Latest

ಅರಣ್ಯ ಸಿಬ್ಬಂದಿಗಳ ಎಡವಟ್ಟಿಗೆ ಸುಟ್ಟು ಕರಕಲಾದ ಜೆಸಿಬಿ ಯಂತ್ರ.!

ಕಾಡಂಚಿನ ಹೆಡಿಯಾಲ ಸಮೀಪದ ಅಳಲಹಳ್ಳಿ ಚೈನ್ ಗೇಟ್ ಬಳಿ ಘಟನೆ ನಂಜನಗೂಡು: ಅರಣ್ಯ ಇಲಾಖೆ ಸಿಬ್ಬಂದಿಗಳ ಎಡವಟ್ಟಿಗೆ ಜೆಸಿಬಿ ಯಂತ್ರವೊಂದು ಸುಟ್ಟು ಕರಕಲಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹೆಡಿಯಾಲ ಸಮೀಪದ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಅರಣ್ಯ ಪ್ರದೇಶದ ಚೈನ್ ಗೇಟ್ ಬಳಿ ನಡೆದಿದೆ. ಐತಿಹಾಸಿಕ ಧಾರ್ಮಿಕ ಕ್ಷೇತ್ರ ಶ್ರೀ ಬೇಲದಕುಪ್ಪೆ ಮಹದೇಶ್ವರ ದೇವಾಲಯಕ್ಕೆ ತೆರಳುವ ಮಾರ್ಗದಲ್ಲಿ ಘಟನೆ ನಡೆದಿದೆ. ಆನೆಕಂದಕ ನಿರ್ಮಾಣ ಕಾಮಗಾರಿ ನಡೆಸಲು ಜೆಸಿಬಿ ಯಂತ್ರ ಬಳಸಲಾಗುತ್ತಿದ್ದು ಅನಾರೋಗ್ಯದ ನಿಮಿತ್ತ ಜೆಸಿಬಿ ಚಾಲಕ ಜೆಸಿಬಿ ನಿಲ್ಲಿಸಿ ಆಸ್ಪತ್ರೆಗೆ ತೆರಳಿದ್ದರೆಂದು ಹೇಳಲಾಗಿದೆ. ಈ ವೇಳೆ ಕುರುಚಲು ಸಸ್ಯಗಳ ನಿರ್ಮೂಲನೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿಗಳು ಬೆಂಕಿ ಹಚ್ಚಿದ್ದಾರೆ. ಕುರುಚಲು ಸಸ್ಯಗಳಿಗೆ ಹಚ್ಚಿದ್ದ ಬೆಂಕಿ ಪಸರಿಸಿದ ಹಿನ್ನೆಲೆ ಸಮೀಪದಲ್ಲಿದ್ದ ಜೆಸಿಬಿ ಯಂತ್ರದ ಟಯರ್ ಮತ್ತು ಎಂಜಿನ್ ಗೆ ತಗುಲಿದೆ. ಬೆಂಕಿ ತಗುಲಿದ ಕೆಲವೇ ಸಮಯದಲ್ಲಿ ಜೆಸಿಬಿ ಯಂತ್ರ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಂಪೂರ್ಣ ಸುಟ್ಟು ಕರುಕಲಾಗಿದೆ.
ಅರಣ್ಯ ಇಲಾಖೆಯು ಅರಣ್ಯ ಪ್ರದೇಶಕ್ಕೆ ಪ್ರವೇಶಿಸಲು ನಿರ್ಭಂದ ಹೇರಿರುವ ಕಾರಣ ಸ್ಥಳಕ್ಕೆ ತುರ್ತಾಗಿ ಅಗ್ನಿಶಾಮಕ ವಾಹನವೂ ಸಹ ತಲುಪಲು ಸಾಧ್ಯವಾಗಿಲ್ಲವೆಂದು ಹೇಳಲಾಗಿದೆ. ಒಟ್ಟಾರೆ ಅರಣ್ಯ ಇಲಾಖೆ ಸಿಬ್ಬಂದಿಗಳ ಎಡವಟ್ಟಿಗೆ ಖಾಸಗಿ ವ್ಯಕ್ತಿಗೆ ಸೇರಿದ ಲಕ್ಷಾಂತರ ರೂಪಾಯಿಯ ಜೆಸಿಬಿ ಯಂತ್ರ ಸುಟ್ಟುಕರಕಲಾಗಿ ಕೇವಲ ಅವಶೇಷವಾಗಿ ಮಾತ್ರ ಉಳಿದಿದೆ. ವರದಿ: ಮೋಹನ್

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago