Crime

ಮಗಳ ಮೇಲೆ ಕಣ್ಣು ಹಾಕಿದ ಪತಿಯ ಮರ್ಮಾಂಗ ಜಜ್ಜಿದ ಪತ್ನಿ!

ತಮ್ಮ ಮಗಳ ಮೇಲೆಯೇ ಕಣ್ಣು ಹಾಕಿದ ವ್ಯಕ್ತಿಯನ್ನು ಅವನ ಇಬ್ಬರು ಪತ್ನಿಯರು ಸೇರಿ ಕೊಲೆಗೈದ ಘಟನೆ ತೆಲಂಗಾಣದ ಸೂರ್ಯಪೇಟಾ ಜಿಲ್ಲೆಯ ಚಿವ್ವೆನ್ಲಾ ತಾಲ್ಲೂಕಿನ ಹಳ್ಳಿಯಲ್ಲಿ ಸೋಮವಾರ ನಸುಕಿನ ಜಾವ ನಡೆದಿದೆ.
ಕೊಲೆಯಾದ ವ್ಯಕ್ತಿ 43 ವರ್ಷದ ಚಾಲಕನಾಗಿದ್ದು, ಹಲವು ವರ್ಷಗಳ ಹಿಂದೆ ನಲ್ಗೊಂಡ ಜಿಲ್ಲೆಯ ಯುವತಿಯನ್ನು ಮದುವೆಯಾಗಿದ್ದ. ದಂಪತಿಗೆ ಇಬ್ಬರು ಹೆಣ್ಣು ಮಕ್ಕಳು ಜನಿಸಿದ್ದರು. ಗಂಡು ಮಗುವಿನ ಮೊಹದಲ್ಲಿ, ತನ್ನ ಪತ್ನಿಯ ತಂಗಿಯೊಂದಿಗೆ ಮದುವೆಯಾಗಿದ್ದು, ಅವಳಿಗೆ ಗಂಡು ಮಗು ಜನಿಸಿದ ನಂತರ ಎಲ್ಲರೂ ಒಟ್ಟಾಗಿ ನೆಲೆಸಿದ್ದ ಕುಟುಂಬ.
ಕೆಲವು ತಿಂಗಳ ಹಿಂದೆ ತನ್ನ ಮೊದಲ ಪತ್ನಿಯ ಕಿರಿ ಮಗಳು ಅನಾರೋಗ್ಯಕ್ಕೆ ತುತ್ತಾಗಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಳು. ಮಗಳ ಸಾವಿನ ನಂತರ ಆರೋಪಿ ಮದ್ಯದ ಚಟಕ್ಕೆ ದಾಸನಾಗಿದ್ದ. ನಂತರ, ಇಬ್ಬರು ಪತ್ನಿಯರಿಗೆ ಮಾನಸಿಕ, ದೈಹಿಕ ಹಿಂಸೆ ನೀಡಲು ಪ್ರಾರಂಭಿಸಿದ. ಇದರಿಂದ ಪತ್ನಿಯರು ಸಾಕಷ್ಟು ಮನನೊಂದಿದ್ದರು. ಹಿರಿ ಮಗಳ ಜೊತೆ ಅಸಭ್ಯವಾಗಿ ವರ್ತಿಸಲು ಆರಂಭಿಸಿದ್ದಾನೆ. ದಿನ ಕಳೆದಂತೆ ಆಕೆಗೆ ಲೈಂಗಿಕ ಕಿರುಕುಳ ನೀಡಲೂ ಶುರು ಮಾಡಿದ್ದಾನೆ.
ಹೈದರಾಬಾದ್ನಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಹಿರಿ ಮಗಳು ಸಂಕ್ರಾಂತಿ ಹಬ್ಬದ ಸಮಯದಲ್ಲಿ ಊರಿಗೆ ಬಂದಿದ್ದಳು. ಮಗಳೊಂದಿಗೆ ತಂದೆ ಅಸಭ್ಯವಾಗಿ ವರ್ತಿಸಲು ಆರಂಭಿಸಿದನು. ಪತ್ನಿಯರು ಈ ಕ್ರಮ ತಪ್ಪು ಎಂದು ಹೇಳಿದರೂ, ಆರೋಪಿ ತನ್ನ ಹಳೆ ನಡವಳಿಕೆಯನ್ನು ಬದಲಾಯಿಸಲು ಇಚ್ಛಿಸಲಿಲ್ಲ. ಇದರ ಪರಿಣಾಮವಾಗಿ, ತಾಯಿ ಮತ್ತು ಮಗಳು ಆತ್ಮಹತ್ಯೆಗೆ ತೀರ್ಮಾನಿಸಿದರು.
ಆದರೆ, ಆ ಸಮಯದಲ್ಲಿ, ತಂದೆ ಮತ್ತೊಮ್ಮೆ ಮಗಳೊಂದಿಗೆ ಅಸಭ್ಯವಾಗಿ ವರ್ತಿಸಿದಾಗ, ಕೋಪಗೊಂಡ ಇಬ್ಬರು ಪತ್ನಿಯರು ಪತಿಯ ಮರ್ಮಾಂಗಕ್ಕೆ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದಾರೆ. ಪೊಲೀಸರು ಘಟನ ಸ್ಥಳಕ್ಕೆ ಆಗಮಿಸಿ ಪ್ರಾಥಮಿಕ ಮಾಹಿತಿ ಸಂಗ್ರಹಿಸಿ ತನಿಖೆ ಆರಂಭಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

10 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

10 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

10 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

10 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

11 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

1 day ago