ಸರ್ಕಾರಿ ಕೆಲಸಕ್ಕೆ ಪದೇ ಪದೇ ಅಡ್ಡಿಪಡಿಸುತ್ತಿರುವ ನಕಲಿ ಪತ್ರಕರ್ತರನ್ನು ನಿಯಂತ್ರಿಸುವಂತೆ ಆಗ್ರಹಿಸಿ ಹಳಿಯಾಳ ಕರ್ನಾಟಕ ರಾಜ್ಯ ನೌಕರರ ಸಂಘದ ಮೂಲಕ ತಾಲೂಕಾ ಆಡಳಿತಕ್ಕೆ ಮನವಿ ನಿಡಿದ ಸರ್ಕಾರಿ ಅಧಿಕಾರಿಗಳು
ಹಳಿಯಾಳ-ಸರ್ಕಾರಿ ಕೆಲಸಕ್ಕೆ ಪದೇ ಪದೇ ಅಡ್ಡಿಪಡಿಸುತ್ತಿರುವ ನಕಲಿ ಪತ್ರಕರ್ತರನ್ನು ನಿಯಂತ್ರಿಸಿ’ ಎಂದು ಹಳಿಯಾಳದ ವಿವಿಧ ಅಧಿಕಾರಿಗಳು ಅಳಲು ತೋಡಿಕೊಂಡಿದ್ದಾರೆ. ಕರ್ನಾಟಕ ರಾಜ್ಯ ನೌಕರರ ಸಂಘದ ಮೂಲಕ ಈ ಬಗ್ಗೆ ತಾಲೂಕಾ ಆಡಳಿತಕ್ಕೂ ನೌಕರರು ಪತ್ರ ಬರೆದಿದ್ದಾರೆ!
ಯಾವುದೇ ನೋಂದಣಿ, ಮಾನ್ಯತೆಗಳಿಲ್ಲದೇ ಪತ್ರಕರ್ತ ಎಂಬ ಸೋಗಿನಲ್ಲಿ ಅಧಿಕಾರಿ-ಸಿಬ್ಬಂದಿ ಕಾಡಿಸುವವರ ಸಂಖ್ಯೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಾಗಿದೆ. ನಕಲಿ ಪತ್ರಕರ್ತರ ಹಾವಳಿಗೆ ಅಧಿಕಾರಿಗಳು ತತ್ತರಿಸಿದ್ದಾರೆ. ಇದೇ ರೀತಿ ಗಣೇಶ ರಾಥೋಡ್ ಎಂಬಾತರು ಅಧಿಕಾರಿಗಳಿಗೆ ಅನಗತ್ಯ ತೊಂದರೆ ನೀಡುತ್ತಿದ್ದು, ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಹಳಿಯಾಳದ ನೌಕರರು ಒತ್ತಾಯಿಸಿದ್ದಾರೆ.
`ಫೆಬ್ರವರಿ 3ರಂದು ಆಸ್ಪತ್ರೆಗೆ ನುಗ್ಗಿದ ಗಣೇಶ ರಾಥೋಡ್ ಹಾಗೂ ದಿವ್ಯಾ ಮಾಹಾಜನ್ ಎಂಬಾತರು ಅಲ್ಲಿನ ವೈದ್ಯಾಧಿಕಾರಿಗಳ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ. ಕಚೇರಿಯಲ್ಲಿದ್ದ ಸಿಬ್ಬಂದಿ ತೇಜಸ್ವಿ ಪಾಲೇಕರ್ ಹಾಗೂ ವೈದ್ಯೆ ಡಾ ಸೋನಾ ಅವರ ವಿಡಿಯೋ ಮಾಡಿ, ಮಾನ ಕಳೆಯುವುದಾಗಿ ಬೆದರಿಕೆ ಒಡ್ಡಿದ್ದಾರೆ. ಈ ಬಗ್ಗೆ ಪೊಲೀಸ್ ದೂರು ನೀಡಲಾಗಿದ್ದು, ಅವರ ವಿರುದ್ಧ ತಾಲೂಕಾಡಳಿತವೂ ಕಠಿಣ ಕ್ರಮ ಜರುಗಿಸಬೇಕು’ ಎಂದು ಸರ್ಕಾರಿ ನೌಕರರ ಸಂಘದವರು ಆಗ್ರಹಿಸಿದ್ದಾರೆ.
ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…
ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…
ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…
ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್ನಲ್ಲಿ ಶ್ರೀಕೃಷ್ಣನ…
ಇರಾನ್ ಮತ್ತು ಲೆಬನಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಮನವಾಗುತ್ತಿರುವ ಹಿನ್ನೆಲೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಾರ್ಮುಝ್ ಜಲಸಂಧಿಯನ್ನು ಮತ್ತೆ ಎಲ್ಲಾ…
ಛತ್ತೀಸ್ಗಢದ ದುರ್ಗ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ನಡೆದ ಅಪಹರಣ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. 14…