ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಇಂಚಲ ಗ್ರಾಮದಲ್ಲಿ, ಶಮಾ ರಿಯಾಜ್ ಪಠಾಣ್ (25) ಎಂಬ ಮೊದಲ ಹೆಂಡತಿಯನ್ನು ಪತಿ ರಿಯಾಜ್ ಪಠಾಣ್ (30) ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ.
ಘಟನೆ ವಿವರ:
ರಿಯಾಜ್, ಒಂದೂವರೆ ವರ್ಷಗಳ ಹಿಂದೆ ಫರ್ಜಾನಾ ಪಠಾಣ್ ಎಂಬ ಮಹಿಳೆಯನ್ನು ಗುಟ್ಟಾಗಿ ಮದುವೆಯಾಗಿದ್ದ. ಈ ಬಗ್ಗೆ ಗೊತ್ತಾದ ಶಮಾ, ಗಂಡನಿಂದ ತನ್ನೊಂದಿಗೆ ಇರಲು ಒತ್ತಾಯಿಸುತ್ತಿದ್ದಳು. ಕೆಲ ದಿನಗಳ ಹಿಂದೆ ಶಮಾ, ಎರಡನೇ ಹೆಂಡತಿಯನ್ನು ತ್ಯಜಿಸುವಂತೆ ಹೇಳಿದಾಗ, ಕೋಪಗೊಂಡ ರಿಯಾಜ್, ಈ ವಿಷಯವನ್ನು ಫರ್ಜಾನಾ ಮುಂದೆ ಹೇಳಿಕೊಂಡಿದ್ದನು. ಫರ್ಜಾನಾ, ಶಮಾಳನ್ನು ಕೊಲೆ ಮಾಡುವಂತೆ ಸಲಹೆ ನೀಡಿದ್ದಾಳೆ.
ಕೌಟುಂಬಿಕ ಸಂಘರ್ಷದ ನಡುವೆ, ಶಮಾ ಮಲಗಿದ್ದ ವೇಳೆ ರಿಯಾಜ್ ಕಲ್ಲು ಎತ್ತಿಹಾಕಿ ಬರ್ಬರವಾಗಿ ಆಕೆಯ ಹತ್ಯೆಗೈದಿದ್ದಾನೆ. ನಂತರ ತನ್ನ ಗಂಡು ಮಗನನ್ನು ತೆಗೆದುಕೊಂಡು, ಎರಡನೇ ಹೆಂಡತಿಯೊಂದಿಗೆ ಊರು ಬಿಟ್ಟು ಪರಾರಿಯಾಗಿದ್ದಾನೆ.
ಪೊಲೀಸರು ಮತ್ತು ಮುಂದಿನ ಕ್ರಮ:
ಮುರಗೋಡ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ರಿಯಾಜ್ ಮತ್ತು ಫರ್ಜಾನಾಳಿಗಾಗಿ ಹುಡುಕಾಟ ಮುಂದುವರಿಸಿದ್ದಾರೆ. ಈ ನಡುವೆ, ಶಮಾಳ ಶವವನ್ನು ಮರಣೋತ್ತರ ಪರೀಕ್ಷೆಯ ನಂತರ ಕುಟುಂಬಕ್ಕೆ ಹಸ್ತಾಂತರಿಸಿ, ಬೆಳಗಾವಿಯ ಸ್ಮಶಾನದಲ್ಲಿ ಅಂತ್ಯಸಂಸ್ಕಾರ ನಡೆಸಲಾಗಿದೆ.
ಈ ದಾರುಣ ಘಟನೆಯಲ್ಲಿ, ಮೂರು ಮಕ್ಕಳ ಪೈಕಿ ಎರಡು ಹೆಣ್ಣು ಮಕ್ಕಳು ಅನಾಥರಾಗಿದ್ದು, ಪಾಪಿ ತಂದೆ ಕೇವಲ ಗಂಡು ಮಗನನ್ನು ಮಾತ್ರ ಕರೆದುಕೊಂಡು ಹೋಗಿದ್ದಾನೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…