Crime

ಮಗಳ ಮೇಲೆ ಕಣ್ಣು ಹಾಕಿದ ಪತಿಯ ಮರ್ಮಾಂಗ ಜಜ್ಜಿದ ಪತ್ನಿ!

ತಮ್ಮ ಮಗಳ ಮೇಲೆಯೇ ಕಣ್ಣು ಹಾಕಿದ ವ್ಯಕ್ತಿಯನ್ನು ಅವನ ಇಬ್ಬರು ಪತ್ನಿಯರು ಸೇರಿ ಕೊಲೆಗೈದ ಘಟನೆ ತೆಲಂಗಾಣದ ಸೂರ್ಯಪೇಟಾ ಜಿಲ್ಲೆಯ ಚಿವ್ವೆನ್ಲಾ ತಾಲ್ಲೂಕಿನ ಹಳ್ಳಿಯಲ್ಲಿ ಸೋಮವಾರ ನಸುಕಿನ ಜಾವ ನಡೆದಿದೆ.
ಕೊಲೆಯಾದ ವ್ಯಕ್ತಿ 43 ವರ್ಷದ ಚಾಲಕನಾಗಿದ್ದು, ಹಲವು ವರ್ಷಗಳ ಹಿಂದೆ ನಲ್ಗೊಂಡ ಜಿಲ್ಲೆಯ ಯುವತಿಯನ್ನು ಮದುವೆಯಾಗಿದ್ದ. ದಂಪತಿಗೆ ಇಬ್ಬರು ಹೆಣ್ಣು ಮಕ್ಕಳು ಜನಿಸಿದ್ದರು. ಗಂಡು ಮಗುವಿನ ಮೊಹದಲ್ಲಿ, ತನ್ನ ಪತ್ನಿಯ ತಂಗಿಯೊಂದಿಗೆ ಮದುವೆಯಾಗಿದ್ದು, ಅವಳಿಗೆ ಗಂಡು ಮಗು ಜನಿಸಿದ ನಂತರ ಎಲ್ಲರೂ ಒಟ್ಟಾಗಿ ನೆಲೆಸಿದ್ದ ಕುಟುಂಬ.
ಕೆಲವು ತಿಂಗಳ ಹಿಂದೆ ತನ್ನ ಮೊದಲ ಪತ್ನಿಯ ಕಿರಿ ಮಗಳು ಅನಾರೋಗ್ಯಕ್ಕೆ ತುತ್ತಾಗಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಳು. ಮಗಳ ಸಾವಿನ ನಂತರ ಆರೋಪಿ ಮದ್ಯದ ಚಟಕ್ಕೆ ದಾಸನಾಗಿದ್ದ. ನಂತರ, ಇಬ್ಬರು ಪತ್ನಿಯರಿಗೆ ಮಾನಸಿಕ, ದೈಹಿಕ ಹಿಂಸೆ ನೀಡಲು ಪ್ರಾರಂಭಿಸಿದ. ಇದರಿಂದ ಪತ್ನಿಯರು ಸಾಕಷ್ಟು ಮನನೊಂದಿದ್ದರು. ಹಿರಿ ಮಗಳ ಜೊತೆ ಅಸಭ್ಯವಾಗಿ ವರ್ತಿಸಲು ಆರಂಭಿಸಿದ್ದಾನೆ. ದಿನ ಕಳೆದಂತೆ ಆಕೆಗೆ ಲೈಂಗಿಕ ಕಿರುಕುಳ ನೀಡಲೂ ಶುರು ಮಾಡಿದ್ದಾನೆ.
ಹೈದರಾಬಾದ್ನಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಹಿರಿ ಮಗಳು ಸಂಕ್ರಾಂತಿ ಹಬ್ಬದ ಸಮಯದಲ್ಲಿ ಊರಿಗೆ ಬಂದಿದ್ದಳು. ಮಗಳೊಂದಿಗೆ ತಂದೆ ಅಸಭ್ಯವಾಗಿ ವರ್ತಿಸಲು ಆರಂಭಿಸಿದನು. ಪತ್ನಿಯರು ಈ ಕ್ರಮ ತಪ್ಪು ಎಂದು ಹೇಳಿದರೂ, ಆರೋಪಿ ತನ್ನ ಹಳೆ ನಡವಳಿಕೆಯನ್ನು ಬದಲಾಯಿಸಲು ಇಚ್ಛಿಸಲಿಲ್ಲ. ಇದರ ಪರಿಣಾಮವಾಗಿ, ತಾಯಿ ಮತ್ತು ಮಗಳು ಆತ್ಮಹತ್ಯೆಗೆ ತೀರ್ಮಾನಿಸಿದರು.
ಆದರೆ, ಆ ಸಮಯದಲ್ಲಿ, ತಂದೆ ಮತ್ತೊಮ್ಮೆ ಮಗಳೊಂದಿಗೆ ಅಸಭ್ಯವಾಗಿ ವರ್ತಿಸಿದಾಗ, ಕೋಪಗೊಂಡ ಇಬ್ಬರು ಪತ್ನಿಯರು ಪತಿಯ ಮರ್ಮಾಂಗಕ್ಕೆ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದಾರೆ. ಪೊಲೀಸರು ಘಟನ ಸ್ಥಳಕ್ಕೆ ಆಗಮಿಸಿ ಪ್ರಾಥಮಿಕ ಮಾಹಿತಿ ಸಂಗ್ರಹಿಸಿ ತನಿಖೆ ಆರಂಭಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಮೋದಿ ಭೇಟಿ ಮುನ್ನ ಜಿಲೆಟಿನ್-ಟೈಮರ್ ಪತ್ತೆ! ಉಗ್ರ ಸಂಚೋ? ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿಗೆ ಮುನ್ನವೇ ಮಾರ್ಗದ ಸಮೀಪ ಜಿಲೆಟಿನ್ ಕಡ್ಡಿ ಪತ್ತೆಯಾಗಿದ್ದ ಘಟನೆ ಹೊಸ ಆತಂಕಕ್ಕೆ…

23 hours ago

ಕಿರುತೆರೆ-ಬೆಳ್ಳಿತೆರೆಗೆ ಶಾಕ್‌: ನಟ ದಿಲೀಪ್‌ ರಾಜ್ ಹೃದಯಾಘಾತದಿಂದ ನಿಧನ

ಕನ್ನಡ ಕಿರುತೆರೆ ಹಾಗೂ ಸಿನಿಮಾರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ನಟ, ನಿರ್ಮಾಪಕ ಮತ್ತು ಕಂಠದಾನ ಕಲಾವಿದ ದಿಲೀಪ್‌ ರಾಜ್…

1 day ago

ಭೂದಾಖಲೆಗಳ ನಕಲು ಶುಲ್ಕ ಪರಿಷ್ಕರಣೆ: ಸರ್ಕಾರದಿಂದ ಹೊಸ ಏಕರೂಪದ ದರ ಜಾರಿ

ಭೂಮಾಪನ ಇಲಾಖೆಯಲ್ಲಿ ಲಭ್ಯವಿರುವ ವಿವಿಧ ಮೂಲ ದಾಖಲೆಗಳ ನಕಲುಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಾದ ಶುಲ್ಕವನ್ನು ರಾಜ್ಯ ಸರ್ಕಾರ ಪರಿಷ್ಕರಿಸಿದೆ. ವಿವಿಧ…

2 days ago

ಮದರಸಾದಿಂದ 24 ಮಕ್ಕಳು ಪರಾರಿ! ತುಮಕೂರಿನಲ್ಲಿ ಬಯಲಾಯ್ತು ಅಮಾನವೀಯ ಹಿಂಸೆ

ತುಮಕೂರು ಜಿಲ್ಲೆಯ ಮದರಸಾವೊಂದರಲ್ಲಿ ಅಪ್ರಾಪ್ತ ಮಕ್ಕಳ ಮೇಲೆ ಅಮಾನವೀಯ ದೌರ್ಜನ್ಯ ಮತ್ತು ಬಾಲಕಾರ್ಮಿಕ ಶೋಷಣೆ ನಡೆಸಲಾಗುತ್ತಿದ್ದ ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ…

2 days ago

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

3 days ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

3 days ago