂಡತಿಯೇ ಹೆಣೆದ ಭೀಕರ ಕೊಲೆ ಸಂಚು

ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…

12 hours ago

ಡೇಟಿಂಗ್ ಆ್ಯಪ್‌ ಮೂಲಕ ‘ಹನಿ ಟ್ರ್ಯಾಪ್’! ಶ್ರೀಮಂತ ಪುರುಷರನ್ನು ಬಲೆಗೆ ಬೀಳಿಸಿ ₹6 ಕೋಟಿಗೂ ಅಧಿಕ ಲೂಟಿ

ಪ್ರಯಾಗ್‌ರಾಜ್: ಡೇಟಿಂಗ್ ಆ್ಯಪ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…

12 hours ago

ರೇಣುಕಾಸ್ವಾಮಿ ಮೇಲೆ ದರ್ಶನ್‌ ಹಲ್ಲೆ ಆರೋಪ: ಜನನಾಂಗಕ್ಕೆ ಒದ್ದು, ಎದೆ ಮೇಲೆ ಕಾಲಿಟ್ಟು ತುಳಿದಿದ್ದರೆಂದು ಮಾಫಿ ಸಾಕ್ಷಿ ಹೇಳಿಕೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…

12 hours ago