ಕಳೆದ ಏಳು ವರ್ಷದ ಹಿಂದೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕದಂಪುರ ಗ್ರಾಮದ ಶಾಂತವಾಳನ್ನು ಧಾರವಾಡ ಜಿಲ್ಲೆಯ ಕುಂದುಗೋಳ ತಾಲೂಕಿನ ಹೊಸಳ್ಳಿ ಗ್ರಾಮದ ರಾಜಪ್ಪನಿಗೆ ನೀಡಿ ಮದುವೆ ಮಾಡಿರುತ್ತಾರೆ. ಇವರಿಗೆ ಮೂರು ಮಕ್ಕಳು ಸಹ ಇರುತ್ತವೆ.
ಮೂರು ಮಕ್ಕಳಾದ ಮೇಲೂ ಸಹ ರಾಜಪ್ಪ ಹೆಂಡತಿಯ ಮೇಲೆ ಸಂಶಯ ಬೀಳುತ್ತಿರುತ್ತಾನೆ. ಹಾಗಾಗಿ ಇವರಿಬ್ಬರ ಮಧ್ಯೆ ಆಗಾಗ ಜಗಳವಾಗುತಲೆ ಇರುತ್ತದೆ.
ಕೆಲವು ದಿನಗಳ ಹಿಂದೆ ಗಣೇಶ ಹಬ್ಬದ ದಿನದಂದು ಗಂಡ ಹೆಂಡತಿ ಜಗಳ ಮಾಡಿಕೊಂಡಿರುತ್ತಾರೆ ಜಗಳ ಅತಿರೇಕಕ್ಕೆ ತಿರುಗಿದ್ದು ಶಾಂತವ ತನ್ನ ತವರು ಮನೆಗೆ ಬಂದಿರುತ್ತಾಳೆ.
ತಡರಾತ್ರಿ ಹೆಂಡತಿಯನ್ನು ಕರೆದುಕೊಂಡು ಹೋಗುತ್ತೇನೆ ಎಂದು ಕಂದಾಪುರಕ್ಕೆ ಬಂದ ರಾಜಪ್ಪ ಶಾಂತವಾಳ ತವರೂ ಮನೆಯಲ್ಲಿ ಉಳಿದುಕೊಳ್ಳುತ್ತಾನೆ. ರಾತ್ರಿ 11:00 ಸುಮಾರಿಗೆ ಶಾಂತವಾಳ ಹೊಟ್ಟೆಗೆ ಚಾಕುವಿನಿಂದ ಚುಚ್ಚಿ ಪರಾರಿಯಾಗಿರುತ್ತಾನೆ.
ಶಂತವಳನ್ನು ಗದಗದ ವಿಂಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶಾಂತವ್ವ ಮೃತಪಟ್ಟಿರುತ್ತಾರೆ.
ಈ ವಿಚಾರವಾಗಿ ಶಾಂತವಾಳ ಮನೆಯವರು ರಾಜಪ್ಪ ತಮ್ಮ ಹೆಂಡತಿಯ ಮೇಲೆ ಅನುಮಾನ ಪಡುತ್ತಿದ ಅದಕ್ಕಾಗಿ ಈ ರೀತಿ ಮಾಡಿದ್ದಾನೆ ಎಂದು ಹೇಳಿಕೊಂಡಿರುತ್ತಾರೆ. ಮುಂಡರಗಿ ಪೊಲೀಸರು ಈ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಆರೋಪಿಗಾಗಿ ಬಲೆ ಬೀಸಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…