Latest

ಅನೈತಿಕ ಸಂಬಂಧ ಹೊಂದಿದ ಪತ್ನಿಯನ್ನು ಕೊಡಲಿಯಲ್ಲಿ ಹೊಡೆದು ಕೊಂದ ಪತಿ!

ರಾಯಚೂರು ತಾಲ್ಲೂಕಿನ ಏಗನೂರು ಅನ್ನೊ ಗ್ರಾಮದಲ್ಲಿ ಪತ್ನಿಯನ್ನು ಹತ್ಯೆ ಮಾಡಿದ್ದ ಪತಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.
ಆರೋಪಿ ಶಶಿಕುಮಾರ್ ಹಾಗೂ ಪಲ್ಲವಿ ಎಂಟು ವರ್ಷಗಳ ಹಿಂದೆ ಮದುವೆಯಾಗಿದ್ರು..ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಪತ್ನಿ ಮೊದಲು ಇದೇ ಏಗನೂರು ಗ್ರಾಮದಲ್ಲಿ ಅಂಗನವಾಡಿಯಲ್ಲಿ ಅಡುಗೆ ಸಹಾಯಕಿಯಾಗಿ ಸ್ವಲ್ಪ ದಿನ ಕೆಲಸ ಮಾಡಿದ್ರು. ಬಳಿಕ ಆಕೆಗೆ ಇದೇ ರಾಯಚೂರು ತಾಲ್ಲೂಕಿನ ಸಂಕನೂರು ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಶಿಕ್ಷಕಿಯಾಗಿ ಪ್ರಮೋಷನ್ ಆಗಿತ್ತು.
ಇದಾದ ಬಳಿಕ ಆಕೆ ವ್ಯಕ್ತಿಯೊಬ್ಬನ ಜೊತೆ ಅನೈತ್ತಿಕ ಸಂಬಂಧ ಹೊಂದಿದ್ಲಂತೆ. ಫೋನ್ ನಲ್ಲಿ ಗಂಟೆಗಟ್ಟಲೇ ಮಾತನಾಡೋದು, ಎಲ್ಲೆಂದರಲ್ಲಿ ಓಡಾಡೊದು, ಅಷ್ಟೇ ಅಲ್ಲ, ಆಕೆ ಬೇರೊಬ್ಬನ ಜೊತೆ ಇರೋದನ್ನ ಖುದ್ದು ಆರೋಪಿ ಪತಿ ಶಶಿಕುಮಾರ್ ನೋಡಿದ್ದನಂತೆ. ಆದ್ರೂ ಆತ ದೃತಿಗೆಡದೇ ಪತ್ನಿಗೆ ತಿಳಿಹೇಳಿದ್ದ. ಇದಾದ ಬಳಿಕವೂ ಆಕೆ ತನ್ನ ಚಾಳಿ ಮುಂದುವರೆಸಿದ್ಲಂತೆ.
ಇದಾದ ನಂತರ ಶಶಿಕುಮಾರ್ ಕುಡಿದು ಪತ್ನಿಗೆ ಕಿರುಕುಳ ಕೊಡಲು ಶುರುಮಾಡಿದ್ದ..ಇದೇ ಕಾರಣಕ್ಕೆ ಆಕೆ ಹತ್ಯೆಯಾಗಿರೊ ಹಿಂದಿನ ದಿನ ಮಹಿಳಾ ಠಾಣೆಗೆ ಹೋಗಿದ್ದಳು. ಆಗ ಪೊಲೀಸರು ಶಶಿಕುಮಾರ್​ಗೆ ಕರೆ ಮಾಡಿ, ವಾರ್ನ್​ ಸಹ ಮಾಡಿದ್ರು.. ಆದ್ರೆ ಅದೇ ಆಕೆ ಮತ್ತೆ ಆ ವ್ಯಕ್ತಿ ಜೊತೆ ಇದ್ದದ್ದನ್ನ ಪತಿ ಶಶಿಕುಮಾರ್​ ನೋಡಿದ್ದನಂತೆ. ಅದೇ ಕೋಪಕ್ಕೆ ಮಾರನೇ ದಿನ ಪತ್ನಿ ಕೈಗೆ ಸಿಕ್ಕಾಗ ಕೊಡಲಿಯಿಂದ ಹತ್ಯೆಗೈದಿದ್ದಿನಿ ಅಂತ ಪೊಲೀಸರೆದುರು ಬಾಯ್ಬಿಟ್ಟಿದ್ದಾನೆ.
ಸದ್ಯ ರಾಯಚೂರು ಗ್ರಾಮೀಣ ಪೊಲೀಸರು ಆರೋಪಿ ಶಶಿಕುಮಾರ್​​ನನ್ನ ಬಂಧಿಸಿ ಜೈಲಿಗಟ್ಟಿದ್ದಾರೆ.

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆ ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…

1 hour ago

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago