ಬೆಂಗಳೂರು: ಸರ್ಕಾರದ ಕಚೇರಿಗಳಲ್ಲಿ ಲಂಚ ಮತ್ತು ವಂಚನೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದ್ದು, ಅದನ್ನು ತಡೆಗಟ್ಟಲು ಲೋಕಾಯುಕ್ತ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿದ್ದಾರೆ. ಇತ್ತೀಚೆಗೆ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕ ನಾಗರಾಜು ಹಾಗೂ ಖಾಸಗಿ ವ್ಯಕ್ತಿ ಸಂದೀಪ್ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಹತ್ತು ಲಕ್ಷಕ್ಕೆ ಬೇಡಿಕೆ, ಎರಡು ಲಕ್ಷ ಪಡೆಯುವಾಗ ಸಿಕ್ಕಿಬಿದ್ದರು
ವಕೀಲ ಮಹೇಶ್ ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ಇಂದು ಟ್ರಾಪ್ ನಡೆಸಿದರು. ಪಹಣಿಯಲ್ಲಿ ಹೆಸರು ನೋಂದಣಿ ಮಾಡಲು ಹತ್ತು ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರೆಂದು ಆರೋಪಿಸಲಾಗಿದೆ. ಇಂದು ₹2 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ, ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ನಾಗರಾಜು ಮತ್ತು ಸಂದೀಪ್ ಅವರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ತಹಶೀಲ್ದಾರ್ ಸಂಪರ್ಕ, ಮಧ್ಯವರ್ತಿಗಳ ಲಂಚ ಲಾವಣ್ಯ
ಯಲಹಂಕ ಸ್ಪೆಷಲ್ ತಹಶೀಲ್ದಾರ್ ಮುನಿಸ್ವಾಮಿ ರೆಡ್ಡಿ ಈ ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರವಹಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಹಣದ ಲೆನ-ದಿನದಲ್ಲಿ ನಾಗರಾಜು ಮತ್ತು ಸಂದೀಪ್ ಮಧ್ಯವರ್ತಿಗಳಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಲಂಚದ ಆರೋಪದ ಬೆನ್ನಲ್ಲೇ ಲೋಕಾಯುಕ್ತ ಅಧಿಕಾರಿಗಳು ತಕ್ಷಣವೇ ತನಿಖೆ ಆರಂಭಿಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಮುಂದಿನ ಹಂತದಲ್ಲಿ ಹಿರಿಯ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಯಲ್ಲಾಪುರ: 2001ರಲ್ಲಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು…
ಬೆಂಗಳೂರು–ಮೈಸೂರು ಸಂಪರ್ಕವನ್ನು ಸುಧಾರಿಸುವುದು ಹಾಗೂ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ರೂಪುಗೊಂಡಿದ್ದ ಬೆಂಗಳೂರು–ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ (BMICP)…
ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…
ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…
ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…
ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…