ಕಳೆದ ಏಳು ವರ್ಷದ ಹಿಂದೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕದಂಪುರ ಗ್ರಾಮದ ಶಾಂತವಾಳನ್ನು ಧಾರವಾಡ ಜಿಲ್ಲೆಯ ಕುಂದುಗೋಳ ತಾಲೂಕಿನ ಹೊಸಳ್ಳಿ ಗ್ರಾಮದ ರಾಜಪ್ಪನಿಗೆ ನೀಡಿ ಮದುವೆ ಮಾಡಿರುತ್ತಾರೆ. ಇವರಿಗೆ ಮೂರು ಮಕ್ಕಳು ಸಹ ಇರುತ್ತವೆ.
ಮೂರು ಮಕ್ಕಳಾದ ಮೇಲೂ ಸಹ ರಾಜಪ್ಪ ಹೆಂಡತಿಯ ಮೇಲೆ ಸಂಶಯ ಬೀಳುತ್ತಿರುತ್ತಾನೆ. ಹಾಗಾಗಿ ಇವರಿಬ್ಬರ ಮಧ್ಯೆ ಆಗಾಗ ಜಗಳವಾಗುತಲೆ ಇರುತ್ತದೆ.
ಕೆಲವು ದಿನಗಳ ಹಿಂದೆ ಗಣೇಶ ಹಬ್ಬದ ದಿನದಂದು ಗಂಡ ಹೆಂಡತಿ ಜಗಳ ಮಾಡಿಕೊಂಡಿರುತ್ತಾರೆ ಜಗಳ ಅತಿರೇಕಕ್ಕೆ ತಿರುಗಿದ್ದು ಶಾಂತವ ತನ್ನ ತವರು ಮನೆಗೆ ಬಂದಿರುತ್ತಾಳೆ.
ತಡರಾತ್ರಿ ಹೆಂಡತಿಯನ್ನು ಕರೆದುಕೊಂಡು ಹೋಗುತ್ತೇನೆ ಎಂದು ಕಂದಾಪುರಕ್ಕೆ ಬಂದ ರಾಜಪ್ಪ ಶಾಂತವಾಳ ತವರೂ ಮನೆಯಲ್ಲಿ ಉಳಿದುಕೊಳ್ಳುತ್ತಾನೆ. ರಾತ್ರಿ 11:00 ಸುಮಾರಿಗೆ ಶಾಂತವಾಳ ಹೊಟ್ಟೆಗೆ ಚಾಕುವಿನಿಂದ ಚುಚ್ಚಿ ಪರಾರಿಯಾಗಿರುತ್ತಾನೆ.
ಶಂತವಳನ್ನು ಗದಗದ ವಿಂಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶಾಂತವ್ವ ಮೃತಪಟ್ಟಿರುತ್ತಾರೆ.
ಈ ವಿಚಾರವಾಗಿ ಶಾಂತವಾಳ ಮನೆಯವರು ರಾಜಪ್ಪ ತಮ್ಮ ಹೆಂಡತಿಯ ಮೇಲೆ ಅನುಮಾನ ಪಡುತ್ತಿದ ಅದಕ್ಕಾಗಿ ಈ ರೀತಿ ಮಾಡಿದ್ದಾನೆ ಎಂದು ಹೇಳಿಕೊಂಡಿರುತ್ತಾರೆ. ಮುಂಡರಗಿ ಪೊಲೀಸರು ಈ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಆರೋಪಿಗಾಗಿ ಬಲೆ ಬೀಸಿದ್ದಾರೆ.
ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…
ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…