ಉತ್ತರ ಪ್ರದೇಶದ ಹಮೀರ್ ಪುರದಲ್ಲಿ ಇಂಜಿನಿಯರ್ ಒಬ್ಬ ಮೊದಲ ರಾತ್ರಿಯಲ್ಲಿ ಕಾಮೋತೇಜಕ ಮಾತ್ರೆಗಳನ್ನು ಸೇವಿಸಿ, ಮದವೇರಿದವನಂತೆ ಪತ್ನಿಯ ಮೇಲೆ ಎರಗಿದ ಪರಿಣಾಮ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದೆ.
ಮಹಿಳೆಯ ಪೋಷಕರು ಯಾರು ಇಲ್ಲದ ಕಾರಣ ಸರ್ಕಾರಿ ಹುದ್ದೆಯಲ್ಲಿರುವ ಆಕೆಯ ಸಹೋದರ ಹಾಗೂ ಸಂಬಂಧಿಕರೇ ಮುಂದೆ ನಿಂತು ಫೆಬ್ರವರಿ 3ರಂದು ಇಂಜಿನಿಯರ್ ನ ಜೊತೆ ಆಕೆಯ ಮದುವೆಯನ್ನು ಮಾಡಿಸಿರುತ್ತಾರೆ. ಫೆಬ್ರವರಿ 4ರಂದು ಮಹಿಳೆ ಅತ್ತೆಯ ಮನೆ ಸೇರುತ್ತಾಳೆ.
ಮೊದಲ ರಾತ್ರಿಯಂದು ಕಾಮೋತೇಜಕ ಮಾತ್ರೆಗಳನ್ನು ಸೇವಿಸಿದ ಇಂಜಿನಿಯರ್ ವರ, ವಧುವಿನ ಮೇಲೆ ಲೈಂಗಿಕ ದೌರ್ಜನ್ಯವನ್ನು ನಡೆಸಿದ್ದಾನೆ. ಇದರ ಪರಿಣಾಮವಾಗಿ ತೀವ್ರ ಗಾಯಗೊಂಡ ಆಕೆಯನ್ನು ಫೆಬ್ರವರಿ 7ರಂದು ಆಸ್ಪತ್ರೆಗೆ ದಾಖಲಿಸುತ್ತಾರೆ.
ಕಾನ್ಪುರದ ಖಾಸಗಿ ನರ್ಸಿಂಗ್ ಹೋಂ ಗೆ ಆಕೆಯನ್ನು ಕರೆದೊಯ್ಯಲಾಗಿದ್ದು ಆಕೆ ತೀವ್ರ ಅಸ್ವಸ್ಥಗೊಂಡಿದ್ದು, ಮಹಿಳಾ ಸ್ಥಿತಿ ತೀವ್ರ ಹದಗೆಟ್ಟಿರುತ್ತದೆ ಅದನ್ನು ನೋಡಿದ ಗಂಡ ಕಾಮೋತೇಜಕ ಮಾತ್ರೆ ಸೇವಿಸಿ ಆಕೆಯ ಜೊತೆ ಲೈಂಗಿಕ ಕ್ರಿಯೆ ನಡೆಸಿರುವುದಾಗಿ ತಪ್ಪನ್ನು ಒಪ್ಪಿಕೊಂಡಿರುತ್ತಾನೆ.
ಆಕೆಗೆ ಚಿಕಿತ್ಸೆ ನೀಡಿದ ಸ್ತ್ರೀರೋಗ ತಜ್ಞರು ಮಹಿಳೆ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗುವಷ್ಟು ದೌರ್ಜನ್ಯಕ್ಕೆ ಒಳಗಾಗಿದ್ದಾಳೆ ಎಂದು ಹೇಳಿರುತ್ತಾರೆ.
ಮೊದಲ ರಾತ್ರಿಯಂದು ಗಂಡ ನಡೆಸಿದ ಲೈಂಗಿಕ ಕ್ರಿಯೆಯಿಂದ ಮಹಿಳೆಯ ಖಾಸಗಿ ಭಾಗದಲ್ಲಿ ಆಗಿರುವ ಗಾಯಗಳು ಸೋಂಕಿಗೆ ಕಾರಣವಾಗಿ ಚಿಕಿತ್ಸೆ ಫಲಿಸದೆ ಫೆಬ್ರವರಿ 10ರಂದು ಆಸ್ಪತ್ರೆಯಲ್ಲಿ ಮಹಿಳೆ ಮೃತಪಟ್ಟಿರುತ್ತಾಳೆ.
ಮೊದಲ ರಾತ್ರಿಯಂದು ಗಂಡ ಕಾಮೋತೇಜಕ ಮಾತ್ರೆ ಸೇವಿಸಿ ಲೈಂಗಿಕ ದೌರ್ಜನ್ಯ ಎಸಗಿದ ಪರಿಣಾಮ ಮಹಿಳೆ ಮದುವೆಯಾದ ಒಂದೇ ವಾರಕ್ಕೆ ಮೃತಪಟ್ಟಿದ್ದಾಳೆ.
ಇಂಜಿನಿಯರ್ ಗಂಡ ಮನೆಗೆ ಬೀಗ ಹಾಕಿಕೊಂಡು ಪೋಷಕರೊಂದಿಗೆ ಪರಾಗಿದ್ದು, ಮಹಿಳೆ ಸಹೋದರ ಹಾಗೂ ಸಂಬಂಧಿಕರು ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿರುತ್ತಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…