ತಮ್ಮ ಮಗಳ ಮೇಲೆಯೇ ಕಣ್ಣು ಹಾಕಿದ ವ್ಯಕ್ತಿಯನ್ನು ಅವನ ಇಬ್ಬರು ಪತ್ನಿಯರು ಸೇರಿ ಕೊಲೆಗೈದ ಘಟನೆ ತೆಲಂಗಾಣದ ಸೂರ್ಯಪೇಟಾ ಜಿಲ್ಲೆಯ ಚಿವ್ವೆನ್ಲಾ ತಾಲ್ಲೂಕಿನ ಹಳ್ಳಿಯಲ್ಲಿ ಸೋಮವಾರ ನಸುಕಿನ ಜಾವ ನಡೆದಿದೆ.
ಕೊಲೆಯಾದ ವ್ಯಕ್ತಿ 43 ವರ್ಷದ ಚಾಲಕನಾಗಿದ್ದು, ಹಲವು ವರ್ಷಗಳ ಹಿಂದೆ ನಲ್ಗೊಂಡ ಜಿಲ್ಲೆಯ ಯುವತಿಯನ್ನು ಮದುವೆಯಾಗಿದ್ದ. ದಂಪತಿಗೆ ಇಬ್ಬರು ಹೆಣ್ಣು ಮಕ್ಕಳು ಜನಿಸಿದ್ದರು. ಗಂಡು ಮಗುವಿನ ಮೊಹದಲ್ಲಿ, ತನ್ನ ಪತ್ನಿಯ ತಂಗಿಯೊಂದಿಗೆ ಮದುವೆಯಾಗಿದ್ದು, ಅವಳಿಗೆ ಗಂಡು ಮಗು ಜನಿಸಿದ ನಂತರ ಎಲ್ಲರೂ ಒಟ್ಟಾಗಿ ನೆಲೆಸಿದ್ದ ಕುಟುಂಬ.
ಕೆಲವು ತಿಂಗಳ ಹಿಂದೆ ತನ್ನ ಮೊದಲ ಪತ್ನಿಯ ಕಿರಿ ಮಗಳು ಅನಾರೋಗ್ಯಕ್ಕೆ ತುತ್ತಾಗಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಳು. ಮಗಳ ಸಾವಿನ ನಂತರ ಆರೋಪಿ ಮದ್ಯದ ಚಟಕ್ಕೆ ದಾಸನಾಗಿದ್ದ. ನಂತರ, ಇಬ್ಬರು ಪತ್ನಿಯರಿಗೆ ಮಾನಸಿಕ, ದೈಹಿಕ ಹಿಂಸೆ ನೀಡಲು ಪ್ರಾರಂಭಿಸಿದ. ಇದರಿಂದ ಪತ್ನಿಯರು ಸಾಕಷ್ಟು ಮನನೊಂದಿದ್ದರು. ಹಿರಿ ಮಗಳ ಜೊತೆ ಅಸಭ್ಯವಾಗಿ ವರ್ತಿಸಲು ಆರಂಭಿಸಿದ್ದಾನೆ. ದಿನ ಕಳೆದಂತೆ ಆಕೆಗೆ ಲೈಂಗಿಕ ಕಿರುಕುಳ ನೀಡಲೂ ಶುರು ಮಾಡಿದ್ದಾನೆ.
ಹೈದರಾಬಾದ್ನಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಹಿರಿ ಮಗಳು ಸಂಕ್ರಾಂತಿ ಹಬ್ಬದ ಸಮಯದಲ್ಲಿ ಊರಿಗೆ ಬಂದಿದ್ದಳು. ಮಗಳೊಂದಿಗೆ ತಂದೆ ಅಸಭ್ಯವಾಗಿ ವರ್ತಿಸಲು ಆರಂಭಿಸಿದನು. ಪತ್ನಿಯರು ಈ ಕ್ರಮ ತಪ್ಪು ಎಂದು ಹೇಳಿದರೂ, ಆರೋಪಿ ತನ್ನ ಹಳೆ ನಡವಳಿಕೆಯನ್ನು ಬದಲಾಯಿಸಲು ಇಚ್ಛಿಸಲಿಲ್ಲ. ಇದರ ಪರಿಣಾಮವಾಗಿ, ತಾಯಿ ಮತ್ತು ಮಗಳು ಆತ್ಮಹತ್ಯೆಗೆ ತೀರ್ಮಾನಿಸಿದರು.
ಆದರೆ, ಆ ಸಮಯದಲ್ಲಿ, ತಂದೆ ಮತ್ತೊಮ್ಮೆ ಮಗಳೊಂದಿಗೆ ಅಸಭ್ಯವಾಗಿ ವರ್ತಿಸಿದಾಗ, ಕೋಪಗೊಂಡ ಇಬ್ಬರು ಪತ್ನಿಯರು ಪತಿಯ ಮರ್ಮಾಂಗಕ್ಕೆ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದಾರೆ. ಪೊಲೀಸರು ಘಟನ ಸ್ಥಳಕ್ಕೆ ಆಗಮಿಸಿ ಪ್ರಾಥಮಿಕ ಮಾಹಿತಿ ಸಂಗ್ರಹಿಸಿ ತನಿಖೆ ಆರಂಭಿಸಿದ್ದಾರೆ.
ಬಾಗಲಕೋಟೆ: ಹೊಸ ಪೊಲೀಸ್ ಠಾಣೆಗೆ ಕರ್ತವ್ಯಕ್ಕೆ ಹಾಜರಾಗಲು ಹೊರಟಿದ್ದ ಎಎಸ್ಐ ಒಬ್ಬರು ಮಾರ್ಗಮಧ್ಯೆಯೇ ಹೃದಯಾಘಾತದಿಂದ ಸಾವನ್ನಪ್ಪಿರುವ ದುರ್ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ…
ಧಾರವಾಡ: ಪತ್ನಿ ದೈಹಿಕವಾಗಿ ದಪ್ಪಗಿದ್ದಾಳೆ ಎಂಬ ಕಾರಣಕ್ಕೆ ಪತಿಯೊಬ್ಬ ಆಕೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಅಮಾನುಷ ಘಟನೆ ಧಾರವಾಡ ಜಿಲ್ಲೆಯ…
ರಾಮನಗರ: ತಾಲೂಕಿನ ಸಂಗಬಸವನದೊಡ್ಡಿ ಗ್ರಾಮದಲ್ಲಿ ಹಣ ಕೇಳಲು ಬಂದಿದ್ದ ವೃದ್ಧೆಯನ್ನು ಕೊಲೆ ಮಾಡಿ, ಶವವನ್ನು ರೈಲ್ವೆ ಹಳಿ ಬಳಿ ಎಸೆದಿದ್ದ…
ನವದೆಹಲಿ: ಸೌತೆಕಾಯಿ ಕೃಷಿ ಯೋಜನೆಗಾಗಿ ಸುಮಾರು 99 ಲಕ್ಷ ರೂ. ಸರ್ಕಾರಿ ಸಬ್ಸಿಡಿ ಪಡೆದಿರುವ ಕೇಂದ್ರ ಕೃಷಿ ಮತ್ತು ರೈತರ…
ಮುಂಬೈ: ನಟಿ ಆಕಾಂಕ್ಷಾ ಚಮೋಲಾ ಅವರು ಲಾಕ್ ಅಪ್ ಸೀಸನ್ 2 ಕಾರ್ಯಕ್ರಮದಲ್ಲಿ ತಮ್ಮ ವೈಯಕ್ತಿಕ ಜೀವನದ ಕುರಿತು ಆಘಾತಕಾರಿ…
ಬೆಂಗಳೂರು: ರಾಜ್ಯ ಸರ್ಕಾರ ಆಡಳಿತಾತ್ಮಕ ಪುನರ್ವ್ಯವಸ್ಥೆಯ ಭಾಗವಾಗಿ ಸ್ಥಳ ನಿಯುಕ್ತಿ ನಿರೀಕ್ಷೆಯಲ್ಲಿದ್ದ ನಾಲ್ವರು ಐಎಎಸ್ ಅಧಿಕಾರಿಗಳನ್ನು ವಿವಿಧ ಪ್ರಮುಖ ಹುದ್ದೆಗಳಿಗೆ…