Latest

PUCಯಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕೆ ಮದುವೆಯನ್ನೇ ಕ್ಯಾನ್ಸಲ್‌ ಮಾಡಿದ ವರ!

12ನೇ ತರಗತಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಾಳೆ ಎಂಬ ಕಾರಣಕ್ಕೆ ವರನೊಬ್ಬ ವಧುವನ್ನು ಮದುವೆಯಾಗಲು ನಿರಾಕರಿಸಿದ್ದಾನೆ. ಉತ್ತರ ಪ್ರದೇಶದ ಕನೌಜ್ ಜಿಲ್ಲೆಯಲ್ಲಿ ಈ ವಿಲಕ್ಷಣ ಘಟನೆ ವರದಿಯಾಗಿದೆ. ಪೊಲೀಸರು ಎರಡು ಕುಟುಂಬಗಳಿಗೆ ಕೌನ್ಸಿಲಿಂಗ್ ಮಾಡುವ ಮೂಲಕ ಪ್ರಕರಣವನ್ನು ಭೇದಿಸಲು ಪ್ರಯತ್ನಿಸುತ್ತಿದ್ದಾರೆ.
ಆದಾಗ್ಯೂ, ಎರಡೂ ಕುಟುಂಬಗಳು ಒಮ್ಮತಕ್ಕೆ ಬರದಿದ್ದರೆ, ಪೊಲೀಸರು ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ತಿರ್ವಾ ಕೊತ್ವಾಲಿ ಪ್ರದೇಶದ ಪೊಲೀಸ್ ಠಾಣೆಯ ಪ್ರಭಾರಿ ಪಿಎನ್ ಬಾಜ್ಪೈ ಹೇಳಿದ್ದಾರೆ. ವರದಿಯ ಪ್ರಕಾರ, ವಧುವಿನ ಕುಟುಂಬವು ತಮ್ಮ ವರದಕ್ಷಿಣೆ ಬೇಡಿಕೆಗಳನ್ನು ಈಡೇರಿಸದ ಕಾರಣ ವರನ ಕುಟುಂಬವು ಮದುವೆಯನ್ನು ರದ್ದುಗೊಳಿಸಿದೆ ಎಂದು ಆರೋಪಿಸಿ ವರನ ಕುಟುಂಬದ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಆದರೆ, 12ನೇ ತರಗತಿ ಅಂಕಪಟ್ಟಿಯಲ್ಲಿ ವಧುವಿಗೆ ಕಡಿಮೆ ಅಂಕ ಬಂದಿದೆ ಎಂದು ತಿಳಿಸಿದ್ದಾರೆ.
ಬಾಗನವಾ ಗ್ರಾಮದ ರಾಮಶಂಕರ್ ಎಂಬುವವರ ಪುತ್ರ ಸೋನು ಎಂಬುವರೊಂದಿಗೆ ಮಗಳು ಸೋನಿ ಮದುವೆ ನಿಶ್ಚಯಿಸಿದ್ದು, ಮದುವೆಗೆ ಸಾಕಷ್ಟು ಹಣ ಖರ್ಚು ಮಾಡಿ, ವರನಿಗೆ ಬಂಗಾರದ ಉಂಗುರ ಕೂಡ ನೀಡಿ ಸಮಾರಂಭ ಏರ್ಪಡಿಸಿದ್ದರು. ಆದ್ರೆ, ಮರುದಿನವೇ ವರನ ಮನೆಯವರು ವರದಕ್ಷಿಣೆ ಬೇಡಿಕೆ ಮುಂದಿಟ್ಟಿದ್ದಾರೆ. ವಧುವಿನ ತಂದೆ ಹೆಚ್ಚಿನ ವರದಕ್ಷಿಣೆ ನೀಡಲು ಅಸಮರ್ಥತೆಯನ್ನು ವ್ಯಕ್ತಪಡಿಸಿದಾಗ, ವರನ ಕುಟುಂಬವು ಹುಡುಗಿಯು ಪಿಯುಸಿಯಲ್ಲಿ ಕಡಿಮೆ ಅಂಕಪಡೆದಿದ್ದಾಳೆ ಎಂದು ಹೇಳಿ ಮದುವೆಯನ್ನು ಕ್ಯಾನ್ಸಲ್‌ ಮಾಡಿದೆ.

ಭ್ರಷ್ಟರ ಬೇಟೆ

Recent Posts

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

4 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

4 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

4 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

4 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

9 hours ago

300ಕ್ಕೆ ಲಭ್ಯವೆಂದು ಪೋಸ್ಟ್ ಹಾಕಿ ಗೃಹಿಣಿಗೆ ಕಿರುಕುಳ: 30 ಲಕ್ಷಕ್ಕೆ ಬೇಡಿಕೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಎಐ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಗೃಹಿಣಿಯೊಬ್ಬರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್…

9 hours ago