National

ರಾಜ್ಯದಲ್ಲೇ ಅತಿದೊಡ್ಡ ಡ್ರಗ್ಸ್ ಜಾಲ ಪತ್ತೆ: ₹75 ಕೋಟಿ ಮೌಲ್ಯದ ಎಂಡಿಎಂಎ ವಶ, ದಕ್ಷಿಣ ಆಫ್ರಿಕಾ ಮಹಿಳೆಯರ ಬಂಧನ

ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಡ್ರಗ್ಸ್ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಭೇದಿಸಿದ್ದು, ಈ ಪ್ರಕರಣದಲ್ಲಿ ದಕ್ಷಿಣ ಆಫ್ರಿಕಾ ಮೂಲದ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ 37.5 ಕೆಜಿ ತೂಕದ ಎಂಡಿಎಂಎ ಮಾದಕ ವಸ್ತು ವಶಪಡಿಸಿಕೊಂಡಿದ್ದು, ಇದರ ಮೌಲ್ಯ ₹74 ಕೋಟಿ ಎಂದು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

ಆರು ತಿಂಗಳಿಗೊಂದು ಭಾರೀ ಕಾರ್ಯಾಚರಣೆ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಬಾ ಫಾಂಟಾ (31) ಹಾಗೂ ಅಬಿಗೈಲ್ ಅಡೋನಿಸ್ (30) ಎಂಬ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದ್ದು, ಕಳೆದ ಆರು ತಿಂಗಳಿನಿಂದ ಈ ಜಾಲವನ್ನು ಭೇದಿಸುವ ಕಾರ್ಯಾಚರಣೆ ನಡೆಯುತ್ತಿತ್ತು ಎಂದು ವಿವರಿಸಿದರು.

ಈ ಕಾರ್ಯಾಚರಣೆಯ ಪ್ರಾರಂಭವು ಮಂಗಳೂರು ಪಂಪ್‌ವೆಲ್ ಬಳಿಯ ಲಾಡ್ಜ್‌ನಲ್ಲಿ ಹೈದರ್ ಅಲಿ ಎಂಬವನ ಬಂಧನದಿಂದ ಆರಂಭವಾಯಿತು. ಆತನಿಂದ 15 ಗ್ರಾಂ ಮಾದಕ ವಸ್ತು ವಶಪಡಿಸಿಕೊಂಡು, ಆತನ ವಿಚಾರಣೆಯಿಂದಾಗಿ ದೊಡ್ಡ ಮಾದಕ ವಸ್ತು ಜಾಲ ಪತ್ತೆಯಾಯಿತು. ಪ್ರಕರಣವನ್ನು ಸಿಸಿಬಿ ಪೊಲೀಸ್‌ರಿಗೆ ಹಸ್ತಾಂತರಿಸಿ, ಆರು ತಿಂಗಳ ಪಟ್ಟಿ ಮೇಲ್ವಿಚಾರಣೆಯ ನಂತರ, ಬೆಂಗಳೂರು ಮತ್ತು ದೆಹಲಿಯಲ್ಲಿಯೂ ಕಾರ್ಯಾಚರಣೆ ನಡೆಸಲಾಯಿತು.

ನೈಜೀರಿಯಾ ಮೂಲದ ಪೀಟರ್ ಬಂಧನ

ಇದರಡಿ ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರದಲ್ಲಿ ನೈಜೀರಿಯಾ ಪ್ರಜೆ ಪೀಟರ್‌ನನ್ನು ಬಂಧಿಸಲಾಗಿತ್ತು. ಆತನಿಂದ 6 ಕೆಜಿ ಎಂಡಿಎಂಎ ವಶಪಡಿಸಿಕೊಂಡು, ವಿಚಾರಣೆ ಮುಂದುವರಿಸಿದಾಗ ದೆಹಲಿಯಿಂದ ಬಂದಿದ್ದ ಇಬ್ಬರು ಮಹಿಳೆಯರು ಮಾದಕ ವಸ್ತು ಸಾಗಾಟದಲ್ಲಿ ತೊಡಗಿದ್ದಾರೆ ಎಂಬುದು ಪತ್ತೆಯಾಯಿತು. ಈ ಮಾಹಿತಿ ಮೇರೆಗೆ ಇವರನ್ನು ಬಂಧಿಸಿ 37.878 ಕೆಜಿ ಎಂಡಿಎಂಎ ವಶಪಡಿಸಿಕೊಳ್ಳಲಾಯಿತು.

ಆರೋಪಿಗಳಿಂದ ವಶಪಡಿಸಿಕೊಂಡ ವಸ್ತುಗಳು

  • 37.878 ಕೆಜಿ ಎಂಡಿಎಂಎ (ಮೌಲ್ಯ ₹75 ಕೋಟಿ)
  • 4 ಮೊಬೈಲ್ ಫೋನ್‌ಗಳು
  • 2 ಪಾಸ್‌ಪೋರ್ಟ್‌ಗಳು
  • ಟ್ರಾಲಿ ಬ್ಯಾಗ್‌
  • ₹18,460 ನಗದು

ಮಾದಕ ವಸ್ತು ಸಾಗಾಟದ ಜಾಲ

ಬಂಧಿತ ಮಹಿಳೆಯರು ದೆಹಲಿಯಿಂದ ಮಾದಕ ವಸ್ತುಗಳನ್ನು ತಂದಿದ್ದು, ಬೆಂಗಳೂರಿನಲ್ಲಿ ನೆಲೆಸಿದ ನೈಜೀರಿಯಾ ಪ್ರಜೆಗಳ ಮೂಲಕ ದೇಶದ ವಿವಿಧೆಡೆ ವಿತರಿಸುತ್ತಿದ್ದರು. ಈ ಜಾಲದಲ್ಲಿ ವಿಮಾನ ನಿಲ್ದಾಣ ಸಿಬ್ಬಂದಿಯೂ ಶಾಮೀಲಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಅಂತಾರಾಜ್ಯ ಮಾಫಿಯಾದ ಮತ್ತೊಬ್ಬ ಬಂಧನ

ಇದೇ ಸಂದರ್ಭದಲ್ಲಿ ಕೊಣಾಜೆ ಹಾಗೂ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತ್ತೊಬ್ಬ ಡ್ರಗ್ಸ್ ಮಾಫಿಯಾ ಲೀಡರ್ ಅಬ್ದುಲ್ ಫೈಜಲ್ ಅಲಿಯಾಸ್ ಫೈಜು (26) ಬಂಧನ ಗೊಂಡಿದ್ದಾನೆ. ಮಂಜೇಶ್ವರ, ಕಾಸರಗೋಡು ಮೂಲದ ಈತ ಡ್ರಗ್ಸ್ ಜಾಲದ ಕಿಂಗ್‌ಪಿನ್ ಆಗಿದ್ದು, ತಲೆಮರೆಸಿಕೊಂಡಿದ್ದನು.

ಆರೋಪಿಯಿಂದ ವಶಪಡಿಸಿಕೊಂಡ ವಸ್ತುಗಳು:

  • 1 ಪಿಸ್ತೂಲ್
  • 1 ಸಜೀವ ಮದ್ದುಗುಂಡು
  • 1 ಮೊಬೈಲ್ ಫೋನ್

ಈತನ ವಿರುದ್ಧ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಎರಡು ಹಲ್ಲೆ ಪ್ರಕರಣಗಳು ಈಗಾಗಲೇ ದಾಖಲಾಗಿದ್ದವು.

ಪೊಲೀಸ್ ಅಧಿಕಾರಿಗಳ ಪ್ರತಿಕ್ರಿಯೆ

ಈ ಭಾರಿ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಹಾಗೂ ಉಪ ಪೊಲೀಸ್ ಆಯುಕ್ತರಾದ ಸಿದ್ದಾರ್ಥ ಗೋಯಲ್, ಕೆ. ರವಿಶಂಕರ್, ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ, ಇನ್‌ಸ್ಪೆಕ್ಟರ್ ರಫೀಕ್ ಕೆ.ಎಂ., ಪಿಎಸ್‌ಐ ಸುದೀಪ್ ಎಂ.ವಿ. ಮತ್ತು ಶರಣಪ್ಪ ಭಂಡಾ ಸೇರಿ ಹಲವರು ಭಾಗವಹಿಸಿದ್ದರು.

ಈ ಜಾಲವನ್ನು ಇನ್ನಷ್ಟು ಭೇದಿಸಲು ಪೊಲೀಸರು ಮುಂದಿನ ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

8 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

13 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

13 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

13 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

13 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

18 hours ago