Latest

ಮೊದಲ ರಾತ್ರಿ ಮಾತ್ರೆ ಸೇವಿಸಿ ರೊಚ್ಚಿಗೆದ್ದ ಗಂಡ; ಕೆಲವೇ ದಿನಗಳಲ್ಲಿ ಪ್ರಾಣ ಬಿಟ್ಟಳು ಹೆಂಡತಿ!

ಉತ್ತರ ಪ್ರದೇಶದ ಹಮೀರ್ ಪುರದಲ್ಲಿ ಇಂಜಿನಿಯರ್ ಒಬ್ಬ ಮೊದಲ ರಾತ್ರಿಯಲ್ಲಿ ಕಾಮೋತೇಜಕ ಮಾತ್ರೆಗಳನ್ನು ಸೇವಿಸಿ, ಮದವೇರಿದವನಂತೆ ಪತ್ನಿಯ ಮೇಲೆ ಎರಗಿದ ಪರಿಣಾಮ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದೆ.

ಮಹಿಳೆಯ ಪೋಷಕರು ಯಾರು ಇಲ್ಲದ ಕಾರಣ ಸರ್ಕಾರಿ ಹುದ್ದೆಯಲ್ಲಿರುವ ಆಕೆಯ ಸಹೋದರ ಹಾಗೂ ಸಂಬಂಧಿಕರೇ ಮುಂದೆ ನಿಂತು ಫೆಬ್ರವರಿ 3ರಂದು ಇಂಜಿನಿಯರ್ ನ ಜೊತೆ ಆಕೆಯ ಮದುವೆಯನ್ನು ಮಾಡಿಸಿರುತ್ತಾರೆ. ಫೆಬ್ರವರಿ 4ರಂದು ಮಹಿಳೆ ಅತ್ತೆಯ ಮನೆ ಸೇರುತ್ತಾಳೆ.
ಮೊದಲ ರಾತ್ರಿಯಂದು ಕಾಮೋತೇಜಕ ಮಾತ್ರೆಗಳನ್ನು ಸೇವಿಸಿದ ಇಂಜಿನಿಯರ್ ವರ, ವಧುವಿನ ಮೇಲೆ ಲೈಂಗಿಕ ದೌರ್ಜನ್ಯವನ್ನು ನಡೆಸಿದ್ದಾನೆ. ಇದರ ಪರಿಣಾಮವಾಗಿ ತೀವ್ರ ಗಾಯಗೊಂಡ ಆಕೆಯನ್ನು ಫೆಬ್ರವರಿ 7ರಂದು ಆಸ್ಪತ್ರೆಗೆ ದಾಖಲಿಸುತ್ತಾರೆ.
ಕಾನ್ಪುರದ ಖಾಸಗಿ ನರ್ಸಿಂಗ್ ಹೋಂ ಗೆ ಆಕೆಯನ್ನು ಕರೆದೊಯ್ಯಲಾಗಿದ್ದು ಆಕೆ ತೀವ್ರ ಅಸ್ವಸ್ಥಗೊಂಡಿದ್ದು, ಮಹಿಳಾ ಸ್ಥಿತಿ ತೀವ್ರ ಹದಗೆಟ್ಟಿರುತ್ತದೆ ಅದನ್ನು ನೋಡಿದ ಗಂಡ ಕಾಮೋತೇಜಕ ಮಾತ್ರೆ ಸೇವಿಸಿ ಆಕೆಯ ಜೊತೆ ಲೈಂಗಿಕ ಕ್ರಿಯೆ ನಡೆಸಿರುವುದಾಗಿ ತಪ್ಪನ್ನು ಒಪ್ಪಿಕೊಂಡಿರುತ್ತಾನೆ.
ಆಕೆಗೆ ಚಿಕಿತ್ಸೆ ನೀಡಿದ ಸ್ತ್ರೀರೋಗ ತಜ್ಞರು ಮಹಿಳೆ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗುವಷ್ಟು ದೌರ್ಜನ್ಯಕ್ಕೆ ಒಳಗಾಗಿದ್ದಾಳೆ ಎಂದು ಹೇಳಿರುತ್ತಾರೆ.
ಮೊದಲ ರಾತ್ರಿಯಂದು ಗಂಡ ನಡೆಸಿದ ಲೈಂಗಿಕ ಕ್ರಿಯೆಯಿಂದ ಮಹಿಳೆಯ ಖಾಸಗಿ ಭಾಗದಲ್ಲಿ ಆಗಿರುವ ಗಾಯಗಳು ಸೋಂಕಿಗೆ ಕಾರಣವಾಗಿ ಚಿಕಿತ್ಸೆ ಫಲಿಸದೆ ಫೆಬ್ರವರಿ 10ರಂದು ಆಸ್ಪತ್ರೆಯಲ್ಲಿ ಮಹಿಳೆ ಮೃತಪಟ್ಟಿರುತ್ತಾಳೆ.
ಮೊದಲ ರಾತ್ರಿಯಂದು ಗಂಡ ಕಾಮೋತೇಜಕ ಮಾತ್ರೆ ಸೇವಿಸಿ ಲೈಂಗಿಕ ದೌರ್ಜನ್ಯ ಎಸಗಿದ ಪರಿಣಾಮ ಮಹಿಳೆ ಮದುವೆಯಾದ ಒಂದೇ ವಾರಕ್ಕೆ ಮೃತಪಟ್ಟಿದ್ದಾಳೆ.
ಇಂಜಿನಿಯರ್ ಗಂಡ ಮನೆಗೆ ಬೀಗ ಹಾಕಿಕೊಂಡು ಪೋಷಕರೊಂದಿಗೆ ಪರಾಗಿದ್ದು, ಮಹಿಳೆ ಸಹೋದರ ಹಾಗೂ ಸಂಬಂಧಿಕರು ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿರುತ್ತಾರೆ.

ಭ್ರಷ್ಟರ ಬೇಟೆ

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

8 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

8 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

8 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

9 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

9 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

1 day ago