Categories: CrimeLatest

ಮದುವೆ ರದ್ದು ಮಾಡಿದ ದ್ವೇಷ: ಹೆಚ್‌ಐವಿ ರಕ್ತ ಇಂಜೆಕ್ಟ್ ಮಾಡಿದ ಯುವಕ..!

ತೆಲಂಗಾಣದ ಹೈದರಾಬಾದ್ ನಗರದ ಪೋಚರಂ ಪ್ರದೇಶದಲ್ಲಿ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. ಮದುವೆ ನಿಶ್ಚಯವಾದ ಬಳಿಕ ತನ್ನಿಗೆ ಹೆಚ್‌ಐವಿ (HIV) ಸೋಂಕು ಇರುವುದನ್ನು ತಿಳಿದು ಹುಡುಗಿಯ ಕುಟುಂಬ ಸಂಬಂಧವನ್ನು ರದ್ದುಗೊಳಿಸಿದ್ದರಿಂದ ಆಕ್ರೋಶಗೊಂಡ ಯುವಕನೊಬ್ಬ, ತನ್ನದೇ ಸೋಂಕಿತ ರಕ್ತವನ್ನು ಯುವತಿಯ ದೇಹಕ್ಕೆ ಸಿರಿಂಜ್ ಮೂಲಕ ಇಂಜೆಕ್ಟ್ ಮಾಡಿದ ಘಟನೆ ನಡೆದಿದೆ.

ಮದುವೆ ನಿಶ್ಚಯದಿಂದ ವಿವಾದಕ್ಕೆ ತಿರುಗಿದ ಘಟನೆ

ಆರೋಪಿ ಮನೋಹರ್ (24) ಮತ್ತು ಸಂತ್ರಸ್ತ ಯುವತಿ ಸಂಬಂಧಿಕರಾಗಿದ್ದು, ಇವರಿಬ್ಬರ ಮದುವೆ ಮಾತುಕತೆ ಮುಗಿದು ನಿಶ್ಚಯವಾಗಿತ್ತು. ಆದರೆ ಮನೋಹರ್‌ನ ಪೋಷಕರು ಹೆಚ್‌ಐವಿ ಸೋಂಕಿನಿಂದ ಮೃತಪಟ್ಟಿದ್ದ ಹಿನ್ನೆಲೆ, ಯುವತಿಯ ತಂದೆಗೆ ಅನುಮಾನ ವ್ಯಕ್ತವಾಗಿತ್ತು. ಇದರಿಂದ ಮನೋಹರ್‌ಗೆ ರಕ್ತ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ ಅವನು ‘ಹೆಚ್‌ಐವಿ ಪಾಸಿಟಿವ್’ ಎಂಬುದು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಯುವತಿಯ ಕುಟುಂಬ ಮದುವೆ ಸಂಬಂಧವನ್ನು ರದ್ದುಗೊಳಿಸಿತು.

ದ್ವೇಷದಿಂದ ರೂಪಿಸಿದ ವಿಕೃತ ಸಂಚು

ಮದುವೆ ರದ್ದಾದ ಕಾರಣ ಅವಮಾನಗೊಂಡ ಮನೋಹರ್, ಪ್ರತೀಕಾರ ತೀರಿಸಿಕೊಳ್ಳುವ ಉದ್ದೇಶದಿಂದ ಅಪಾಯಕಾರಿ ಸಂಚು ರೂಪಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ತನ್ನಿಗೆ ಬಂದ ಕಾಯಿಲೆ ಯುವತಿಗೂ ಬರಬೇಕು ಎಂಬ ವಿಕೃತ ಮನೋಭಾವದಿಂದ ಈ ಕೃತ್ಯಕ್ಕೆ ಮುಂದಾಗಿದ್ದಾನೆ ಎನ್ನಲಾಗಿದೆ.

ಬಲವಂತವಾಗಿ ರಕ್ತ ಇಂಜೆಕ್ಟ್ ಮಾಡಿದ ಆರೋಪ

ಮಾರ್ಚ್ 11ರಂದು ಯುವತಿ ಮನೆಯಲ್ಲಿ ಒಬ್ಬಳೇ ಇದ್ದ ಸಮಯದಲ್ಲಿ ಮನೋಹರ್ ಮನೆಗೆ ನುಗ್ಗಿ ಆಕೆಯೊಂದಿಗೆ ಜಗಳವಾಡಿದ್ದಾನೆ. ಬಳಿಕ ತನ್ನ ಬಳಿ ಇಟ್ಟಿದ್ದ ಸಿರಿಂಜ್ ತೆಗೆದು ಬಲವಂತವಾಗಿ ಯುವತಿಯ ಕೈಗೆ ತನ್ನದೇ ರಕ್ತವನ್ನು ಇಂಜೆಕ್ಟ್ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ನಂತರ “ನನ್ನ ರಕ್ತ ಈಗ ನಿನ್ನ ದೇಹಕ್ಕೂ ಸೇರಿದೆ” ಎಂದು ಹೇಳಿ ಅಲ್ಲಿಂದ ಪರಾರಿಯಾಗಿದ್ದಾನೆ.

ಆಸ್ಪತ್ರೆಗೆ ದಾಖಲು

ಘಟನೆ ತಿಳಿದ ಕೂಡಲೇ ಯುವತಿಯ ಪೋಷಕರು ಆತಂಕಗೊಂಡು ಆಕೆಯನ್ನು ಹೈದರಾಬಾದ್‌ನ ಗಾಂಧಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಯುವತಿಗೆ ಜ್ವರ ಕಾಣಿಸಿಕೊಂಡಿದ್ದು, ವೈದ್ಯರು ಅಗತ್ಯ ವೈದ್ಯಕೀಯ ಪರೀಕ್ಷೆಗಳನ್ನು ನಡೆಸುತ್ತಿದ್ದಾರೆ.

ಪೊಲೀಸರು ಬಂಧಿಸಿದ ಆರೋಪಿ

ಸಂತ್ರಸ್ತೆಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಪೋಚರಂ ಐಟಿ ಕಾರಿಡಾರ್ ಪೊಲೀಸರು ಮನೋಹರ್‌ನನ್ನು ಮಾರ್ಚ್ 14ರಂದು ಬಂಧಿಸಿದ್ದಾರೆ. ಆತನ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 109 ಅಡಿಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿದೆ. ಬಳಿಕ ನ್ಯಾಯಾಲಯವು ಆರೋಪಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago