2016ರ ಆಗಸ್ಟ್ನಲ್ಲಿ ಕೆಂಗೇರಿ ಸ್ಯಾಟಲೈಟ್ನಲ್ಲಿ ಕೊಲೆ ಮಾಡಿ 6 ತಿಂಗಳು ಮನೆಯಲ್ಲೇ ಶವವನ್ನು ಆರೋಪಿಗಳು ಹೂತಿಟ್ಟಿದ್ದರು. ಶಾಂತಕುಮಾರಿ, ಮಗಳು ಶಶಿಕಲಾ, ಮೊಮ್ಮಗ ಸಂಜಯ್ ಒಟ್ಟಿಗೆ ವಾಸವಾಗಿದ್ದು, ಮೊಮ್ಮಗ ಸಂಜಯ್ ಅಜ್ಜಿಗೆ ರಸ್ತೆ ಬದಿಯಲ್ಲಿ ಮಾರುತ್ತಿದ್ದ ಗೋಬಿ ಮಂಚೂರಿ ತಂದು ಕೊಟ್ಟಿದ್ದ. ಮಡಿವಂತಿಕೆ, ಶಿಸ್ತಿನಿಂದ ಇರುತ್ತಿದ್ದ ಶಾಂತಮ್ಮ ಗೋಬಿ ಮಂಚೂರಿ ತಂದಿದ್ದಕ್ಕೆ ಸಿಟ್ಟುಗೊಂಡು ಸಂಜಯ್ ಮುಖಕ್ಕೆ ಎಸೆದು ನಿಂದಿಸಿದ್ದರು.
ಕೋಪಗೊಂಡ ಸಂಜಯ್ ಅಜ್ಜಿ ತಲೆಗೆ ಲಟ್ಟಣಿಗೆಯಿಂದ ಹೊಡೆದು ಕೊಲೆ ಮಾಡಿದ್ದ. ನಂತರ ಶವವನ್ನು ಕೆಮಿಕಲ್ ಹಾಕಿ ಕಬೋರ್ಡ್ನಲ್ಲಿ ಮುಚ್ಚಿಟ್ಟು, ಊರಿಗೆ ಹೋಗಿ ಬರುತ್ತೇವೆ ಅಂತ ಯಾರಿಗೂ ಅನುಮಾನ ಬಾರದಂತೆ ತಾಯಿ-ಮಗ ಮನೆ ಖಾಲಿ ಮಾಡಿದ್ದರು.
6 ತಿಂಗಳ ಬಳಿಕ ಮನೆ ಮಾಲೀಕ ಮನೆ ರಿಪೇರಿ ಮಾಡಿಸಲು ಹೋದಾಗ ಶವದ ಅಸ್ಥಿಪಂಜರ ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಂಜಯ್ ಸ್ನೇಹಿತ ನಂದೀಶ್ ನನ್ನು ಬಂಧಿಸಿದ್ದರು. ಆದರೆ ಕೊಲೆಗೈದ ಮಗಳು ಮತ್ತು ಮೊಮ್ಮಗ ಪತ್ತೆಯಾಗಿರಲಿಲ್ಲ.
5 ವರ್ಷಗಳ ನಂತರ ಮೊಮ್ಮಗ ಸಂಜಯ್ ಹಾಗೂ ಮಗಳು ಶಶಿಕಲಾರನ್ನು ಕೆಂಗೇರಿ ಪೊಲೀಸರು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಬಂಧಿಸಿದ್ದಾರೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…