ಚಿಕನ್ ರೋಲ್ ಕೊಟ್ಟಿಲ್ಲ ಎಂದು ಹೋಟೆಲ್ ಸಿಬ್ಬಂದಿ ಇದ್ದ ರೂಮ್ಗೆ ಬೆಂಕಿ ಇಟ್ಟು ಕೊಲ್ಲಲು ಯತ್ನಿಸಿರುವ ಘಟನೆ ನಗರದ ಹನುಮಂತನಗರ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಕೃತ್ಯ ಎಸಗಿದ ಮೂವರ ಪೈಕಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ದೇವರಾಜ್ ಹಾಗೂ ಗಣೇಶ ಬಂಧಿತ ಆರೋಪಿಗಳಾಗಿದ್ದು, ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಹನುಮಂತನಗರದ ಕುಮಾರ್ ಹೋಟೆಲ್ಗೆ ದೇವರಾಜ್ ಮತ್ತು ಸಹಚರರು, ಚಿಕನ್ ರೋಲ್ಗಾಗಿ ತೆರಳಿದ್ದರು. ಈ ವೇಳೆ ಚಿಕನ್ ರೋಲ್ ಇಲ್ಲ, ಹೋಟೆಲ್ ಸಮಯ ಮುಗಿದಿದೆ, ಕ್ಲೋಸ್ ಮಾಡಿದ್ದೇವೆ ಎಂದು ಸಿಬ್ಬಂದಿ ಹೇಳಿದ್ದಾರೆ. ಇದರಿಂದ ಕೋಪಗೊಂಡ ದೇವರಾಜ್ ಸೇರಿ ಮೂವರು ಗಲಾಟೆ ಮಾಡಿದ್ದಾರೆ. ಕುಡಿದ ಅಮಲಿನಲ್ಲಿ ಕೂಗಾಡುತ್ತಿದ್ದವರನ್ನು ಸಿಬ್ಬಂದಿ ಥಳಿಸಿ ಕಳುಹಿಸಿದ್ದಾರೆ.
ಏಟು ತಿಂದ ಬಳಿಕ ದೇವರಾಜ್ ಮತ್ತು ಸಹಚರರು, ದೇವೇಗೌಡ ಪೆಟ್ರೋಲ್ ಬಂಕ್ಗೆ ಹೋಗಿ ೮ ಲೀಟರ್ ಪೆಟ್ರೋಲ್ ಖರೀದಿ ಮಾಡಿದ್ದಾರೆ. ನಂತರ ಕುಮಾರ್ ಹೋಟೆಲ್ ಪಕ್ಕದಲ್ಲೇ ಇರುವ ಹೋಟೆಲ್ ಸಿಬ್ಬಂದಿಯ ರೂಮ್ ಬಳಿ ತೆರಳಿ ಬಾಗಿಲು, ಕಿಟಕಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಅದೃಷ್ಟವಶಾತ್ ರೂಮ್ನಲ್ಲಿ ಇದ್ದ ಹೋಟೆಲ್ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಹನುಮಂತನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…