12ನೇ ತರಗತಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಾಳೆ ಎಂಬ ಕಾರಣಕ್ಕೆ ವರನೊಬ್ಬ ವಧುವನ್ನು ಮದುವೆಯಾಗಲು ನಿರಾಕರಿಸಿದ್ದಾನೆ. ಉತ್ತರ ಪ್ರದೇಶದ ಕನೌಜ್ ಜಿಲ್ಲೆಯಲ್ಲಿ ಈ ವಿಲಕ್ಷಣ ಘಟನೆ ವರದಿಯಾಗಿದೆ. ಪೊಲೀಸರು ಎರಡು ಕುಟುಂಬಗಳಿಗೆ ಕೌನ್ಸಿಲಿಂಗ್ ಮಾಡುವ ಮೂಲಕ ಪ್ರಕರಣವನ್ನು ಭೇದಿಸಲು ಪ್ರಯತ್ನಿಸುತ್ತಿದ್ದಾರೆ.
ಆದಾಗ್ಯೂ, ಎರಡೂ ಕುಟುಂಬಗಳು ಒಮ್ಮತಕ್ಕೆ ಬರದಿದ್ದರೆ, ಪೊಲೀಸರು ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ತಿರ್ವಾ ಕೊತ್ವಾಲಿ ಪ್ರದೇಶದ ಪೊಲೀಸ್ ಠಾಣೆಯ ಪ್ರಭಾರಿ ಪಿಎನ್ ಬಾಜ್ಪೈ ಹೇಳಿದ್ದಾರೆ. ವರದಿಯ ಪ್ರಕಾರ, ವಧುವಿನ ಕುಟುಂಬವು ತಮ್ಮ ವರದಕ್ಷಿಣೆ ಬೇಡಿಕೆಗಳನ್ನು ಈಡೇರಿಸದ ಕಾರಣ ವರನ ಕುಟುಂಬವು ಮದುವೆಯನ್ನು ರದ್ದುಗೊಳಿಸಿದೆ ಎಂದು ಆರೋಪಿಸಿ ವರನ ಕುಟುಂಬದ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಆದರೆ, 12ನೇ ತರಗತಿ ಅಂಕಪಟ್ಟಿಯಲ್ಲಿ ವಧುವಿಗೆ ಕಡಿಮೆ ಅಂಕ ಬಂದಿದೆ ಎಂದು ತಿಳಿಸಿದ್ದಾರೆ.
ಬಾಗನವಾ ಗ್ರಾಮದ ರಾಮಶಂಕರ್ ಎಂಬುವವರ ಪುತ್ರ ಸೋನು ಎಂಬುವರೊಂದಿಗೆ ಮಗಳು ಸೋನಿ ಮದುವೆ ನಿಶ್ಚಯಿಸಿದ್ದು, ಮದುವೆಗೆ ಸಾಕಷ್ಟು ಹಣ ಖರ್ಚು ಮಾಡಿ, ವರನಿಗೆ ಬಂಗಾರದ ಉಂಗುರ ಕೂಡ ನೀಡಿ ಸಮಾರಂಭ ಏರ್ಪಡಿಸಿದ್ದರು. ಆದ್ರೆ, ಮರುದಿನವೇ ವರನ ಮನೆಯವರು ವರದಕ್ಷಿಣೆ ಬೇಡಿಕೆ ಮುಂದಿಟ್ಟಿದ್ದಾರೆ. ವಧುವಿನ ತಂದೆ ಹೆಚ್ಚಿನ ವರದಕ್ಷಿಣೆ ನೀಡಲು ಅಸಮರ್ಥತೆಯನ್ನು ವ್ಯಕ್ತಪಡಿಸಿದಾಗ, ವರನ ಕುಟುಂಬವು ಹುಡುಗಿಯು ಪಿಯುಸಿಯಲ್ಲಿ ಕಡಿಮೆ ಅಂಕಪಡೆದಿದ್ದಾಳೆ ಎಂದು ಹೇಳಿ ಮದುವೆಯನ್ನು ಕ್ಯಾನ್ಸಲ್ ಮಾಡಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…