ಕಳೆದ ಏಳು ವರ್ಷದ ಹಿಂದೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕದಂಪುರ ಗ್ರಾಮದ ಶಾಂತವಾಳನ್ನು ಧಾರವಾಡ ಜಿಲ್ಲೆಯ ಕುಂದುಗೋಳ ತಾಲೂಕಿನ ಹೊಸಳ್ಳಿ ಗ್ರಾಮದ ರಾಜಪ್ಪನಿಗೆ ನೀಡಿ ಮದುವೆ ಮಾಡಿರುತ್ತಾರೆ. ಇವರಿಗೆ ಮೂರು ಮಕ್ಕಳು ಸಹ ಇರುತ್ತವೆ.
ಮೂರು ಮಕ್ಕಳಾದ ಮೇಲೂ ಸಹ ರಾಜಪ್ಪ ಹೆಂಡತಿಯ ಮೇಲೆ ಸಂಶಯ ಬೀಳುತ್ತಿರುತ್ತಾನೆ. ಹಾಗಾಗಿ ಇವರಿಬ್ಬರ ಮಧ್ಯೆ ಆಗಾಗ ಜಗಳವಾಗುತಲೆ ಇರುತ್ತದೆ.
ಕೆಲವು ದಿನಗಳ ಹಿಂದೆ ಗಣೇಶ ಹಬ್ಬದ ದಿನದಂದು ಗಂಡ ಹೆಂಡತಿ ಜಗಳ ಮಾಡಿಕೊಂಡಿರುತ್ತಾರೆ ಜಗಳ ಅತಿರೇಕಕ್ಕೆ ತಿರುಗಿದ್ದು ಶಾಂತವ ತನ್ನ ತವರು ಮನೆಗೆ ಬಂದಿರುತ್ತಾಳೆ.
ತಡರಾತ್ರಿ ಹೆಂಡತಿಯನ್ನು ಕರೆದುಕೊಂಡು ಹೋಗುತ್ತೇನೆ ಎಂದು ಕಂದಾಪುರಕ್ಕೆ ಬಂದ ರಾಜಪ್ಪ ಶಾಂತವಾಳ ತವರೂ ಮನೆಯಲ್ಲಿ ಉಳಿದುಕೊಳ್ಳುತ್ತಾನೆ. ರಾತ್ರಿ 11:00 ಸುಮಾರಿಗೆ ಶಾಂತವಾಳ ಹೊಟ್ಟೆಗೆ ಚಾಕುವಿನಿಂದ ಚುಚ್ಚಿ ಪರಾರಿಯಾಗಿರುತ್ತಾನೆ.
ಶಂತವಳನ್ನು ಗದಗದ ವಿಂಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶಾಂತವ್ವ ಮೃತಪಟ್ಟಿರುತ್ತಾರೆ.
ಈ ವಿಚಾರವಾಗಿ ಶಾಂತವಾಳ ಮನೆಯವರು ರಾಜಪ್ಪ ತಮ್ಮ ಹೆಂಡತಿಯ ಮೇಲೆ ಅನುಮಾನ ಪಡುತ್ತಿದ ಅದಕ್ಕಾಗಿ ಈ ರೀತಿ ಮಾಡಿದ್ದಾನೆ ಎಂದು ಹೇಳಿಕೊಂಡಿರುತ್ತಾರೆ. ಮುಂಡರಗಿ ಪೊಲೀಸರು ಈ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಆರೋಪಿಗಾಗಿ ಬಲೆ ಬೀಸಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…
ಕೊಡಗು ಜಿಲ್ಲಾ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದ 68 ವರ್ಷದ ಚೆಂಗಪ್ಪ ಅವರ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸುಮಾರು 20…
ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆ ಆವರಣದ ಗೋಡೆ ಕುಸಿತದಿಂದ ಸಂಭವಿಸಿದ ಭೀಕರ ದುರಂತದ ಸ್ಥಳಕ್ಕೆ ಬುಧವಾರ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ,…
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಅಕ್ರಮ ಸ್ಕ್ಯಾನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರನ್ನು ಬಂಧಿಸಿರುವ ಘಟನೆ…
ಭೂಸ್ವಾಧೀನ ಸಂಬಂಧಿತ ಬಾಕಿ ಕಂದಾಯ ಪ್ರಕರಣವನ್ನು ಪರಿಹರಿಸಲು ಲಂಚ ಪಡೆಯುತ್ತಿದ್ದ ವೇಳೆ ಕೆಎಎಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಘಟನೆ…
ಇತ್ತೀಚಿನ ದಿನಗಳಲ್ಲಿ ದಾಂಪತ್ಯ ಜೀವನ ಸಣ್ಣಪುಟ್ಟ ವಿಚಾರಗಳಿಗೂ ಕುಸಿಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಹೊಂದಾಣಿಕೆಯ ಕೊರತೆ, ಅಕ್ರಮ ಸಂಬಂಧಗಳು ಸೇರಿದಂತೆ ಹಲವು…