12ನೇ ತರಗತಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಾಳೆ ಎಂಬ ಕಾರಣಕ್ಕೆ ವರನೊಬ್ಬ ವಧುವನ್ನು ಮದುವೆಯಾಗಲು ನಿರಾಕರಿಸಿದ್ದಾನೆ. ಉತ್ತರ ಪ್ರದೇಶದ ಕನೌಜ್ ಜಿಲ್ಲೆಯಲ್ಲಿ ಈ ವಿಲಕ್ಷಣ ಘಟನೆ ವರದಿಯಾಗಿದೆ. ಪೊಲೀಸರು ಎರಡು ಕುಟುಂಬಗಳಿಗೆ ಕೌನ್ಸಿಲಿಂಗ್ ಮಾಡುವ ಮೂಲಕ ಪ್ರಕರಣವನ್ನು ಭೇದಿಸಲು ಪ್ರಯತ್ನಿಸುತ್ತಿದ್ದಾರೆ.
ಆದಾಗ್ಯೂ, ಎರಡೂ ಕುಟುಂಬಗಳು ಒಮ್ಮತಕ್ಕೆ ಬರದಿದ್ದರೆ, ಪೊಲೀಸರು ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ತಿರ್ವಾ ಕೊತ್ವಾಲಿ ಪ್ರದೇಶದ ಪೊಲೀಸ್ ಠಾಣೆಯ ಪ್ರಭಾರಿ ಪಿಎನ್ ಬಾಜ್ಪೈ ಹೇಳಿದ್ದಾರೆ. ವರದಿಯ ಪ್ರಕಾರ, ವಧುವಿನ ಕುಟುಂಬವು ತಮ್ಮ ವರದಕ್ಷಿಣೆ ಬೇಡಿಕೆಗಳನ್ನು ಈಡೇರಿಸದ ಕಾರಣ ವರನ ಕುಟುಂಬವು ಮದುವೆಯನ್ನು ರದ್ದುಗೊಳಿಸಿದೆ ಎಂದು ಆರೋಪಿಸಿ ವರನ ಕುಟುಂಬದ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಆದರೆ, 12ನೇ ತರಗತಿ ಅಂಕಪಟ್ಟಿಯಲ್ಲಿ ವಧುವಿಗೆ ಕಡಿಮೆ ಅಂಕ ಬಂದಿದೆ ಎಂದು ತಿಳಿಸಿದ್ದಾರೆ.
ಬಾಗನವಾ ಗ್ರಾಮದ ರಾಮಶಂಕರ್ ಎಂಬುವವರ ಪುತ್ರ ಸೋನು ಎಂಬುವರೊಂದಿಗೆ ಮಗಳು ಸೋನಿ ಮದುವೆ ನಿಶ್ಚಯಿಸಿದ್ದು, ಮದುವೆಗೆ ಸಾಕಷ್ಟು ಹಣ ಖರ್ಚು ಮಾಡಿ, ವರನಿಗೆ ಬಂಗಾರದ ಉಂಗುರ ಕೂಡ ನೀಡಿ ಸಮಾರಂಭ ಏರ್ಪಡಿಸಿದ್ದರು. ಆದ್ರೆ, ಮರುದಿನವೇ ವರನ ಮನೆಯವರು ವರದಕ್ಷಿಣೆ ಬೇಡಿಕೆ ಮುಂದಿಟ್ಟಿದ್ದಾರೆ. ವಧುವಿನ ತಂದೆ ಹೆಚ್ಚಿನ ವರದಕ್ಷಿಣೆ ನೀಡಲು ಅಸಮರ್ಥತೆಯನ್ನು ವ್ಯಕ್ತಪಡಿಸಿದಾಗ, ವರನ ಕುಟುಂಬವು ಹುಡುಗಿಯು ಪಿಯುಸಿಯಲ್ಲಿ ಕಡಿಮೆ ಅಂಕಪಡೆದಿದ್ದಾಳೆ ಎಂದು ಹೇಳಿ ಮದುವೆಯನ್ನು ಕ್ಯಾನ್ಸಲ್ ಮಾಡಿದೆ.
ನಂಜನಗೂಡು ತಾಲೂಕಿನ ಗಣೇಶಪುರ ಗ್ರಾಮದ ಬಳಿ ದಾರುಣ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನದ ಟೈರ್ ಬ್ಲಾಸ್ಟ್ ಆಗಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ…
ಶಿರಸಿಯಲ್ಲಿ ನಡೆದಿದ್ದ ಆಯುರ್ವೇದ ವೈದ್ಯನ ಹತ್ಯೆ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಈ ದಾರುಣ ಕೃತ್ಯದ ಹಿಂದೆ ಸ್ನೇಹಿತನೇ ಇದ್ದಿರುವುದು…
ಬೆಂಗಳೂರು ನಗರದಲ್ಲಿ ಕೆಲಸದ ಒತ್ತಡದಿಂದ ಬೇಸತ್ತ ಅನೇಕರು ಉದ್ಯೋಗ ತೊರೆದು ಸ್ವಂತ ಊರಿಗೆ ಮರಳುವ ಅಥವಾ ಹೊಸ ಜೀವನವನ್ನು ಆರಿಸುವ…
ಇಂದಿನ ತಂತ್ರಜ್ಞಾನ ಯುಗದಲ್ಲಿ ಸಂಬಂಧಗಳಲ್ಲಿನ ನಂಬಿಕೆ ಕುಸಿತದ ಘಟನೆಗಳು ಹೆಚ್ಚುತ್ತಿವೆ. ದಾಂಪತ್ಯ ಜೀವನದಲ್ಲೇ ಅಲ್ಲ, ಪ್ರೇಮ ಸಂಬಂಧಗಳಲ್ಲಿಯೂ ಮೋಸ, ಅಕ್ರಮ…
ರಾಜ್ಯದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಕರಿಗೆ ಸುವರ್ಣಾವಕಾಶ ಒದಗಿಬಂದಿದೆ. Karnataka State Fire and Emergency Services (KSFES) ಇಲಾಖೆಯು…
ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ H. D. Deve Gowda ಅವರಿಗೆ ರಾಜ್ಯ ಸರ್ಕಾರ ಐಷಾರಾಮಿ ಕಾರು ಖರೀದಿಸಲು…