12ನೇ ತರಗತಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಾಳೆ ಎಂಬ ಕಾರಣಕ್ಕೆ ವರನೊಬ್ಬ ವಧುವನ್ನು ಮದುವೆಯಾಗಲು ನಿರಾಕರಿಸಿದ್ದಾನೆ. ಉತ್ತರ ಪ್ರದೇಶದ ಕನೌಜ್ ಜಿಲ್ಲೆಯಲ್ಲಿ ಈ ವಿಲಕ್ಷಣ ಘಟನೆ ವರದಿಯಾಗಿದೆ. ಪೊಲೀಸರು ಎರಡು ಕುಟುಂಬಗಳಿಗೆ ಕೌನ್ಸಿಲಿಂಗ್ ಮಾಡುವ ಮೂಲಕ ಪ್ರಕರಣವನ್ನು ಭೇದಿಸಲು ಪ್ರಯತ್ನಿಸುತ್ತಿದ್ದಾರೆ.
ಆದಾಗ್ಯೂ, ಎರಡೂ ಕುಟುಂಬಗಳು ಒಮ್ಮತಕ್ಕೆ ಬರದಿದ್ದರೆ, ಪೊಲೀಸರು ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ತಿರ್ವಾ ಕೊತ್ವಾಲಿ ಪ್ರದೇಶದ ಪೊಲೀಸ್ ಠಾಣೆಯ ಪ್ರಭಾರಿ ಪಿಎನ್ ಬಾಜ್ಪೈ ಹೇಳಿದ್ದಾರೆ. ವರದಿಯ ಪ್ರಕಾರ, ವಧುವಿನ ಕುಟುಂಬವು ತಮ್ಮ ವರದಕ್ಷಿಣೆ ಬೇಡಿಕೆಗಳನ್ನು ಈಡೇರಿಸದ ಕಾರಣ ವರನ ಕುಟುಂಬವು ಮದುವೆಯನ್ನು ರದ್ದುಗೊಳಿಸಿದೆ ಎಂದು ಆರೋಪಿಸಿ ವರನ ಕುಟುಂಬದ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಆದರೆ, 12ನೇ ತರಗತಿ ಅಂಕಪಟ್ಟಿಯಲ್ಲಿ ವಧುವಿಗೆ ಕಡಿಮೆ ಅಂಕ ಬಂದಿದೆ ಎಂದು ತಿಳಿಸಿದ್ದಾರೆ.
ಬಾಗನವಾ ಗ್ರಾಮದ ರಾಮಶಂಕರ್ ಎಂಬುವವರ ಪುತ್ರ ಸೋನು ಎಂಬುವರೊಂದಿಗೆ ಮಗಳು ಸೋನಿ ಮದುವೆ ನಿಶ್ಚಯಿಸಿದ್ದು, ಮದುವೆಗೆ ಸಾಕಷ್ಟು ಹಣ ಖರ್ಚು ಮಾಡಿ, ವರನಿಗೆ ಬಂಗಾರದ ಉಂಗುರ ಕೂಡ ನೀಡಿ ಸಮಾರಂಭ ಏರ್ಪಡಿಸಿದ್ದರು. ಆದ್ರೆ, ಮರುದಿನವೇ ವರನ ಮನೆಯವರು ವರದಕ್ಷಿಣೆ ಬೇಡಿಕೆ ಮುಂದಿಟ್ಟಿದ್ದಾರೆ. ವಧುವಿನ ತಂದೆ ಹೆಚ್ಚಿನ ವರದಕ್ಷಿಣೆ ನೀಡಲು ಅಸಮರ್ಥತೆಯನ್ನು ವ್ಯಕ್ತಪಡಿಸಿದಾಗ, ವರನ ಕುಟುಂಬವು ಹುಡುಗಿಯು ಪಿಯುಸಿಯಲ್ಲಿ ಕಡಿಮೆ ಅಂಕಪಡೆದಿದ್ದಾಳೆ ಎಂದು ಹೇಳಿ ಮದುವೆಯನ್ನು ಕ್ಯಾನ್ಸಲ್ ಮಾಡಿದೆ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…