Crime

ಬೇರೆಯವರೊಂದಿಗೆ ಮಾತನಾಡಿದ್ದಕ್ಕೆ ಪತ್ನಿಯನ್ನು ಗುಂಡಿಕ್ಕಿ ಕೊಂದ ಪತಿ!

ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನೇ ಗುಂಡಿಕ್ಕಿ ಕೊಂದು, ಬಳಿಕ ತಾನೇ ಪೊಲೀಸರಿಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬೇಟೋಳಿ ಗ್ರಾಮದಲ್ಲಿ ನಡೆದಿದೆ.
ಶಿಲ್ಪಾ ಸೀತಮ್ಮ (40) ಮೃತ ದುರ್ದೈವಿ, ಪತಿ ನಾಯಕಂಡ ಬೋಪಣ್ಣ (45) ಗುಂಡಿಕ್ಕಿ ಕೊಂದ ಆರೋಪಿ. ತನ್ನ ಪತ್ನಿ ಫೋನ್‌ನಲ್ಲಿ ಬೇರೆಯವರೊಂದಿಗೆ ಮಾತನಾಡುತ್ತಿದ್ದುದ್ದಕ್ಕೆ ಆಕ್ಷೇಪಿಸಿದ ನಂತರ ಇಬ್ಬರ ನಡುವೆ ಜಗಳವಾಗಿ ಪತಿ ಗುಂಡಿಕ್ಕಿ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
17 ವರ್ಷದ ಹಿಂದೆ ಪರಸ್ಪರ ಪ್ರೀತಿಸಿ ಇಬ್ಬರು ಮದುವೆಯಾಗಿದ್ದರು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಅಲ್ಲದೇ ಬೋಪಣ್ಣ ವಿರಾಜಪೇಟೆ ತಾಲ್ಲೂಕಿನ ಅರ್ಜಿ ಗ್ರಾಮದಲ್ಲಿ ಸರ್ವಿಸ್ ಸ್ಟೇಷನ್ ಹಾಗೂ ಕಾಫಿ ತೋಟದ ಮಾಲೀಕನಾಗಿದ್ದ.
ಶಿಲ್ಪಾ ಸೀತಮ್ಮ 2012 ರಿಂದ 2017ರ ವರೆಗೆ ಬೇಟೋಳಿ ಗ್ರಾಮ ಪಂಚಾಯತಿ ಸದಸ್ಯರಾಗಿ ಸೇವೆಸಲಿಸಿದ್ದರು. ಶುಕ್ರವಾರ (ಜು.19) ರಾತ್ರಿ ಬೇರೆಯವರೊಂದಿಗೆ ಫೋನ್‌ನಲ್ಲಿ ಮಾತನಾಡುತ್ತಿದ್ದರು. ಇದೇ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದಿತ್ತು. ಶನಿವಾರ ಬೆಳಗ್ಗೆಯೂ ಪತಿ ಆಕ್ಷೇಪಿಸಿದ್ದ, ಇದರಿಂದ ಇಬ್ಬರ ನಡುವೆ ಜಗಳ ಏರ್ಪಟ್ಟಿತ್ತು, ಕೊನೆಗೆ ಜಗಳ ವಿಕೋಪಕ್ಕೆ ತಿರುಗಿ ಪತಿಯೇ ಗುಂಡಿಕ್ಕಿ ಕೊಂದಿದ್ದಾನೆ. ಹತ್ಯೆ ಮಾಡಿ ಪೊಲೀಸರಿಗೆ ತಾನೇ ಶರಣಾಗಿದ್ದಾನೆ. ಬಳಿಕ ಘಟನಾ ಸ್ಥಳಕ್ಕೆ ವಿರಾಜಪೇಟೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago