ಕಾಡಂಚಿನ ಹೆಡಿಯಾಲ ಸಮೀಪದ ಅಳಲಹಳ್ಳಿ ಚೈನ್ ಗೇಟ್ ಬಳಿ ಘಟನೆ ನಂಜನಗೂಡು: ಅರಣ್ಯ ಇಲಾಖೆ ಸಿಬ್ಬಂದಿಗಳ ಎಡವಟ್ಟಿಗೆ ಜೆಸಿಬಿ ಯಂತ್ರವೊಂದು ಸುಟ್ಟು ಕರಕಲಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹೆಡಿಯಾಲ ಸಮೀಪದ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಅರಣ್ಯ ಪ್ರದೇಶದ ಚೈನ್ ಗೇಟ್ ಬಳಿ ನಡೆದಿದೆ. ಐತಿಹಾಸಿಕ ಧಾರ್ಮಿಕ ಕ್ಷೇತ್ರ ಶ್ರೀ ಬೇಲದಕುಪ್ಪೆ ಮಹದೇಶ್ವರ ದೇವಾಲಯಕ್ಕೆ ತೆರಳುವ ಮಾರ್ಗದಲ್ಲಿ ಘಟನೆ ನಡೆದಿದೆ. ಆನೆಕಂದಕ ನಿರ್ಮಾಣ ಕಾಮಗಾರಿ ನಡೆಸಲು ಜೆಸಿಬಿ ಯಂತ್ರ ಬಳಸಲಾಗುತ್ತಿದ್ದು ಅನಾರೋಗ್ಯದ ನಿಮಿತ್ತ ಜೆಸಿಬಿ ಚಾಲಕ ಜೆಸಿಬಿ ನಿಲ್ಲಿಸಿ ಆಸ್ಪತ್ರೆಗೆ ತೆರಳಿದ್ದರೆಂದು ಹೇಳಲಾಗಿದೆ. ಈ ವೇಳೆ ಕುರುಚಲು ಸಸ್ಯಗಳ ನಿರ್ಮೂಲನೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿಗಳು ಬೆಂಕಿ ಹಚ್ಚಿದ್ದಾರೆ. ಕುರುಚಲು ಸಸ್ಯಗಳಿಗೆ ಹಚ್ಚಿದ್ದ ಬೆಂಕಿ ಪಸರಿಸಿದ ಹಿನ್ನೆಲೆ ಸಮೀಪದಲ್ಲಿದ್ದ ಜೆಸಿಬಿ ಯಂತ್ರದ ಟಯರ್ ಮತ್ತು ಎಂಜಿನ್ ಗೆ ತಗುಲಿದೆ. ಬೆಂಕಿ ತಗುಲಿದ ಕೆಲವೇ ಸಮಯದಲ್ಲಿ ಜೆಸಿಬಿ ಯಂತ್ರ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಂಪೂರ್ಣ ಸುಟ್ಟು ಕರುಕಲಾಗಿದೆ.
ಅರಣ್ಯ ಇಲಾಖೆಯು ಅರಣ್ಯ ಪ್ರದೇಶಕ್ಕೆ ಪ್ರವೇಶಿಸಲು ನಿರ್ಭಂದ ಹೇರಿರುವ ಕಾರಣ ಸ್ಥಳಕ್ಕೆ ತುರ್ತಾಗಿ ಅಗ್ನಿಶಾಮಕ ವಾಹನವೂ ಸಹ ತಲುಪಲು ಸಾಧ್ಯವಾಗಿಲ್ಲವೆಂದು ಹೇಳಲಾಗಿದೆ. ಒಟ್ಟಾರೆ ಅರಣ್ಯ ಇಲಾಖೆ ಸಿಬ್ಬಂದಿಗಳ ಎಡವಟ್ಟಿಗೆ ಖಾಸಗಿ ವ್ಯಕ್ತಿಗೆ ಸೇರಿದ ಲಕ್ಷಾಂತರ ರೂಪಾಯಿಯ ಜೆಸಿಬಿ ಯಂತ್ರ ಸುಟ್ಟುಕರಕಲಾಗಿ ಕೇವಲ ಅವಶೇಷವಾಗಿ ಮಾತ್ರ ಉಳಿದಿದೆ. ವರದಿ: ಮೋಹನ್
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…