2016ರ ಆಗಸ್ಟ್ನಲ್ಲಿ ಕೆಂಗೇರಿ ಸ್ಯಾಟಲೈಟ್ನಲ್ಲಿ ಕೊಲೆ ಮಾಡಿ 6 ತಿಂಗಳು ಮನೆಯಲ್ಲೇ ಶವವನ್ನು ಆರೋಪಿಗಳು ಹೂತಿಟ್ಟಿದ್ದರು. ಶಾಂತಕುಮಾರಿ, ಮಗಳು ಶಶಿಕಲಾ, ಮೊಮ್ಮಗ ಸಂಜಯ್ ಒಟ್ಟಿಗೆ ವಾಸವಾಗಿದ್ದು, ಮೊಮ್ಮಗ ಸಂಜಯ್ ಅಜ್ಜಿಗೆ ರಸ್ತೆ ಬದಿಯಲ್ಲಿ ಮಾರುತ್ತಿದ್ದ ಗೋಬಿ ಮಂಚೂರಿ ತಂದು ಕೊಟ್ಟಿದ್ದ. ಮಡಿವಂತಿಕೆ, ಶಿಸ್ತಿನಿಂದ ಇರುತ್ತಿದ್ದ ಶಾಂತಮ್ಮ ಗೋಬಿ ಮಂಚೂರಿ ತಂದಿದ್ದಕ್ಕೆ ಸಿಟ್ಟುಗೊಂಡು ಸಂಜಯ್ ಮುಖಕ್ಕೆ ಎಸೆದು ನಿಂದಿಸಿದ್ದರು.
ಕೋಪಗೊಂಡ ಸಂಜಯ್ ಅಜ್ಜಿ ತಲೆಗೆ ಲಟ್ಟಣಿಗೆಯಿಂದ ಹೊಡೆದು ಕೊಲೆ ಮಾಡಿದ್ದ. ನಂತರ ಶವವನ್ನು ಕೆಮಿಕಲ್ ಹಾಕಿ ಕಬೋರ್ಡ್ನಲ್ಲಿ ಮುಚ್ಚಿಟ್ಟು, ಊರಿಗೆ ಹೋಗಿ ಬರುತ್ತೇವೆ ಅಂತ ಯಾರಿಗೂ ಅನುಮಾನ ಬಾರದಂತೆ ತಾಯಿ-ಮಗ ಮನೆ ಖಾಲಿ ಮಾಡಿದ್ದರು.
6 ತಿಂಗಳ ಬಳಿಕ ಮನೆ ಮಾಲೀಕ ಮನೆ ರಿಪೇರಿ ಮಾಡಿಸಲು ಹೋದಾಗ ಶವದ ಅಸ್ಥಿಪಂಜರ ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಂಜಯ್ ಸ್ನೇಹಿತ ನಂದೀಶ್ ನನ್ನು ಬಂಧಿಸಿದ್ದರು. ಆದರೆ ಕೊಲೆಗೈದ ಮಗಳು ಮತ್ತು ಮೊಮ್ಮಗ ಪತ್ತೆಯಾಗಿರಲಿಲ್ಲ.
5 ವರ್ಷಗಳ ನಂತರ ಮೊಮ್ಮಗ ಸಂಜಯ್ ಹಾಗೂ ಮಗಳು ಶಶಿಕಲಾರನ್ನು ಕೆಂಗೇರಿ ಪೊಲೀಸರು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಬಂಧಿಸಿದ್ದಾರೆ.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…