ಸರ್ಕಾರಿ ಕೆಲಸಕ್ಕೆ ಪದೇ ಪದೇ ಅಡ್ಡಿಪಡಿಸುತ್ತಿರುವ ನಕಲಿ ಪತ್ರಕರ್ತರನ್ನು ನಿಯಂತ್ರಿಸುವಂತೆ ಆಗ್ರಹಿಸಿ ಹಳಿಯಾಳ ಕರ್ನಾಟಕ ರಾಜ್ಯ ನೌಕರರ ಸಂಘದ ಮೂಲಕ ತಾಲೂಕಾ ಆಡಳಿತಕ್ಕೆ ಮನವಿ ನಿಡಿದ ಸರ್ಕಾರಿ ಅಧಿಕಾರಿಗಳು
ಹಳಿಯಾಳ-ಸರ್ಕಾರಿ ಕೆಲಸಕ್ಕೆ ಪದೇ ಪದೇ ಅಡ್ಡಿಪಡಿಸುತ್ತಿರುವ ನಕಲಿ ಪತ್ರಕರ್ತರನ್ನು ನಿಯಂತ್ರಿಸಿ’ ಎಂದು ಹಳಿಯಾಳದ ವಿವಿಧ ಅಧಿಕಾರಿಗಳು ಅಳಲು ತೋಡಿಕೊಂಡಿದ್ದಾರೆ. ಕರ್ನಾಟಕ ರಾಜ್ಯ ನೌಕರರ ಸಂಘದ ಮೂಲಕ ಈ ಬಗ್ಗೆ ತಾಲೂಕಾ ಆಡಳಿತಕ್ಕೂ ನೌಕರರು ಪತ್ರ ಬರೆದಿದ್ದಾರೆ!
ಯಾವುದೇ ನೋಂದಣಿ, ಮಾನ್ಯತೆಗಳಿಲ್ಲದೇ ಪತ್ರಕರ್ತ ಎಂಬ ಸೋಗಿನಲ್ಲಿ ಅಧಿಕಾರಿ-ಸಿಬ್ಬಂದಿ ಕಾಡಿಸುವವರ ಸಂಖ್ಯೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಾಗಿದೆ. ನಕಲಿ ಪತ್ರಕರ್ತರ ಹಾವಳಿಗೆ ಅಧಿಕಾರಿಗಳು ತತ್ತರಿಸಿದ್ದಾರೆ. ಇದೇ ರೀತಿ ಗಣೇಶ ರಾಥೋಡ್ ಎಂಬಾತರು ಅಧಿಕಾರಿಗಳಿಗೆ ಅನಗತ್ಯ ತೊಂದರೆ ನೀಡುತ್ತಿದ್ದು, ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಹಳಿಯಾಳದ ನೌಕರರು ಒತ್ತಾಯಿಸಿದ್ದಾರೆ.
`ಫೆಬ್ರವರಿ 3ರಂದು ಆಸ್ಪತ್ರೆಗೆ ನುಗ್ಗಿದ ಗಣೇಶ ರಾಥೋಡ್ ಹಾಗೂ ದಿವ್ಯಾ ಮಾಹಾಜನ್ ಎಂಬಾತರು ಅಲ್ಲಿನ ವೈದ್ಯಾಧಿಕಾರಿಗಳ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ. ಕಚೇರಿಯಲ್ಲಿದ್ದ ಸಿಬ್ಬಂದಿ ತೇಜಸ್ವಿ ಪಾಲೇಕರ್ ಹಾಗೂ ವೈದ್ಯೆ ಡಾ ಸೋನಾ ಅವರ ವಿಡಿಯೋ ಮಾಡಿ, ಮಾನ ಕಳೆಯುವುದಾಗಿ ಬೆದರಿಕೆ ಒಡ್ಡಿದ್ದಾರೆ. ಈ ಬಗ್ಗೆ ಪೊಲೀಸ್ ದೂರು ನೀಡಲಾಗಿದ್ದು, ಅವರ ವಿರುದ್ಧ ತಾಲೂಕಾಡಳಿತವೂ ಕಠಿಣ ಕ್ರಮ ಜರುಗಿಸಬೇಕು’ ಎಂದು ಸರ್ಕಾರಿ ನೌಕರರ ಸಂಘದವರು ಆಗ್ರಹಿಸಿದ್ದಾರೆ.
₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…
ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್ನಿಂದ ಹಣ ಪಡೆದು ಹೊರಬಂದ…
ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…
ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…
ಪ್ರಯಾಗ್ರಾಜ್: ಡೇಟಿಂಗ್ ಆ್ಯಪ್ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…